ದೆಹಲಿ-ಫರೀದಾಬಾದ್ ಮೆಟ್ರೋ ರೈಲು ಸಂಚಾರ ಉದ್ಘಾಟಿಸುತ್ತಿರುವ ಪ್ರಧಾನಿ ಮೋದಿ 
ಪ್ರಧಾನ ಸುದ್ದಿ

40 ವರ್ಷ ಏನೂ ಮಾಡದೇ ಇದ್ದವರಿಗೆ ಯೋಧರ ಪರವಾಗಿ ಮಾತನಾಡಲು ಹಕ್ಕಿಲ್ಲ: ಮೋದಿ

ಮಾಜಿ ಯೋಧರಿಗೆ ಈ ಮೂಲಕ ನಾವು ಗೌರವವನ್ನು ಸಲ್ಲಿಸಿದ್ದೇವೆ. ಹೆಚ್ಚಿನ ಜನರು ಇದರಲ್ಲಿ ರಾಜಕಾರಣ ಮಾಡುತ್ತಾರೆ. 40 ವರ್ಷ ಏನೂ ಮಾಡದೇ...

ನವದೆಹಲಿ: ಮಾಜಿ ಯೋಧರಿಗೆ ಈ ಮೂಲಕ ನಾವು ಗೌರವವನ್ನು ಸಲ್ಲಿಸಿದ್ದೇವೆ. ಹೆಚ್ಚಿನ ಜನರು ಇದರಲ್ಲಿ ರಾಜಕಾರಣ ಮಾಡುತ್ತಾರೆ. 40 ವರ್ಷ ಏನೂ ಮಾಡದೇ ಇದ್ದವರಿಗೆ ಈ ಬಗ್ಗೆ ಹೇಳಲು ಮತ್ತು ಯೋಧರ ಪರವಾಗಿ ಮಾತನಾಡಲು ಹಕ್ಕಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಭಾನುವಾರ ದೆಹಲಿಯ ಬದಾರ್ಪುರ್ನಿಂದ ಎಸ್ಕೋರ್ಟ್ಸ್ ಮುಜೇಸರ್ (ಫರೀದಾಬಾದ್) ನಡುವಿನ ಮೆಟ್ರೋ ರೈಲು ಸಂಚಾರವನ್ನು ಉದ್ಘಾಟಿಸಿ ಮಾತನಾಡಿದ ಅವರು
ಹರ್ಯಾಣದ ಚುನಾವಣಾ ಪ್ರಚಾರದ ವೇಳೆ ನಾನು ಏಕ ಶ್ರೇಣಿ ಏಕ ಪಿಂಚಣಿ ಯೋಜನೆಯ ಬಗ್ಗೆ  ಪ್ರಸ್ತಾಪಿಸಿದ್ದೆ. ಈ ಯೋಜನೆ ಕಳೆದ 42 ವರ್ಷದಿಂದ ಹಾಗೆಯೇ ಇತ್ತು. ಯೋಧರನ್ನು ಗೌರವಿಸುವುದಕ್ಕಿಂತ ಪ್ರಮುಖವಾದ ಕೆಲಸ ಬೇರೊಂದಿಲ್ಲ. ಇದೆಲ್ಲ ಸುಲಭದ ಕೆಲಸ ಅಲ್ಲದೇ ಇದ್ದರೂ ನಾವು ಆ ಕಾರ್ಯಗಳಲ್ಲಿ ಕಾರ್ಯ ಪ್ರವೃತ್ತರಾಗಿದ್ದೇವೆ ಎಂದಿದ್ದಾರೆ.

ಏಕ ಶ್ರೇಣಿ ಏಕ ಪಿಂಚಣಿ ಯೋಜನೆ ಜಾರಿಗೆ ಮಾಡುವ ಮುನ್ನ ಇದು ರು. 500 ಕೋಟಿಯಲ್ಲಿ ಕಾರ್ಯರೂಪಕ್ಕೆ ತರುವುದು ಸಾಧ್ಯವಿಲ್ಲ ಎಂದು ಅನಿಸಿತು. ಅದಕ್ಕೆ ರು.8,000 ಕೋಟಿಯಿಂದ ದಿಂದ 10,000 ಕೋಟಿ ಬೇಕಿತ್ತು. ನಮ್ಮ ಸರ್ಕಾರ ಅದನ್ನು ಕಾರ್ಯರೂಪಕ್ಕೆ ತರಲು ತೀರ್ಮಾನಿಸಿತು. ನಮ್ಮ ಸೇನೆಯಲ್ಲಿ ಹೆಚ್ಚಿನ ಸೈನಿಕರು ಕೆಳಹಂತದ ಹುದ್ದೆಯಲ್ಲಿರುವವರಾಗಿದ್ದಾರೆ. ಸೇನೆಯಿಂದ ಬಿಟ್ಟ ಎಲ್ಲ ಸಿಬ್ಬಂದಿಗಳಿಗೂ ಈ ಯೋಜನೆಯ ಫಲ ಸಿಗಲಿದೆ.

ಸ್ವಯಂ ನಿವೃತ್ತಿ (ವಿಆರ್ಎಸ್) ಹೊಂದಿದವರಿಗೆ ಈ ಯೋಜನೆ ಅನ್ವಯಿಸುವುದಿಲ್ಲ ಎಂದು ಹೇಳಿ ಕೆಲವರು ಹಾದಿ ತಪ್ಪಿಸುತ್ತಿದ್ದಾರೆ. ಆದರೆ ಸೇನೆಯಲ್ಲಿದ್ದು ಸ್ವಯಂ ನಿವೃತ್ತಿ ಹೊಂದಿದವರಿಗೂ ಈ ಯೋಜನೆ ಅನ್ವಯಿಸುತ್ತದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 30 ಮಂದಿ ಸಾವು

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

SCROLL FOR NEXT