ಆರೋಪಿಗಳಾದ ಮಧು, ಹರೀಶ್ ಬಾಬು 
ಪ್ರಧಾನ ಸುದ್ದಿ

ಜಗದೀಶ್ ಹತ್ಯೆ ಪ್ರಕರಣ: ಆರೋಪಿಗಳಿಗೆ ನೆರವು ನೀಡಿದ್ದ ಹನುಮಂತರಾಮು ಬಂಧನ

ದೊಡ್ಡಬಳ್ಳಾಪುರ ನಗರ ಠಾಣೆ ಪಿಎಸ್‌ಐ ಜಗದೀಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳವಾರ ಪೊಲೀಸರು ಮತ್ತೊಬ್ಬ...

ಬೆಂಗಳೂರು: ದೊಡ್ಡಬಳ್ಳಾಪುರ ನಗರ ಠಾಣೆ ಪಿಎಸ್‌ಐ ಜಗದೀಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳವಾರ ಪೊಲೀಸರು ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದಾರೆ.

ಜಗದೀಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿಗಳಾದ ಮಧು ಹಾಗೂ ಹರೀಶ್ ಬಾಬುಗೆ ಸಹಾಯ ಮಾಡುತ್ತಿದ್ದ ಹನುಮಂತರಾಮುನನ್ನು ಪೊಲೀಸರು ಇಂದು ಕರ್ನೂಲ್ ನಲ್ಲಿ ಬಂಧಿಸಿದ್ದು, ಆತನಿಂದ ಜಗದೀಶ್ ಅವರ ಪಿಸ್ತೂಲ್, ಮೊಬೈಲ್ ಹಾಗೂ ಎಲೆಕ್ಟ್ರಾನಿಕ್ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ಬಂಧಿತ ಆರೋಪಿಗಳಾದ ಮಧು ಹಾಗೂ ಹರೀಶ್  ಬಾಬು ಹೇಳಿಕೆ ಆಧರಿಸಿ ಆಂಧ್ರಪ್ರದೇಶದ ಕರ್ನೂಲಿಗೆ ತೆರಳಿದ್ದ ಪೊಲೀಸರು, ಇಂದು  ಚಿನ್ನಾಭರಣ ವ್ಯಾಪಾರಿ ಹನುಮಂತರಾಮು ಎಂಬಾತನ ವಶಕ್ಕೆ ಪಡೆದಿದ್ದಾರೆ.

ಅಕ್ಟೋಬರ್ 16ರಂದು ಜಗದೀಶ್ ರನ್ನು ಹತ್ಯೆ ಮಾಡಿ ತಲೆ ಮರೆಸಿಕೊಂಡಿದ್ದ ಹರೀಶ್ ಬಾಬು (48) ಮತ್ತು ಮಧು (26) ಅವರನ್ನು ಮಹಾರಾಷ್ಟ್ರ ಕ್ರೈಂ ಬ್ರಾಂಚ್ ಪೊಲೀಸರು ನಾಗಪುರ ರೈಲು ನಿಲ್ದಾಣದಲ್ಲಿ ಬಂಧಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT