ಜಿ.ಪರಮೇಶ್ವರ - ವಿನಯ್ ಕುಲಕರ್ಣಿ 
ಪ್ರಧಾನ ಸುದ್ದಿ

ಪರಮೇಶ್ವರಗೆ ಗೃಹ, ವಿನಯ್ ಕುಲಕರ್ಣಿಗೆ ಅಬಕಾರಿ ಖಾತೆ ನೀಡುವ ಸಾಧ್ಯತೆ

ಉಪ ಮುಖ್ಯಮಂತ್ರಿ ಸ್ಥಾನಕ್ಕೆ ಪಟ್ಟು ಹಿಡಿದಿದ್ದ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ ಅವರಿಗೆ ಗೃಹ ಖಾತೆ ನೀಡುವ ಸಾಧ್ಯತೆ ಇದೆ.

ಬೆಂಗಳೂರು: ಉಪ ಮುಖ್ಯಮಂತ್ರಿ ಸ್ಥಾನಕ್ಕೆ ಪಟ್ಟು ಹಿಡಿದಿದ್ದ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ ಅವರಿಗೆ ಗೃಹ ಖಾತೆ ನೀಡುವ ಸಾಧ್ಯತೆ ಇದೆ.

ಡಿಸಿಎಂ ಸ್ಥಾನ ಪಡೆಯುವಲ್ಲಿ ವಿಫಲವಾಗಿದ್ದ ಪರಮೇಶ್ವರ ಅವರು, ಗೃಹ ಖಾತೆ ಅಥವಾ ಬೆಂಗಳೂರು ಅಭಿವೃದ್ಧಿ ಖಾತೆಗೆ ಬೇಡಿಕೆ ಇಟ್ಟಿದ್ದರು. ಇದೀಗ ಗೃಹ ಸಚಿವರಾಗಿರುವ ಕೆ.ಜೆ.ಜಾರ್ಜ್ ಅವರಿಗೆ ಬೆಂಗಳೂರು ಅಭಿವೃದ್ಧಿ ಖಾತೆ ನೀಡಿ, ಅವರ ಬಳಿ ಇರುವ ಗೃಹ ಖಾತೆಯನ್ನು ಪರಮೇಶ್ವರ ಅವರಿಗೆ ನೀಡಲು ಹೈಕಮಾಂಡ್ ನಿರ್ಧರಿಸಿದೆ ಎನ್ನಲಾಗಿದೆ.

ಇನ್ನು ಫೆಬ್ರುವರಿ 2016ರವರೆಗೆ ವಿಧಾನ ಪರಿಷತ್ ಮತ್ತು ಜಿಲ್ಲಾ ಪಂಚಾಯತ್ ಚುನಾವಣೆ ಮುಗಿಯುವವರೆಗೆ ಪರಮೇಶ್ವರ ಅವರೇ ಕೆಪಿಸಿಸಿ ಅಧ್ಯಕ್ಷರಾಗಿ ಮುಂದುವರೆಯಲಿದ್ದಾರೆ.

ಇನ್ನುಳಿದಂತೆ ನೂತನ ಸಚಿವರಾಗಿ ಸಿದ್ದರಾಮಯ್ಯ ಸಂಪುಟ ಸೇರುತ್ತಿರುವ ವಿನಯ್ ಕುಲಕರ್ಣಿ ಅವರಿಗೆ ಅಬಕಾರಿ, ಎ.ಮಂಜು ಅವರಿಗೆ ಪ್ರವಾಸೋದ್ಯಮ ಹಾಗೂ ಮನೋಹರ್ ತಹಶಿಲ್ದಾರ್ ಅವರಿಗೆ ಪೌರಾಡಳಿತ ಖಾತೆ ನೀಡುವ ಸಾಧ್ಯತೆ ಇದೆ.

ಈ ನಾಲ್ವರು ಶಾಸಕರು ಇಂದು ಮಧ್ಯಾಹ್ನ 4.30ಕ್ಕೆ ರಾಜಭವನದಲ್ಲಿ ನಡೆಯುವ ಸರಳ ಸಮಾರಂಭದಲ್ಲಿ ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT