ಸುಧೀಂದ್ರ ಕುಲಕರ್ಣಿ 
ಪ್ರಧಾನ ಸುದ್ದಿ

ಕಸೂರಿ ಪುಸ್ತಕ ಬಿಡುಗಡೆಗಾಗಿ ಪಾಕ್‌ಗೆ ಸುಧೀಂದ್ರ ಕುಲಕರ್ಣಿ ಭೇಟಿ

ಪಾಕಿಸ್ತಾನದ ಮಾಜಿ ವಿದೇಶಾಂಗ ಸಚಿವ ಖುರ್ಷಿದ್‌ ಮೆಹಮೂದ್‌ ಕಸೂರಿ ಅವರ ಪುಸ್ತಕ ಬಿಡುಗಡೆ ಸಂದರ್ಭ ಮುಂಬಯಿಯಲ್ಲಿ ಶಿವಸೇನಾ...

ಮುಂಬಯಿ: ಪಾಕಿಸ್ತಾನದ ಮಾಜಿ ವಿದೇಶಾಂಗ ಸಚಿವ ಖುರ್ಷಿದ್‌ ಮೆಹಮೂದ್‌ ಕಸೂರಿ ಅವರ ಪುಸ್ತಕ ಬಿಡುಗಡೆ ಸಂದರ್ಭ ಮುಂಬಯಿಯಲ್ಲಿ ಶಿವಸೇನಾ ಕಾರ್ಯಕರ್ತರಿಂದ ಮಸಿ ದಾಳಿಗೆ ಒಳಗಾಗಿದ್ದ ಮಾಜಿ ಉಪ ಪ್ರಧಾನಿ ಎಲ್ ಕೆ.ಆಡ್ವಾಣಿ ಅವರ ಮಾಜಿ ಆಪ್ತ ಸುಧೀಂದ್ರ ಕುಲಕರ್ಣಿ ಅವರು ಅದೇ ಪುಸ್ತಕ ಬಿಡುಗೆಗಾಗಿ ಪಾಕಿಸ್ತಾನಕ್ಕೆ ಭೇಟಿ ನೀಡುತ್ತಿದ್ದಾರೆ.

ನಾನು ಕಸೂರಿ ಅವರ ಆಹ್ವಾನವನ್ನು ಸ್ವೀಕರಿಸಿದ್ದು ,ನವೆಂಬರ್‌ 2 ರಂದು ಕರಾಚಿಯಲ್ಲಿ ನಡೆಯಲಿರುವ 'ನೈದರ್‌ ಎ ಹಾಕ್‌, ನಾರ್‌ ಎ ಡವ್‌: ಆ್ಯನ್‌ ಇನಸೈಡರ್ ಅಕೌಂಟ್‌ ಆಫ್ ಪಾಕಿಸ್ತಾನ್ಸ್‌ ಫಾರಿನ್‌ ಪಾಲಿಸಿ' ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿರುವುದಾಗಿ ಟಿವಿ ಕಾರ್ಯಕ್ರಮವೊಂದರಲ್ಲಿ ಕುಲಕರ್ಣಿ ಹೇಳಿದ್ದಾರೆ.

ಶಿವಸೇನೆಯ ತೀವ್ರ ವಿರೋಧದ ನಡುವೆಯೂ ಕಸೂರಿ ಅವರ 'ನೈದರ್‌ ಎ ಹಾಕ್‌, ನಾರ್‌ ಎ ಡವ್‌'  ಪುಸ್ತಕ ಅಕ್ಟೋಬರ್ 12ರಂದು ಮುಂಬಯಿಯಲ್ಲಿ ಬಿಡುಗಡೆಯಾಗಿತ್ತು. ಪುಸ್ತಕ ಬಿಡುಗಡೆ ಕಾರ್ಯಕ್ರಮ ವಿರೋಧಿಸಿ ಶಿವಸೇನೆಯ ಕೆಲವು ಕಾರ್ಯಕರ್ತರು ಕುಲಕರ್ಣಿ ಅವರ ಮುಖಕ್ಕೆ ಮಸಿ ಬಳಿದಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT