ಪ್ರಧಾನ ಸುದ್ದಿ

ಕೈ ವಶೀಕರಣದ ಭೀತಿ ರೆಸಾರ್ಟ್ ನತ್ತ ಬಿಜೆಪಿ

ಮೇಯರ್ ಸ್ಥಾನಕ್ಕಾಗಿ ನಡೆಯುತ್ತಿರುವ ಜಿದ್ದಾಜಿದ್ದಿನ ಬೆಳವಣಿಗೆಯಲ್ಲಿ ತನ್ನ ಸದಸ್ಯರನ್ನು ಒಟ್ಟಾಗಿಟ್ಟುಕೊಳ್ಳುವ ಉದ್ದೇಶದಿಂದ ಬಿಜೆಪಿಯು ಗುರುವಾರ ಮಧ್ಯಾಹ್ನ ಅವರನ್ನೆಲ್ಲ ರೆಸಾರ್ಟ್ ವಾಸಕ್ಕೆ ಕಳುಹಿಸಿತು...

ಬೆಂಗಳೂರು: ಮೇಯರ್ ಸ್ಥಾನಕ್ಕಾಗಿ ನಡೆಯುತ್ತಿರುವ ಜಿದ್ದಾಜಿದ್ದಿನ ಬೆಳವಣಿಗೆಯಲ್ಲಿ ತನ್ನ ಸದಸ್ಯರನ್ನು ಒಟ್ಟಾಗಿಟ್ಟುಕೊಳ್ಳುವ ಉದ್ದೇಶದಿಂದ ಬಿಜೆಪಿಯು ಗುರುವಾರ ಮಧ್ಯಾಹ್ನ ಅವರನ್ನೆಲ್ಲ ರೆಸಾರ್ಟ್ ವಾಸಕ್ಕೆ ಕಳುಹಿಸಿತು.

ಶುಕ್ರವಾರ ಬೆಳಗ್ಗೆ ಈ ಎಲ್ಲಾ ನೂರು ಸದಸ್ಯರು ಒಟ್ಟಾಗಿ ರೆಸಾರ್ಟ್‍ನಿಂದ ಬಿಬಿಎಂಪಿ ಕಚೇರಿಗೆ ಬರಲಿದ್ದಾರೆ. ಕಾಂಗ್ರೆಸ್-ಜೆಡಿಎಸ್ ಸಂಬಂಧದಲ್ಲಿ ಯಾವುದೇ ಬದಲಾವಣೆ ಕಾಣದ
ಹಿನ್ನೆಲೆಯಲ್ಲಿ ಮತ್ತು ಪಕ್ಷದಿಂದ ಮೇಯರ್ ಸ್ಥಾನಕ್ಕೆ ಕಣಕ್ಕಿಳಿಸುವ ಉದ್ದೇಶದಿಂದ ಸ್ಪಷ್ಟ ತೀರ್ಮಾನಕ್ಕೆ ಬರುವುದಕ್ಕಾಗಿ ಗುರುವಾರ ಮಧ್ಯಾಹ್ನ 12 ಗಂಟೆಗೆ ಪಕ್ಷದ ಕಚೇರಿಯಲ್ಲಿ ಸಭೆ
ಕರೆಯಲಾಗಿತ್ತು. ಕಾರ್ಪೊರೇಟರ್ ಗಳು ಮತ್ತು ಮುಖಂಡರು ಪಕ್ಷದ ಕಚೇರಿಗೆ ಆಗಮಿಸಿ ಸಭೆ ಆರಂಭಿಸುವಾಗ 12.30 ದಾಟಿತ್ತು.

ನಂತರ ಊಟದ ವಿರಾಮದವರೆಗೆ ಚರ್ಚೆ ನಡೆದು, ಮುಂದೆ ಎಲ್ಲರೂ ರೆಸಾರ್ಟ್ ಗೆ ಹೋಗುವುದೆಂದು ಮುಖಂಡರು ತೀರ್ಮಾನಕ್ಕೆ ಬಂದರು. ಅದರಂತೆ ಮ.3ಕ್ಕೆ ನೂತನ ಸದಸ್ಯರು ಲಗ್ಗೇ-ಜ್ ನೊಂದಿಗೆ ಬಸ್ಸನ್ನೇರಿ ತುಮಕೂರು ರಸ್ತೆ ನೆಲಮಂಗಲ ಬಳಿಯ ಗೋಲ್ಡನ್ ಪಾಮï ರೆಸಾರ್ಟ್‍ಗೆ ಹೊರಟರು. ಸಭೆಯಲ್ಲಿ ಆರ್.ಅಶೋಕ್, ಸುಬ್ಬನರಸಿಂಹ, ವಿ. ಸೋಮಣ್ಣ, ಪಿ.ಸಿ. ಮೋಹನ್, ಅರವಿಂದ ಲಿಂಬಾವಳಿ ಸೇರಿದಂತೆ ಬೆಂಗಳೂರಿನ ಪ್ರಮುಖ ಶಾಸಕರು ಹಾಜರಿದ್ದರು.

ಕಾರಣವೇನು?
ಜಿದ್ದಾಜಿದ್ದಿನ ಪೈಪೋಟಿಯ ಕೊನೆ ಕ್ಷಣದಲ್ಲಿ ಆಗಬಹುದಾದ ಬದಲಾವಣೆಗಳು ಮತ್ತು ಕಾಂಗ್ರೆಸ್ ಪಕ್ಷ ಎಲ್ಲಿ ತನ್ನ ಸದಸ್ಯರನ್ನು ಹೈಜಾಕ್ ಮಾಡಬಹುದೆಂಬ ಅನುಮಾನದಲ್ಲಿ ಬಿಜೆಪಿಯು ತನ್ನ ಸದಸ್ಯರನ್ನು ಒಗ್ಗಟ್ಟಾಗಿ ಇಡಲು ರೆಸಾರ್ಟ್‍ಗೆ ವರ್ಗಾಯಿಸುವ ನಿರ್ಧಾರಕ್ಕೆ ಬರಲಾಯಿತೆಂದು ಪಕ್ಷದ ಮುಖಂಡರು ತಿಳಿಸಿದರು. ಕಾಂಗ್ರೆಸ್ ಪಕ್ಷವು ಅಧಿಕಾರ ಉಳಿಸಿಕೊಳ್ಳುವ ಉದ್ದೇಶದಿಂದ ಕೊನೆ ಘಳಿಗೆಯಲ್ಲಿ ತಮ್ಮ ಪಕ್ಷದ ಸದಸ್ಯರು ಮತದಾನಕ್ಕೆ ಬಾರದಂತೆ ತಡೆಯುವ ಸಾಧ್ಯತೆ ಇಲ್ಲದಿಲ್ಲ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT