ಹಿಂದಿ ಲೇಖಕ ಉದಯ್ ಪ್ರಕಾಶ್, ಚಿತ್ರಕೃಪೆ: ಫೇಸ್ಬುಕ್ ಪುಟ 
ಪ್ರಧಾನ ಸುದ್ದಿ

ಕಲ್ಬುರ್ಗಿ ಕೊಲೆ ವಿರೋಧಿಸಿ ಅಕಾಡೆಮಿ ಪ್ರಶಸ್ತಿ ಹಿಂದುರಿಗಿಸಿದ ಹಿಂದಿ ಲೇಖಕ

ಸತ್ಯ ನುಡಿಯುವುದರಿಂದ ಅಪಾಯ ಇದ್ದರೂ ಮೌನಕ್ಕೆ ಶರಣಾಗಲು ಸಾಧ್ಯವಿಲ್ಲ ಎಂದಿರುವ ಹಿಂದಿ ಸಾಹಿತಿ, ಕವಿ, ಪತ್ರಕರ್ತ ಉದಯ್ ಪ್ರಕಾಶ್ ಅವರು ಸಾಹಿತಿ ಎಂ ಎಂ ಕಲ್ಬುರ್ಗಿ

ನವದೆಹಲಿ: ಸತ್ಯ ನುಡಿಯುವುದರಿಂದ ಅಪಾಯ ಇದ್ದರೂ ಮೌನಕ್ಕೆ ಶರಣಾಗಲು ಸಾಧ್ಯವಿಲ್ಲ ಎಂದಿರುವ ಹಿಂದಿ ಸಾಹಿತಿ, ಕವಿ, ಪತ್ರಕರ್ತ ಉದಯ್ ಪ್ರಕಾಶ್ ಅವರು ಸಾಹಿತಿ ಎಂ ಎಂ ಕಲ್ಬುರ್ಗಿ ಅವರ ಕೊಲೆಯ ವಿರುದ್ಧ ಪ್ರತಿಭಟಿಸಿ ತಮ್ಮ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯನ್ನು ಹಿಂದಿರುಗಿಸುವುದಾಗಿ ಫೇಸ್ಬುಕ್ಕಿನಲ್ಲಿ ಬರೆದುಕೊಂಡಿದ್ದಾರೆ.

ದೆಹಲಿ ಜವಹರಲಾಲ್ ನೆಹರು ವಿಶ್ವವಿದ್ಯಾಲಯದ ಮಾಜಿ ಪ್ರೊಫೆಸರ್ ಉದಯ್, ಮುಂದಿನ ವಾರ ದೆಹಲಿಗೆ ಬಂದು ಸಾಹಿತ್ಯ ಅಕಾಡೆಮಿಗೆ ಪ್ರಶಸ್ತಿ ಫಲಕ ಮತ್ತು ಒಂದು ಲಕ್ಷ ರೂ ಹಿಂದಿರುಗಿಸುವುದಾಗಿ ಘೋಷಿಸಿದ್ದಾರೆ.

ಈ ಹೀನ ಕೃತ್ಯದಿಂದ ನೊಂದಿರುವುದಾಗಿ ಅವರು ತಿಳಿಸಿದ್ದಾರೆ. ತಮ್ಮ ಕಥಾ ಸಂಕಲನ 'ಮೋಹನ್ ದಾಸ್' ಕೃತಿಗಾಗಿ ಉದಯ್ ಅವರಿಗೆ ೨೦೧೦ರಲ್ಲಿ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ನೀಡಲಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!

ಕೊಡಗಿನಲ್ಲಿ ಭಾರಿ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು, ತಲಕಾವೇರಿಯಲ್ಲೂ ದಾಖಲೆಯ ವರ್ಷಧಾರೆ!

'ಹನೂರು ಎನ್‌ಕೌಂಟರ್': ತಮಿಳುನಾಡು ವಿಧಾನಸಭೆಯಲ್ಲಿ ಪ್ರಸ್ತಾಪಿಸಿದ ಉದಯನಿಧಿ ಸ್ಟಾಲಿನ್! ಉನ್ನತ ಮಟ್ಟದ ನ್ಯಾಯಾಂಗ ತನಿಖೆಗೆ ಆಗ್ರಹ

SIR ವೇಳೆ 1.08 ಕೋಟಿಗೂ ಅಧಿಕ ಮತದಾರರು ASDDO ಪಟ್ಟಿಗೆ: ಆಕ್ಷೇಪಣೆ ಸಲ್ಲಿಕೆ ಅವಧಿ ವಿಸ್ತರಿಸಬೇಕು- CECಗೆ ಸಿಎಂ ಶಿವಕುಮಾರ್ ಪತ್ರ!