ಹಿರಿಯ ಯೋಧರ ಅಮರಣಾಂತ ಉಪವಾಸ ಸತ್ಯಾಗ್ರಹ ಅಂತ್ಯ (ಕೃಪೆ :ಎಎನ್ಐ) 
ಪ್ರಧಾನ ಸುದ್ದಿ

ಒಆರ್ ಒಪಿ: ಹಿರಿಯ ಯೋಧರ ಅಮರಣಾಂತ ಉಪವಾಸ ಸತ್ಯಾಗ್ರಹ ಅಂತ್ಯ

ಪ್ರಧಾನಿ ನರೇಂದ್ರ ಮೋದಿ ಭಾನುವಾರ ಭರವಸೆ ಕೊಟ್ಟ ಹಿನ್ನಲೆಯಲ್ಲಿ ದೆಹಲಿಯ ಜಂತರ್ ಮಂತರ್ ನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಹಿರಿಯ ನಿವೃತ್ತ ಯೋಧರು ..

ನವದೆಹಲಿ: ಸ್ವಯಂ ನಿವೃತ್ತಿ (ವಿಆರ್ ಎಸ್) ಪಡೆದ ಯೋಧರಿಗೂ ಏಕ ಶ್ರೇಣಿ, ಏಕ ಪಿಂಚಣಿ ಅನ್ವಯವಾಗಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಭಾನುವಾರ ಭರವಸೆ ಕೊಟ್ಟ ಹಿನ್ನಲೆಯಲ್ಲಿ ದೆಹಲಿಯ ಜಂತರ್ ಮಂತರ್ ನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಹಿರಿಯ ನಿವೃತ್ತ ಯೋಧರು ತಮ್ಮ ಸತ್ಯಾಗ್ರಹವನ್ನು ಅಂತ್ಯಗೊಳಿಸಿದ್ದಾರೆ.

ಉಪವಾಸ ಸತ್ಯಾಗ್ರಹ ಅಂತ್ಯಗೊಳಿಸಿದ ಅವರು  ನಮ್ಮ ಎಲ್ಲಾ ಸಮಸ್ಯೆಗಳು ಇತ್ಯರ್ಥವಾಗುವವರೆಗೆ ಪ್ರತಿಭಟನೆಯನ್ನು ಮುಂದುವರಿಸಲಿದ್ದೇವೆ ಎಂದು ಹೇಳಿದ್ದಾರೆ.

ಏಕ ಶ್ರೇಣಿ ಏಕ ಪಿಂಚಣಿ (ಒಆರ್ ಒಪಿ) ಯೋಜನೆ ಘೋಷಣೆಯಾಗುವವರೆಗೂ ಅಮರಣಾಂತ ಉಪವಾಸ ಸತ್ಯಾಗ್ರಹ ನಡೆಸುವುದಾಗಿ ಪಣ ತೊಟ್ಟು, ಮಾಜಿ ಯೋಧರು ಸತ್ಯಾಗ್ರಹ ಆರಂಭಿಸಿದ್ದರು. ಇದೀಗ ಪ್ರಧಾನಿ ಭರವಸೆ ಹಿನ್ನೆಲೆಯಲ್ಲಿ ನಿವೃತ್ತ ಕರ್ನಲ್ ಪುಷ್ಪೇಂದರ್ ಸಿಂಗ್ ಹಾಗೂ 13 ಮಂದಿ ಉಪವಾಸ ಸತ್ಯಾಗ್ರಹ ಅಂತ್ಯಗೊಳಿಸಿ, ತಂಪು ಪಾನೀಯ ಸ್ವೀಕರಿಸಿ ಸಂತಸ ವ್ಯಕ್ತಪಡಿಸಿದ್ದಾರೆ.

ಶನಿವಾರ ಏಕ ಶ್ರೇಣಿ, ಏಕ ಪಿಂಚಣಿ ಯೋಜನೆಯನ್ನು ಕೇಂದ್ರ ರಕ್ಷಣಾ ಸಚಿವ ಮನೋಹರ್ ಪರೀಕರ್ ಘೋಷಿಸಿದ್ದರು. ನಿವೃತ್ತ ಯೋಧರ ಪ್ರತಿಭಟನೆಗೆ ಮಣಿದಿದ್ದ ಕೇಂದ್ರ ಸರ್ಕಾರ ಕೊನೆಗೂ ಯೋಜನೆ ಘೋಷಿಸಿದ್ದು, ಸಂತಸ ತಂದಿರುವುದಾಗಿ ಹೇಳಿದ ನಿವೃತ್ತ ಯೋಧರು, ಇದು ನಮಗೆ ಪೂರ್ಣ ಸಮಾಧಾನ ತಂದಿಲ್ಲ. ಕೆಲವೇ ಬೇಡಿಕೆ ಈಡೇರಿಸಿದ್ದು, ಸಂಪೂರ್ಣ ಬೇಡಿಕೆ ಈಡೇರಿಕೆಯಾಗುವವರೆಗೆ ಪ್ರತಿಭಟನೆ ಮುಂದುವರಿಯಲಿದೆ ಎಂದು ಹೇಳಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

SCROLL FOR NEXT