ಹಿಂದಿ ಲೇಖಕ ಉದಯ್ ಪ್ರಕಾಶ್, ಚಿತ್ರಕೃಪೆ: ಫೇಸ್ಬುಕ್ ಪುಟ 
ಪ್ರಧಾನ ಸುದ್ದಿ

ಕಲ್ಬುರ್ಗಿ ಕೊಲೆ ವಿರೋಧಿಸಿ ಅಕಾಡೆಮಿ ಪ್ರಶಸ್ತಿ ಹಿಂದುರಿಗಿಸಿದ ಹಿಂದಿ ಲೇಖಕ

ಸತ್ಯ ನುಡಿಯುವುದರಿಂದ ಅಪಾಯ ಇದ್ದರೂ ಮೌನಕ್ಕೆ ಶರಣಾಗಲು ಸಾಧ್ಯವಿಲ್ಲ ಎಂದಿರುವ ಹಿಂದಿ ಸಾಹಿತಿ, ಕವಿ, ಪತ್ರಕರ್ತ ಉದಯ್ ಪ್ರಕಾಶ್ ಅವರು ಸಾಹಿತಿ ಎಂ ಎಂ ಕಲ್ಬುರ್ಗಿ

ನವದೆಹಲಿ: ಸತ್ಯ ನುಡಿಯುವುದರಿಂದ ಅಪಾಯ ಇದ್ದರೂ ಮೌನಕ್ಕೆ ಶರಣಾಗಲು ಸಾಧ್ಯವಿಲ್ಲ ಎಂದಿರುವ ಹಿಂದಿ ಸಾಹಿತಿ, ಕವಿ, ಪತ್ರಕರ್ತ ಉದಯ್ ಪ್ರಕಾಶ್ ಅವರು ಸಾಹಿತಿ ಎಂ ಎಂ ಕಲ್ಬುರ್ಗಿ ಅವರ ಕೊಲೆಯ ವಿರುದ್ಧ ಪ್ರತಿಭಟಿಸಿ ತಮ್ಮ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯನ್ನು ಹಿಂದಿರುಗಿಸುವುದಾಗಿ ಫೇಸ್ಬುಕ್ಕಿನಲ್ಲಿ ಬರೆದುಕೊಂಡಿದ್ದಾರೆ.

ದೆಹಲಿ ಜವಹರಲಾಲ್ ನೆಹರು ವಿಶ್ವವಿದ್ಯಾಲಯದ ಮಾಜಿ ಪ್ರೊಫೆಸರ್ ಉದಯ್, ಮುಂದಿನ ವಾರ ದೆಹಲಿಗೆ ಬಂದು ಸಾಹಿತ್ಯ ಅಕಾಡೆಮಿಗೆ ಪ್ರಶಸ್ತಿ ಫಲಕ ಮತ್ತು ಒಂದು ಲಕ್ಷ ರೂ ಹಿಂದಿರುಗಿಸುವುದಾಗಿ ಘೋಷಿಸಿದ್ದಾರೆ.

ಈ ಹೀನ ಕೃತ್ಯದಿಂದ ನೊಂದಿರುವುದಾಗಿ ಅವರು ತಿಳಿಸಿದ್ದಾರೆ. ತಮ್ಮ ಕಥಾ ಸಂಕಲನ 'ಮೋಹನ್ ದಾಸ್' ಕೃತಿಗಾಗಿ ಉದಯ್ ಅವರಿಗೆ ೨೦೧೦ರಲ್ಲಿ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ನೀಡಲಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 30 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಡಿಕೆಶಿ RSS ಗೀತೆ ಹೇಳಿದ್ದೂ ರಾಹುಲ್‌ ಗಾಂಧಿಗೆ ತಲುಪಲಿ: ಶಾಕ್ ಕೊಟ್ಟ ಸತೀಶ್‌ ಜಾರಕಿಹೊಳಿ ಹೇಳಿಕೆ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

SCROLL FOR NEXT