ಕೇಂದ್ರ ಸಚಿವ ವಿ.ಕೆ. ಸಿಂಗ್ 
ಪ್ರಧಾನ ಸುದ್ದಿ

ಕೇಂದ್ರ ಸಚಿವ ವಿಕೆ ಸಿಂಗ್ ವಿರುದ್ಧ ದೂರು

ದಲಿತರ ಕುರಿತಾದ ಅವಹೇಳನಕಾರಿ ಹೇಳಿಕೆ ನೀಡಿರುವ ಕೇಂದ್ರ ಸಚಿವ ವಿ.ಕೆ. ಸಿಂಗ್ ವಿರುದ್ಧ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ...

ಬೆಂಗಳೂರು: ದಲಿತರ ಕುರಿತಾದ ಅವಹೇಳನಕಾರಿ ಹೇಳಿಕೆ ನೀಡಿರುವ ಕೇಂದ್ರ ಸಚಿವ ವಿ.ಕೆ. ಸಿಂಗ್ ವಿರುದ್ಧ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಯುವ ಕಾಂಗ್ರೆಸ್  ಉಪಾಧ್ಯಕ್ಷ ಆನಂದ್ ಅವರು ದೂರು ನೀಡಿದ್ದು, ಕೇಂದ್ರ ಸಚಿವರಾಗಿರುವ ವಿ.ಕೆ. ಸಿಂಗ್ ಅವರ ಹೇಳಿಕೆ ದಲಿತರನ್ನು ಅವಮಾನಿಸಿದ್ದು, ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಅವರು ತಮ್ಮ ಹೇಳಿಕೆಯನ್ನು ವಾಪಸ್ ಪಡೆದು ದೇಶದ ಜನತೆಯ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದರು.

ಪ್ರಕರಣ ಹೊರ ರಾಜ್ಯದಲ್ಲಿ ನಡೆದಿರುವ ಕಾರಣ ದೂರು ತೆಗೆದುಕೊಂಡು ಹಿಂಬರಹ ನೀಡಲಾಗಿದೆ ಎಂದು ಹೈ ಗ್ರೌಂಡ್ಸ್ ಪೊಲೀಸರು ತಿಳಿಸಿದ್ದಾರೆ. ಹರಿಯಾಣದಲ್ಲಿ ದಲಿತ ಮಕ್ಕಳ  ಹತ್ಯೆ ಕುರಿತಂತೆ ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವ ವಿ.ಕೆ.ಸಿಂಗ್, ಎಲ್ಲೋ ನಾಯಿಗೆ ಕಲ್ಲು ಹೊಡೆದರೆ ಕೇಂದ್ರವನ್ನು ದೂಷಿಸುವುದು ಸರಿಯಲ್ಲ. ಇಂತಹ ವಿಚಾರಗಳು ಸ್ಥಳೀಯ ಆಡಳಿತದ ಜವಾಬ್ದಾರಿಯಾಗಿರುತ್ತದೆ ಎಂದು ಹೇಳಿಕೆ ನೀಡಿದ್ದರು. ಸಿಂಗ್ ಅವರ ಹೇಳಿಕೆ ರಾಷ್ಟ್ರಾದ್ಯಂತ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

ಸಂಭಾಲ್ ದೇವಸ್ಥಾನದಿಂದ ಸಾಯಿಬಾಬಾ ವಿಗ್ರಹಕ್ಕೆ ಗೇಟ್ ಪಾಸ್! ಗಂಗಾ ನದಿಯಲ್ಲಿ ವಿಸರ್ಜನೆ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

SCROLL FOR NEXT