ಮುಖ್ಯಮಂತ್ರಿ ಸಿದ್ದರಾಮಯ್ಯ (ಸಂಗ್ರಹ ಚಿತ್ರ) 
ಪ್ರಧಾನ ಸುದ್ದಿ

ಗೋಮಾಂಸ ಹೇಳಿಕೆ: ಮಾತು ಬದಲಿಸಿದ ಸಿಎಂ ಸಿದ್ದರಾಮಯ್ಯ

ಈ ವರೆಗೂ ನಾನು ಗೋಮಾಂಸವನ್ನೇ ತಿಂದಿಲ್ಲ, ತಿನ್ನಬೇಕೆನಿಸಿದರೆ ತಿನ್ನುತ್ತೇನೆಂದು ಈ ಹಿಂದೆ ಹೇಳಿಕೆ ನೀಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದೀಗ ನಾನು ಆ ರೀತಿ ಹೇಳಿಲ್ಲ. ಗೋಮಾಂಸ ತಿನ್ನುತ್ತೇನೆಂದು ನಾನು ಹೇಳಿರಲಿಲ್ಲ, ಆಹಾರ ಪದ್ಧತೆ ಅವರವರ ಇಷ್ಟದ ವಿಚಾರ...

ಬೆಂಗಳೂರು: ಈ ವರೆಗೂ ನಾನು ಗೋಮಾಂಸವನ್ನೇ ತಿಂದಿಲ್ಲ, ತಿನ್ನಬೇಕೆನಿಸಿದರೆ ತಿನ್ನುತ್ತೇನೆಂದು ಈ ಹಿಂದೆ ಹೇಳಿಕೆ ನೀಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದೀಗ ನಾನು ಆ ರೀತಿ ಹೇಳಿಲ್ಲ. ಗೋಮಾಂಸ ತಿನ್ನುತ್ತೇನೆಂದು ನಾನು ಹೇಳಿರಲಿಲ್ಲ, ಆಹಾರ ಪದ್ಧತೆ ಅವರವರ ಇಷ್ಟದ ವಿಚಾರ. ದನದ ಮಾಂಸ ತಿನ್ನುವವರು ತಿನ್ನಲಿ ಅಂತ ಹೇಳಿದ್ದೆ ಎಂದು ಭಾನುವಾರ ಹೇಳಿದ್ದಾರೆ.

ಈ ಹಿಂದೆ ಬಿಜೆಪಿಯವರ ಗೋಮಾಂಸ ಸೇವನೆ ವಿರೋಧ ನೀತಿಯನ್ನು ತೀವ್ರವಾಗಿ ಟೀಕಿಸಿದ್ದ ಸಿದ್ದರಾಮಯ್ಯ ಅವರು ಕರ್ನಾಟಕದ ಯುವ ಕಾಂಗ್ರೆಸ್ ಸಭೆಯಲ್ಲಿ ಮಾತನಾಡಿ ಗೋಮಾಂಸ ಸೇವನೆ ವಿರೋಧ ನೀತಿಯು ನಿಜಕ್ಕೂ ಅಸಂಬದ್ಧವಾದದ್ದು. ಈ ಬಗೆಗಿನ ಜನರ ವೈಯಕ್ತಿಕ ಹಕ್ಕನ್ನು ಕಿತ್ತುಕೊಳ್ಳುವ ಹಕ್ಕು ಬಿಜೆಪಿ ಅಥವಾ ಅದರ ಸಂಯೋಜಿತ, ಬೆಂಬಲಿತ ಪಕ್ಷಗಳಿಗಾಗಲಿ ಇಲ್ಲ. ಈವರೆಗೂ ನಾನು ಗೋಮಾಂಸವನ್ನು ತಿಂದಿಲ್ಲ. ಆದರೆ, ನನಗೆ ತಿನ್ನಬೇಕೆನಿಸಿದರೆ ನಾನು ತಿಂದೇ ತಿನ್ನುತ್ತೇನೆ ಎಂದು ಹೇಳಿದ್ದರು.

ಇದೀಗ ಈ ರೀತಿಯ ಹೇಳಿಕೆಯನ್ನು ನಾನು ನೀಡಿಲ್ಲ. ನಾನು ಗೋಮಾಂಸ ತಿನ್ನುತ್ತೇನೆಂದು ಹೇಳಿಯೇ ಇಲ್ಲ. ಜನರ ಆಹಾರ ಪದ್ಧತಿಯನ್ನು ಕಿತ್ತುಕೊಳ್ಳುವ ಹಕ್ಕು ಯಾರಿಗೂ ಇಲ್ಲ. ಗೋಮಾಂಸ ತಿನ್ನುವವರು ತಿನ್ನಲಿ. ನಾನು ಇಷ್ಟಪಟ್ಟರೆ ತಿನ್ನುತ್ತೇನೆ. ಇದನ್ನು ಯಾರು ಪ್ರಶ್ನಿಸುತ್ತಾರೆ ಎಂದು ಹೇಳಿದ್ದೆ ಎಂದು ಹೇಳಿದ್ದಾರೆ.

