ಹಿಂದಿ ಲೇಖಕ ಉದಯ್ ಪ್ರಕಾಶ್, ಚಿತ್ರಕೃಪೆ: ಫೇಸ್ಬುಕ್ ಪುಟ 
ಪ್ರಧಾನ ಸುದ್ದಿ

ಕಲ್ಬುರ್ಗಿ ಕೊಲೆ ವಿರೋಧಿಸಿ ಅಕಾಡೆಮಿ ಪ್ರಶಸ್ತಿ ಹಿಂದುರಿಗಿಸಿದ ಹಿಂದಿ ಲೇಖಕ

ಸತ್ಯ ನುಡಿಯುವುದರಿಂದ ಅಪಾಯ ಇದ್ದರೂ ಮೌನಕ್ಕೆ ಶರಣಾಗಲು ಸಾಧ್ಯವಿಲ್ಲ ಎಂದಿರುವ ಹಿಂದಿ ಸಾಹಿತಿ, ಕವಿ, ಪತ್ರಕರ್ತ ಉದಯ್ ಪ್ರಕಾಶ್ ಅವರು ಸಾಹಿತಿ ಎಂ ಎಂ ಕಲ್ಬುರ್ಗಿ

ನವದೆಹಲಿ: ಸತ್ಯ ನುಡಿಯುವುದರಿಂದ ಅಪಾಯ ಇದ್ದರೂ ಮೌನಕ್ಕೆ ಶರಣಾಗಲು ಸಾಧ್ಯವಿಲ್ಲ ಎಂದಿರುವ ಹಿಂದಿ ಸಾಹಿತಿ, ಕವಿ, ಪತ್ರಕರ್ತ ಉದಯ್ ಪ್ರಕಾಶ್ ಅವರು ಸಾಹಿತಿ ಎಂ ಎಂ ಕಲ್ಬುರ್ಗಿ ಅವರ ಕೊಲೆಯ ವಿರುದ್ಧ ಪ್ರತಿಭಟಿಸಿ ತಮ್ಮ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯನ್ನು ಹಿಂದಿರುಗಿಸುವುದಾಗಿ ಫೇಸ್ಬುಕ್ಕಿನಲ್ಲಿ ಬರೆದುಕೊಂಡಿದ್ದಾರೆ.

ದೆಹಲಿ ಜವಹರಲಾಲ್ ನೆಹರು ವಿಶ್ವವಿದ್ಯಾಲಯದ ಮಾಜಿ ಪ್ರೊಫೆಸರ್ ಉದಯ್, ಮುಂದಿನ ವಾರ ದೆಹಲಿಗೆ ಬಂದು ಸಾಹಿತ್ಯ ಅಕಾಡೆಮಿಗೆ ಪ್ರಶಸ್ತಿ ಫಲಕ ಮತ್ತು ಒಂದು ಲಕ್ಷ ರೂ ಹಿಂದಿರುಗಿಸುವುದಾಗಿ ಘೋಷಿಸಿದ್ದಾರೆ.

ಈ ಹೀನ ಕೃತ್ಯದಿಂದ ನೊಂದಿರುವುದಾಗಿ ಅವರು ತಿಳಿಸಿದ್ದಾರೆ. ತಮ್ಮ ಕಥಾ ಸಂಕಲನ 'ಮೋಹನ್ ದಾಸ್' ಕೃತಿಗಾಗಿ ಉದಯ್ ಅವರಿಗೆ ೨೦೧೦ರಲ್ಲಿ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ನೀಡಲಾಗಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಾಂವಿಧಾನಿಕ ಕರ್ತವ್ಯಗಳು ಪ್ರಜಾಪ್ರಭುತ್ವದ ಅಡಿಪಾಯ: ದೇಶದ ನಾಗರಿಕರಿಗೆ ಪ್ರಧಾನಿ ಮೋದಿ ಪತ್ರ

ಅರುಣಾಚಲ ಪ್ರದೇಶ ಭಾರತದ "ಅವಿಭಾಜ್ಯ-ಅಳಿಸಲಾಗದ" ಭಾಗ: ಚೀನಾಗೆ ಭಾರತ ತಿರುಗೇಟು

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್​ ನ್ಯೂಸ್​: ಹಳದಿ ಮಾರ್ಗದ ಸಂಚಾರ ಸೋಮವಾರ ಬೆಳಗ್ಗೆ 5 ಗಂಟೆಯಿಂದಲೇ ಶುರು..!

ಅಯೋಧ್ಯೆ ಧರ್ಮಧ್ವಜದಲ್ಲಿರುವ ಕೋವಿದಾರ ಮರ: ರಾಜವೃಕ್ಷಕ್ಕೂ, ಶ್ರೀರಾಮಚಂದ್ರನಿಗೂ ಅದೆಂಥ ನಂಟು? ತ್ರೇತಾಯುಗದಲ್ಲಿದ್ದ ದೈವಿಕ ಮರದ ವಿಶೇಷತೆ ಏನು?

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

SCROLL FOR NEXT