ದುರಂತಕ್ಕೀಡಾದ ದುರಂತೋ ಎಕ್ಸ್ ಪ್ರೆಸ್ 
ಪ್ರಧಾನ ಸುದ್ದಿ

ದುರಂತೋ ಎಕ್ಸ್ ಪ್ರೆಸ್ ರೈಲು ಪಲ್ಟಿ: ಕನಿಷ್ಟ 2 ಸಾವು

ದುರಂತೋ ಎಕ್ಸ್ ಪ್ರೆಸ್ ರೈಲು ಕರ್ನಾಟಕದ ಕಲಬುರ್ಗಿಯ ಚಿತ್ತಾಪುರ ಬಳಿ ಹಳಿ ತಪ್ಪಿದ್ದು, ಘಟನೆಯಲ್ಲಿ ಕನಿಷ್ಠ ಇಬ್ಬರು ಪ್ರಯಾಣಿಕರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ...

ಕಲಬುರ್ಗಿ: ದುರಂತೋ ಎಕ್ಸ್ ಪ್ರೆಸ್ ರೈಲು ಕರ್ನಾಟಕದ ಕಲಬುರ್ಗಿಯ ಚಿತ್ತಾಪುರ ಬಳಿ ಹಳಿ ತಪ್ಪಿದ್ದು, ಘಟನೆಯಲ್ಲಿ ಕನಿಷ್ಠ ಇಬ್ಬರು ಪ್ರಯಾಣಿಕರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಅಪಘಾತಕ್ಕೀಡಾದ ರೈಲು ಸಿಕಂದರಾಬಾದಿನಿಂದ ಮುಂಬೈ ನ ಲೋಕಮಾನ್ಯ ತಿಲಕ್ ಟರ್ಮಿನಲ್ ಗೆ ಪ್ರಯಾಣಿಸುತ್ತು ಎಂದು ತಿಳಿದುಬಂದಿದೆ. ಶುಕ್ರವಾರ ತಡ ರಾತ್ರಿ ಸುಮಾರು 2.30ರ ವೇಳೆಯಲ್ಲಿ ರೈಲು ಕಲಬುರ್ಗಿ ಜಿಲ್ಲೆ ಚಿತ್ತಾಪುರ ತಾಲ್ಲೂಕಿನ ಮರ್ತೂರು ಬಳಿ ರೈಲು ಹಳಿ ತಪ್ಪಿದ್ದ, ಅಪಘಾತದ ರಭಸಕ್ಕೆ ರೈಲಿನ ಸುಮಾರು 9 ಬೋಗಿಗಳು ಪಲ್ಟಿಯಾಗಿವೆ ಎಂದು ತಿಳಿದುಬಂದಿದೆ.

ಘಟನೆಯಲ್ಲಿ 9ಕ್ಕೂ ಹೆಚ್ಚು ಪ್ರಯಾಣಿಕರು ತೀವ್ರವಾಗಿ ಗಾಯಗೊಂಡಿದ್ದು ಅವರನ್ನು ಕಲಬುರ್ಗಿ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಮತ್ತು ಸ್ಥಳೀಯ ಪೊಲೀಸರು ದೌಡಾಯಿಸಿದ್ದು, ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದೆ. ಇನ್ನು ರೈಲು ಅಪಘಾತ ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳೀಯ ರೈಲ್ವೇ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ರಕ್ಷಣಾ ಕಾರ್ಯಾಚರಣೆಯನ್ನು ವೀಕ್ಷಿಸುತ್ತಿದ್ದಾರೆ. ಇನ್ನು ರೈಲು ದುರಂತಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಕೇಂದ್ರ ರೈಲ್ವೇ ಸಚಿವ ಸುರೇಶ್ ಪ್ರಭು ಅವರು ತನಿಖೆಗೆ ಆದೇಶಿಸಿದ್ದಾರೆ. ಅಲ್ಲದೆ ರಕ್ಷಣಾ ಕಾರ್ಯಚರಣೆಯನ್ನು ತ್ವರಿತಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜೀನಾಮೆ ಬಗ್ಗೆ ಖುದ್ದು ಸುಳಿವು ನೀಡಿದ CM ಸಿದ್ದರಾಮಯ್ಯ; ಸಾಮಾಜಿಕ ಮಾಧ್ಯಮದಲ್ಲಿ ಮಹತ್ವದ ಪೋಸ್ಟ್​!

ಸಿಎಂ ಬದಲಾವಣೆಯಾದ್ರೆ ಜನರಿಗೆ ಕಾರಣ ತಿಳಿಸಬೇಕು, ಇಲ್ಲ ಪರಿಣಾಮ ಎದುರಿಸಬೇಕಾಗುತ್ತದೆ: ಕಾಂಗ್ರೆಸ್ ಗೆ 'ಅಹಿಂದ' ಎಚ್ಚರಿಕೆ

ಊಹಾಪೋಹಕ್ಕೆ ಕೊನೆಗೂ ತೆರೆ: 'ಹೌದು, ಸಿಎಂ ರಾಜೀನಾಮೆ ಕೊಡ್ತಾರಂತೆ': ಆರ್‌ ವಿ ದೇಶಪಾಂಡೆ ಹೇಳಿಕೆ

ಮಮತಾಗೆ ಮತ್ತೊಂದು ಶಾಕ್; ಪಕ್ಷದ ಎಲ್ಲಾ ಹುದ್ದೆಗಳಿಗೆ ಸಂಸದೆ ಕಾಕೋಲಿ ಘೋಷ್ ರಾಜೀನಾಮೆ

ಮಮತಾಗೆ ಬಿಗ್ ಶಾಕ್; TMC ವಿಭಜನೆ? ತೃಣಮೂಲ ಕಾಂಗ್ರೆಸ್ ನ 50 ಶಾಸಕರು, 20 ಸಂಸದರು ಬಿಜೆಪಿ ಸೇರ್ಪಡೆ?

SCROLL FOR NEXT