ಕಲಬುರ್ಗಿ ಹತ್ಯೆ ಖಂಡಿಸಿ ಪ್ರತಿಭಟನೆ (ಸಂಗ್ರಹ ಚಿತ್ರ) 
ಪ್ರಧಾನ ಸುದ್ದಿ

ಸಿಬಿಐಗೆ ಕಲಬುರ್ಗಿ ಕೊಲೆ ಪ್ರಕರಣ, ರಾಜ್ಯ ಸರ್ಕಾರದಿಂದ ಮರು ಪರಿಶೀಲನೆ

ಹಿರಿಯ ಸಂಶೋಧಕ ಹಾಗೂ ಹಂಪಿ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಡಾ.ಎಂ.ಎಂ.ಕಲಬುರ್ಗಿ ಹತ್ಯೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವ ತನ್ನ ನಿರ್ಧಾರವನ್ನು...

ಬೆಂಗಳೂರು: ಹಿರಿಯ ಸಂಶೋಧಕ ಹಾಗೂ ಹಂಪಿ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಡಾ.ಎಂ.ಎಂ.ಕಲಬುರ್ಗಿ ಹತ್ಯೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವ ತನ್ನ ನಿರ್ಧಾರವನ್ನು ರಾಜ್ಯ ಸರ್ಕಾರ ಮರು ಪರಿಶೀಲಿಸುತ್ತಿದೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಕೆ.ಜೆ.ಜಾರ್ಜ್ ಅವರು, ಇತ್ತೀಚಿಗೆ ಕಲಬುರ್ಗಿ ಕುಟುಂಬವನ್ನು ಭೇಟಿ ಮಾಡಿದ್ದ ಮೆಘಾ ಪನ್ಸರೆ ಹಾಗೂ ಅಂಧಶ್ರದ್ಧ ನಿರ್ಮೂಲನಾ ಸಮಿತಿಯ ಸದಸ್ಯರ ಮನವಿ ಹಿನ್ನೆಲೆಯಲ್ಲಿ ಪ್ರಕರಣವನ್ನು ಸಿಬಿಐಗೆ ವಹಿಸುವ ನಿರ್ಧಾರವನ್ನು ಪುನರ್ ಪರಿಶೀಲಿಸಲಾಗುವುದು ಎಂದರು.

ಪ್ರಗತಿಪರ ವಿಚಾರಗಳ ಹೋರಾಟಗಾರ ದಿ.ಗೋವಿಂದ ಪನ್ಸರೆ ಅವರ ಸೊಸೆ ಮೇಘನಾ ಅವರು, ರಾಜ್ಯ ಸರ್ಕಾರವೇ ಕಲಬುರ್ಗಿ ಪ್ರಕರಣದ ತನಿಖೆ ನಡೆಸುವುದು ಉತ್ತಮ ಎಂದು ಸಲಹೆ ನೀಡಿದ್ದಾರೆ. ಅಲ್ಲದೆ ಸಿಬಿಐ ತನಿಖೆ ನಡೆಸುತ್ತಿರುವ ನರೇಂದ್ರ ದಾಭೋಲ್ಕರ್ ಹಾಗೂ ಗೋವಿಂದ ಪನ್ಸರೆ ಅವರ ಹತ್ಯೆ ಪ್ರಕರಣದಲ್ಲಿ ಯಾವುದೇ ಪ್ರಗತಿ ಕಂಡಿಲ್ಲ. ಇದುವರೆಗೂ ಹಂತಕರು ಯಾರೂ ಎಂಬುದು ಪತ್ತೆಯಾಗಿಲ್ಲ ಎಂದು ಹೇಳಿದ್ದಾರೆ.

ಈಗ ಸಿಐಡಿ ನಡೆಸುತ್ತಿರುವ ತನಿಖೆಯ ಬಗ್ಗೆ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಆದರೆ ಈಗ ಪ್ರಕರಣವನ್ನು ಸಿಬಿಐಗೆ ವಹಿಸಬೇಕೋ ಅಥವಾ ಸಿಐಡಿಯೇ ಮುಂದುವರೆಸಬೇಕೋ ಎಂಬುದರ ಬಗ್ಗೆ ಮುಖ್ಯಮಂತ್ರಿಗಳ ನಿರ್ಧಾರಕ್ಕೆ ಬಿಟ್ಟಿದ್ದು ಎಂದು ಜಾರ್ಜ್ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

SCROLL FOR NEXT