ಕ್ರಿಕೆಟಿಗ ಅಮಿತ್ ಮಿಶ್ರಾ (ಸಂಗ್ರಹ ಚಿತ್ರ) 
ಪ್ರಧಾನ ಸುದ್ದಿ

ಗೆಳತಿ ಮೇಲೆ ಹಲ್ಲೆ: ಕ್ರಿಕೆಟಿಗ ಅಮಿತ್ ಮಿಶ್ರಾ ಬಂಧನ, ಬಿಡುಗಡೆ

ಬಾಲಿವುಡ್ ಚಿತ್ರ ನಿರ್ಮಾಪಕಿ, ಗೆಳತಿ ವಂದನಾ ಜೈನ್ ಅವರ ಮೇಲೆ ದೈಹಿಕ ಹಲ್ಲೆ ನಡೆಸಿದ ಆರೋಪದ ಮೇಲೆ ಕ್ರಿಕೆಟಿಗ ಅಮಿತ್ ಮಿಶ್ರಾ ಅವರನ್ನು ಪೊಲೀಸರು ಬಂಧಿಸಿ, ಕೆಲ ಹೊತ್ತಿನ ವಿಚಾರಣೆ ಬಳಿಕ ಬಿಡುಗಡೆ ಮಾಡಿದ್ದಾರೆ ಎಂದು ತಿಳಿದುಬಂದಿದೆ...

ಬೆಂಗಳೂರು: ಬಾಲಿವುಡ್ ಚಿತ್ರ ನಿರ್ಮಾಪಕಿ, ಗೆಳತಿ ವಂದನಾ ಜೈನ್ ಅವರ ಮೇಲೆ ದೈಹಿಕ ಹಲ್ಲೆ ನಡೆಸಿದ ಆರೋಪದ ಮೇಲೆ ಕ್ರಿಕೆಟಿಗ ಅಮಿತ್ ಮಿಶ್ರಾ ಅವರನ್ನು ಪೊಲೀಸರು ಬಂಧಿಸಿ, ಕೆಲ ಹೊತ್ತಿನ ವಿಚಾರಣೆ  ಬಳಿಕ ಬಿಡುಗಡೆ ಮಾಡಿದ್ದಾರೆ ಎಂದು ತಿಳಿದುಬಂದಿದೆ.

ತಮ್ಮ ಮೇಲೆ ಕ್ರಿಕೆಟಿಗ ಅಮಿತ್ ಮಿಶ್ರಾ ಹಲ್ಲೆ ಮಾಡಿದ್ದಾರೆ ಎಂದು ಬಾಲಿವುಡ್ ನ ಚಿತ್ರ ನಿರ್ಮಾಪಕಿ ವಂದನಾ ಜೈನ್ ಅವರು ಆರೋಪಿಸಿದ್ದರು. ಅಲ್ಲದೆ ಈ ಬಗ್ಗೆ ಬೆಂಗಳೂರಿನ ಅಶೋಕ್ ನಗರ  ಪೊಲೀಸ್ ಠಾಣೆಯಲ್ಲಿ ದೂರು ಕೂಡ ನೀಡಿದ್ದರು. ಈ ಹಿನ್ನಲೆಯಲ್ಲಿ ಇಂದು ಕಬ್ಬನ್ ಪಾರ್ಕ್ ಪೊಲೀಸರು ಕ್ರಿಕೆಟಿಗ ಅಮಿತ್ ಮಿಶ್ರಾ ಅವರನ್ನು ಬಂಧಿಸಿ ಠಾಣೆಗೆ ಕರೆತಂದಿದ್ದರು.

ಮಿಶ್ರಾ ವಿರುದ್ಧ ಐಪಿಸಿ ಸೆಕ್ಷನ್ 323, 324 ಮತ್ತು 354ಎ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಸತತ 3 ಗಂಟೆಗಳ ವಿಚಾರಣೆಗಳ ಬಳಿಕ ಅವರನ್ನು ಬಂಧಿಸಿದ ಪೊಲೀಸರು, ಠಾಣಾ ಜಾಮೀನು  ಮಂಜೂರು ಮಾಡಿ ಪ್ರಸ್ತುತ ಅವರನ್ನು ಬಿಡುಗಡೆ ಮಾಡಿದ್ದಾರೆ.

ಕಳೆದ ಸೆಪ್ಟೆಂಬರ್ 25ರಂದು ರಿಟ್ಜ್ ಕಾರ್ಲ್ಟನ್ ಹೊಟೆಲ್ ಗೆ ಅಮಿತ್ ಮಿಶ್ರಾ ಮತ್ತು ಅವರ ಗೆಳತಿ ವಂದನಾ ಜೈನ್ ಅವರು ಆಗಮಿಸಿದ್ದರು . ರಾತ್ರಿ ಮಿಶ್ರಾ ಮತ್ತು ವಂದನಾ ಜೈನ್ ನಡುವೆ  ವೈಯುಕ್ತಿಕ ಕಾರಣಕ್ಕಾಗಿ ವಾಗ್ವಾದ ನಡೆದಿದ್ದು, ಮಿಶ್ರಾ ವಂದನಾರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ, ದೈಹಿಕವಾಗಿ ಹಲ್ಲೆ ಮಾಡಿದ್ದರು ಎಂದು ವಂದನಾ ಆರೋಪಿಸಿದ್ದರು. ಅಲ್ಲದೆ ಈ ಬಗ್ಗೆ  ಸೆ.27ರಂದು ಅಶೋಕ್ ನಗರ ಠಾಣೆಯಲ್ಲಿ ದೂರು ಕೂಡ ದಾಖಲಿಸಿದ್ದರು.

ಈ ಬಗ್ಗೆ ದೂರು ದಾಖಲಿಸಿಕೊಂಡಿದ್ದ ಪೊಲೀಸರು ವಿಚಾರಣೆಗೆ ಹಾಜರಾಗುವಂತೆ ಈ ಹಿಂದೆ ಅಮಿತ್ ಮಿಶ್ರಾ ಅವರಿಗೆ  ನೋಟಿಸ್ ಜಾರಿಮಾಡಿದ್ದರು. ಈ ಹಿನ್ನಲೆಯಲ್ಲಿ ಇಂದು ಮಿಶ್ರಾ ವಿಚಾರಣೆಗೆ ಹಾಜರಾಗಿದ್ದರು. ನಿರ್ಮಾಪಕಿ ವಂದನಾ ಜೈನ್ ಕೋಲ್ಕತಾ ನೈಟ್ ರೈಡರ್ಸ್ ತಂಡದಲ್ಲಿನ ಷೇರುದಾರರು ಕೂಡ  ಆಗಿದ್ದಾರೆ ಎಂಬ ಮಾಹಿತಿ ಕೇಳಿಬರುತ್ತಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT