ಹಿರಿಯ ಕಾಂಗ್ರೆಸ್ ನಾಯಕ ಎಚ್.ಆರ್. ಭಾರದ್ವಾಜ್ (ಸಂಗ್ರಹ ಚಿತ್ರ) 
ಪ್ರಧಾನ ಸುದ್ದಿ

ಭಟ್ಟಂಗಿಗಳಿಂದಾಗಿ ನಾನು ರಾಜ್ಯಪಾಲನಾದೆ: ಎಚ್.ಆರ್. ಭಾರದ್ವಾಜ್

ಹಿರಿಯ ಕಾಂಗ್ರೆಸ್ ನಾಯಕ ಎಚ್.ಆರ್. ಭಾರದ್ವಾಜ್ ಮತ್ತೆ ಪಕ್ಷದ ಮುಖಂಡರ ವಿರುದ್ಧ ಟೀಕಾಸ್ತ್ರ ಪ್ರಯೋಗಿಸಿದ್ದಾರೆ. ಕಾಂಗ್ರೆಸ್ ವರಿಷ್ಠರ ಭಟ್ಟಂಗಿಗಳಿಂದಾಗಿ ತಾವು ರಾಜ್ಯಪಾಲನಾಗಬೇಕಾಯಿತು ಎಂದು ಕಿಡಿಕಾರಿದ್ದಾರೆ...

ನವದೆಹಲಿ: ಹಿರಿಯ ಕಾಂಗ್ರೆಸ್ ನಾಯಕ ಎಚ್.ಆರ್. ಭಾರದ್ವಾಜ್ ಮತ್ತೆ ಪಕ್ಷದ ಮುಖಂಡರ ವಿರುದ್ಧ ಟೀಕಾಸ್ತ್ರ ಪ್ರಯೋಗಿಸಿದ್ದಾರೆ. ಕಾಂಗ್ರೆಸ್ ವರಿಷ್ಠರ ಭಟ್ಟಂಗಿಗಳಿಂದಾಗಿ ತಾವು ರಾಜ್ಯಪಾಲನಾಗಬೇಕಾಯಿತು ಎಂದು ಕಿಡಿಕಾರಿದ್ದಾರೆ.

ರಾಜ್ಯಪಾಲ ಹುದ್ದೆಗೆ ನಾನೊಬ್ಬ ಅನರ್ಹ ವ್ಯಕ್ತಿ. ನನ್ನನ್ನು ರಾಜ್ಯಪಾಲರನ್ನಾಗಿ ಮಾಡಿದ್ದ ಕ್ಕಾಗಿ ಮನಮೋಹನ ಸಿಂಗ್‍ರನ್ನು ದೂರುವು ದಿಲ್ಲ. ದಿಲ್ಲಿಯ ಕೆಲವು ಭಟ್ಟಂಗಿಗಳಿಗೆ ಒಳ್ಳೆ ಯವರು ಸರ್ಕಾರದಲ್ಲಿರುವುದೇ ಬೇಕಿಲ್ಲ. ಇಂದಿರಾ ಗಾಂಧಿಯವರು ಯಾವತ್ತೂ ಈ ರೀತಿ ವರ್ತಿಸಿರಲಿಲ್ಲ ಎಂದು ಪುಸ್ತಕ ಬಿಡುಗಡೆ ಸಮಾರಂಭವೊಂದರಲ್ಲಿ ಶನಿವಾರ ಭಾರ ದ್ವಾಜ್ ಕಿಡಿಕಾರಿದ್ದಾರೆ. 2009ರ ಚುನಾವಣೆ ಬಳಿಕ ಕಾನೂನು ಸಚಿವರಾಗಿದ್ದ ಭಾರದ್ವಾಜ್ ರನ್ನು ಕರ್ನಾಟಕದ ರಾಜ್ಯಪಾಲರಾಗಿ ನೇಮಿಸಲಾಗಿತ್ತು.

ಇದೇ ವೇಳೆ ಕರ್ನಾಟಕದ ರಾಜ್ಯಪಾಲರಾಗಿದ್ದಾಗ ಅವಧಿಯಲ್ಲಿ ಕೇಳಿ ಬಂದ ವಿವಾದಗಳ ಕುರಿತೂ ಪ್ರತಿಕ್ರಿಯಿಸಿದ್ದಾರೆ. ನನ್ನನ್ನು ರಾಜ್ಯಪಾಲರನ್ನಾಗಿ ಮಾಡಿ ನಂತರ ಅವಮಾನ ಮಾಡಿದರು ಎಂದೂ ಅಸಮಾಧಾನ ತೋಡಿಕೊಂಡಿದ್ದಾರೆ. ರಾಷ್ಟ್ರಪತಿ, ಉಪರಾಷ್ಟ್ರಪತಿ, ಪ್ರಧಾನಿಯಂಥ ಹುದ್ದೆಗೆ ಸಂವಿಧಾನಬದ್ಧ ಜವಾಬ್ದಾರಿ ಇದೆ. ಹಾಗಾಗಿ ಅಂಥ ಹುದ್ದೆಗೆ ಗೌರವ ನೀಡುವ ಅಗತ್ಯವಿದೆ ಎಂದಿದ್ದಾರೆ ಭಾರದ್ವಾಜ್.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT