ಹಿಂದಿ ಲೇಖಕ ಉದಯ್ ಪ್ರಕಾಶ್, ಚಿತ್ರಕೃಪೆ: ಫೇಸ್ಬುಕ್ ಪುಟ 
ಪ್ರಧಾನ ಸುದ್ದಿ

ಕಲ್ಬುರ್ಗಿ ಕೊಲೆ ವಿರೋಧಿಸಿ ಅಕಾಡೆಮಿ ಪ್ರಶಸ್ತಿ ಹಿಂದುರಿಗಿಸಿದ ಹಿಂದಿ ಲೇಖಕ

ಸತ್ಯ ನುಡಿಯುವುದರಿಂದ ಅಪಾಯ ಇದ್ದರೂ ಮೌನಕ್ಕೆ ಶರಣಾಗಲು ಸಾಧ್ಯವಿಲ್ಲ ಎಂದಿರುವ ಹಿಂದಿ ಸಾಹಿತಿ, ಕವಿ, ಪತ್ರಕರ್ತ ಉದಯ್ ಪ್ರಕಾಶ್ ಅವರು ಸಾಹಿತಿ ಎಂ ಎಂ ಕಲ್ಬುರ್ಗಿ

ನವದೆಹಲಿ: ಸತ್ಯ ನುಡಿಯುವುದರಿಂದ ಅಪಾಯ ಇದ್ದರೂ ಮೌನಕ್ಕೆ ಶರಣಾಗಲು ಸಾಧ್ಯವಿಲ್ಲ ಎಂದಿರುವ ಹಿಂದಿ ಸಾಹಿತಿ, ಕವಿ, ಪತ್ರಕರ್ತ ಉದಯ್ ಪ್ರಕಾಶ್ ಅವರು ಸಾಹಿತಿ ಎಂ ಎಂ ಕಲ್ಬುರ್ಗಿ ಅವರ ಕೊಲೆಯ ವಿರುದ್ಧ ಪ್ರತಿಭಟಿಸಿ ತಮ್ಮ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯನ್ನು ಹಿಂದಿರುಗಿಸುವುದಾಗಿ ಫೇಸ್ಬುಕ್ಕಿನಲ್ಲಿ ಬರೆದುಕೊಂಡಿದ್ದಾರೆ.

ದೆಹಲಿ ಜವಹರಲಾಲ್ ನೆಹರು ವಿಶ್ವವಿದ್ಯಾಲಯದ ಮಾಜಿ ಪ್ರೊಫೆಸರ್ ಉದಯ್, ಮುಂದಿನ ವಾರ ದೆಹಲಿಗೆ ಬಂದು ಸಾಹಿತ್ಯ ಅಕಾಡೆಮಿಗೆ ಪ್ರಶಸ್ತಿ ಫಲಕ ಮತ್ತು ಒಂದು ಲಕ್ಷ ರೂ ಹಿಂದಿರುಗಿಸುವುದಾಗಿ ಘೋಷಿಸಿದ್ದಾರೆ.

ಈ ಹೀನ ಕೃತ್ಯದಿಂದ ನೊಂದಿರುವುದಾಗಿ ಅವರು ತಿಳಿಸಿದ್ದಾರೆ. ತಮ್ಮ ಕಥಾ ಸಂಕಲನ 'ಮೋಹನ್ ದಾಸ್' ಕೃತಿಗಾಗಿ ಉದಯ್ ಅವರಿಗೆ ೨೦೧೦ರಲ್ಲಿ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ನೀಡಲಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

'China isn't afraid': ಅಮೆರಿಕದ ಶೇ.100 ರಷ್ಟು ಸುಂಕದ ಬಗ್ಗೆ ಚೀನಿಯರ ಪ್ರತಿಕ್ರಿಯೆ!

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

SCROLL FOR NEXT