ಸಿಎಂ ಹೇಳಿಕೆ ವಿರುದ್ಧ ಹರಿಹಾಯ್ದ ಶೆಟ್ಟರ್

ಸಿದ್ದರಾಮಯ್ಯ ಅವರ ಗೋಮಾಂಸ ಹೇಳಿಕೆಯನ್ನು ವಿರೋಧಿಸಿದ್ದ ಪ್ರತಿಪಕ್ಷ ಬಿಜೆಪಿ ನಾಯಕ ಜಗದೀಶ್ ಶೆಟ್ಟರ್ ಅವರು, ಗೋಮಾಂಸ ಕುರಿತಂತೆ ಹಗುರವಾಗಿ ಹೇಳಿಕೆ ನೀಡುತ್ತಿರುವ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಧೈರ್ಯವಿದ್ದರೆ ಹಂದಿ ಮಾಂಸ ತಿನ್ನಲಿ ಎಂದು ಹೇಳಿದ್ದರು.

ಶೆಟ್ಟರ್ ಹೇಳಿಕೆಗೆ ಸಿಎಂ ತಿರುಗೇಟು
ರಾಜ್ಯದ ಹಲವು ಸಮಸ್ಯೆಗಳನ್ನು ಮುಚ್ಚಿಡುವ ಸಲುವಾಗಿ ಸಿದ್ದರಾಮಯ್ಯ ಅವರು ಈ ರೀತಿಯ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಗೋಮಾಂಸ ಹೇಳಿಕೆಯೊಂದು ಜನರ ಭಾವನೆಗಳಿಗೆ ಸಂಬಂಧಿಸಿದ್ದಾರಿಂದ ಭಾವನಾತ್ಮಕ ವಿಚಾರ ಕುರಿತಂತೆ ಸಿದ್ದರಾಮಯ್ಯ ಅವರು ಈ ರೀತಿಯ ಹೇಳಿಕೆಗಳನ್ನು ನೀಡಬಾರದು ಎಂದು ಹೇಳಿದ್ದರು.


ಶೆಟ್ಟರ್ ಅವರ ಸವಾಲಿಗೆ ಇಂದು ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಈ ವರೆಗೂ ಹಂದಿ ಮಾಂಸವನ್ನು ನಾನು ತಿಂದೇ ಇಲ್ಲ. ಇನ್ನು ಮುಂದೆ ಹಂದಿ ಮಾಂಸವನ್ನೂ ತಿನ್ನುತ್ತೇನೆಂದು ಹೇಳಿದ್ದಾರೆ.

ಬಿಜೆಪಿ ನಾಯಕರಿಗೆ ಯುಟಿ ಖಾದರ್ ತರಾಟೆ
ಗೋಮಾಂಸ ವಿಚಾರ ಕುರಿತಂತೆ ಪ್ರತಿಭಟನೆ ನಡೆಸುತ್ತಿರುವ ಬಿಜೆಪಿ ನಾಯಕರು ಕಾಳಜಿ ಇದ್ದರೆ ಗೋಮಾಂಸ ನಿಷೇಧ ಕಾಯಿದೆ ಜಾರಿಗೆ ತರಲಿ. ಕೇಂದ್ರದಲ್ಲಿ ಅವರದ್ದೇ ಸರ್ಕಾರವಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

Ranji Trophy final: ಔಕಿಬ್ ನಬಿ ಬೌಲಿಂಗ್ ಮ್ಯಾಜಿಕ್‌ಗೆ ಬೆರಗಾದ ಕೆಎಲ್ ರಾಹುಲ್; ಆರಂಭದಲ್ಲೇ ಕರ್ನಾಟಕಕ್ಕೆ ಸಂಕಷ್ಟ!

T20 World cup 2026: 'ಆಕ್ರಮಣಕಾರಿ ಶೈಲಿ ಮುಂದುವರಿಸಿ': ಜಿಂಬಾಬ್ವೆ ವಿರುದ್ಧದ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾಗೆ ಅನಿಲ್ ಕುಂಬ್ಳೆ ಎಚ್ಚರಿಕೆ

ರಿಯಲ್ ಲೈಫ್‌ನಲ್ಲೂ ಒಂದಾದ ರೀಲ್ ಜೋಡಿ: ತೆಲುಗು ಸಂಪ್ರದಾಯದಂತೆ ರಶ್ಮಿಕಾ–ವಿಜಯ್ ವಿವಾಹ, ಸಂಜೆ ಕೊಡವ ಸಂಪ್ರದಾಯದಲ್ಲಿ ಮತ್ತೊಂದು ಸಮಾರಂಭ

SCROLL FOR NEXT