ಸಾಂದರ್ಭಿಕ ಚಿತ್ರ 
ಪ್ರಧಾನ ಸುದ್ದಿ

ಮೂರು ಯುವಕರ ಕೊಲೆ: ಕಾಶ್ಮೀರದ ಬಾರಮುಲ್ಲಾದಲ್ಲಿ ಪ್ರತಿಭಟನೆ

ಕಾಶ್ಮೀರದ ಬಾರಮುಲ್ಲಾದ ಸೇಬು ತೋಟದಲ್ಲಿ ಗುಂಡಿನ ದಾಳಿಯಿಂದ ಕೊಲ್ಲಲ್ಪಟ್ಟಿದ್ದಾರೆ ಎಂದು ಶಂಕಿಸಲಾದ ಮೂವರು ಯುವಕರ ದೇಹ ಸೋಮವಾರ

ಶ್ರೀನಗರ: ಕಾಶ್ಮೀರದ ಬಾರಮುಲ್ಲಾದ ಸೇಬು ತೋಟದಲ್ಲಿ ಗುಂಡಿನ ದಾಳಿಯಿಂದ ಕೊಲ್ಲಲ್ಪಟ್ಟಿದ್ದಾರೆ ಎಂದು ಶಂಕಿಸಲಾದ ಮೂವರು ಯುವಕರ ದೇಹ ಸೋಮವಾರ ಪತ್ತೆಯಾದ ಹಿನ್ನಲೆಯಲ್ಲಿ ಆ ಪ್ರದೇಶದಲ್ಲಿ ಪ್ರತಿಭಟನೆಗಳು ಜರುಗಿವೆ.

ಸೋಫೋರ್ ಮತ್ತು ಬಾರಾಮುಲ್ಲಾ ನಗರಗಳಲ್ಲಿ ಪ್ರತಿಭಟನಾಕಾರರು ಮತ್ತು ಭದ್ರತಾ ಪಡೆಗಳ ನಡುವೆ ಉದ್ವಿಘ್ನತೆ ಏರ್ಪಟ್ಟಿದ್ದು, ಪ್ರತಿಭಟನಾಕಾರರು ಶ್ರೀನಗರ-ಮುಜಪ್ಫರಾಬಾದ್ ರಾಷ್ಟ್ರೀಯ ಹೆದ್ದಾರಿಗೆ ಪಟ್ಟನ್ ಮತ್ತು ಕ್ರೀರಿ ಪ್ರದೇಶಗಳಲ್ಲಿ ತಡೆ ಹಾಕಿದ್ದಾರೆ. ಈ ಮುಂಜಾನೆ ೧೭ ವರ್ಷದಿಂದ ೨೧ ವರ್ಷದ ನಡುವಿನ ಮೂರು ಯುವಕರ ದೇಹ ಪಟ್ಟನ್ ಗ್ರಾಮದ ಸೇಬಿನ ತೋಟದಲ್ಲಿ ಕಂಡುಬಂದ ಹಿನ್ನಲೆಯಲ್ಲಿ ಈ ಉದ್ವಿಘ್ನತೆ ಏರ್ಪಟ್ಟಿದೆ.

ಈ ಮೂವರು ಯುವಕರ ಸಾವಿನ ಸುದ್ದಿ ಜಿಲ್ಲೆಯಲ್ಲಿ ಹಬ್ಬಿದಂತೆ ಪ್ರತಿಭಟನಾಕಾರರು ಸೋಫೋರ್ ಮತ್ತು ಬಾರಾಮುಲ್ಲ ನಗರಗಳಲ್ಲಿ ಅಂಗಡಿ ಮುಂಗಟ್ಟುಗಳನ್ನು ಒತ್ತಾಯಪೂರ್ವಕವಾಗಿ ಮುಚ್ಚಿಸಿದ್ದಾರೆ.

ಮೃತದೇಶಗಳ ಶವಪರೀಕ್ಷೆಗಾಗಿ ಪೊಲೀಸರು ಶವಗಳನ್ನು ಬಾರಮುಲ್ಲಾ ಜಿಲ್ಲ ಆಸ್ಪತ್ರೆಗೆ ಸಾಗಿಸಿದ್ದಾರೆ. ಮೃತಪಟ್ಟವರನ್ನು ಇನ್ನೂ ಗುರುತಿಸಲಾಗಿಲ್ಲ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT