ಎಎಪಿ ಶಾಸಕ ಸೋಮನಾಥ ಭಾರತಿ 
ಪ್ರಧಾನ ಸುದ್ದಿ

ಎಎಪಿ ಶಾಸಕ ಸೋಮನಾಥ ಭಾರತಿಗೆ ಕೋರ್ಟ್ ನಿಂದ ಎರಡು ದಿನಗಳ ರಕ್ಷಣೆ

ಕೌಟುಂಬಿಕ ದೌರ್ಜನ್ಯ ಮತ್ತು ತಮ್ಮ ಪತ್ನಿಯ ಕೊಲೆ ಆರೋಪ ಎದುರುಸುತ್ತಿರುವ ಎಎಪಿ ಶಾಸಕ ಸೋಮನಾಥ ಭಾರತಿ ಅವರಿಗೆ ಬಂಧನದಿಂದ ಎರಡು ದಿನಗಳ ಮುಕ್ತಿ ದೊರೆತಿದೆ.

ನವದೆಹಲಿ: ಕೌಟುಂಬಿಕ ದೌರ್ಜನ್ಯ ಮತ್ತು ತಮ್ಮ ಪತ್ನಿಯ ಕೊಲೆ ಆರೋಪ ಎದುರುಸುತ್ತಿರುವ ಎಎಪಿ ಶಾಸಕ ಸೋಮನಾಥ ಭಾರತಿ ಅವರಿಗೆ ಬಂಧನದಿಂದ ಎರಡು ದಿನಗಳ ಮುಕ್ತಿ ದೊರೆತಿದೆ. ಗುರುವಾರದವರೆಗೆ ಯಾವುದೇ ಕ್ರಮ ತೆಗೆದುಕೊಳ್ಳದಂತೆ ದೆಹಲಿ ಪೊಲೀಸರಿಗೆ ಹೈಕೋರ್ಟ್ ಆದೇಶ ನೀಡಿದೆ.

ಮಧ್ಯಂತರ ಆದೇಶ ನೀಡಿದ ನ್ಯಾಯಮೂರ್ತಿ ಸುರೇಶ್ ಕೈಟ್ ಅವರು ಸೆಪ್ಟಂಬರ್ ೧೭ ರಂದು ವಿಚಾರಣೆಯ ಪ್ರಗತಿಯ ವರದಿ ನೀಡುವಂತೆ ಹೇಳಿದೆ. ಅಂದು ಮತ್ತೆ ವಿಚಾರಣೆ ನಡೆಯಲಿದೆ. ದೆಹಲಿಯ ಮಾಜಿ ಕಾನೂನು ಮಂತ್ರಿಗೆ ಮಧ್ಯಂತರ ರಕ್ಷಣೆ ನೀಡದಂತೆ ದೆಹಲಿ ಪೊಲೀಸರು ಮಾಡಿದ ಮನವಿಯನ್ನು ತಿರಸ್ಕರಿಸಿದ ನ್ಯಾಯಾಲಯ "ನಾನು ದಾಖಲೆಗಳನ್ನು ಪರಿಗಣಿಸಬೇಕಿದೆ, ಆದುದರಿಂದ ಈ ವಿಷವಾಗಿ ಅಫಿಡವಿಟ್ ಸಲ್ಲಿಸಿ" ಎಂದಿದ್ದಾರೆ.

"ನಿಮಗೆ ಪ್ರತುಕ್ರಿಯೆ ಸಲ್ಲಿಸಲು ಇಷ್ಟವಿಲ್ಲದಿದ್ದರೆ ಹೇಳಿ, ಇಂದೆ ವಿಚಾರಣೆ ನಡೆಸಿ ತೀರ್ಪು ನೀಡುತ್ತಾನೆ" ಎಂದು ನ್ಯಾಯಾಲಯ ಹೇಳಿದ್ದು ನಂತರ "ನೋಟಿಸ್ ಜಾರಿ ಮಾಡಲಾಗಿದೆ. ಈ ಮಧ್ಯೆ ದೆಹಲಿ ಪೊಲೀಸರು ವರದಿ ಸಲ್ಲಿಸಲಿದ್ದಾರೆ. ಆಲಿಯವರೆಗೂ ಯಾವುದೇ ಕ್ರಮ ಕೈಗೊಳ್ಳುವುದು ಬೇಡ" ಎಂದಿದ್ದಾರೆ.

ನೆನ್ನೆ ಟ್ರಯಲ್ ನ್ಯಾಯಾಲಯ ಎಎಪಿ ಶಾಸಕನ ವಿರುದ್ಧ ಜಾಮೀನು ರಹಿತ ವಾರೆಂಟ್ ಹೊರಡಿಸಿದ ಹಿನ್ನಲೆಯಲ್ಲಿ ಅವರು ನಿರೀಕ್ಷಣಾ ಜಾಮೀನು ಕೋರಿ ಹೈಕೋರ್ಟ್ ಮೊರೆ ಹೋಗಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

SCROLL FOR NEXT