ಹಿರಿಯ ಕಾಂಗ್ರೆಸ್ ನಾಯಕ ಎಚ್.ಆರ್. ಭಾರದ್ವಾಜ್ (ಸಂಗ್ರಹ ಚಿತ್ರ) 
ಪ್ರಧಾನ ಸುದ್ದಿ

ಭಟ್ಟಂಗಿಗಳಿಂದಾಗಿ ನಾನು ರಾಜ್ಯಪಾಲನಾದೆ: ಎಚ್.ಆರ್. ಭಾರದ್ವಾಜ್

ಹಿರಿಯ ಕಾಂಗ್ರೆಸ್ ನಾಯಕ ಎಚ್.ಆರ್. ಭಾರದ್ವಾಜ್ ಮತ್ತೆ ಪಕ್ಷದ ಮುಖಂಡರ ವಿರುದ್ಧ ಟೀಕಾಸ್ತ್ರ ಪ್ರಯೋಗಿಸಿದ್ದಾರೆ. ಕಾಂಗ್ರೆಸ್ ವರಿಷ್ಠರ ಭಟ್ಟಂಗಿಗಳಿಂದಾಗಿ ತಾವು ರಾಜ್ಯಪಾಲನಾಗಬೇಕಾಯಿತು ಎಂದು ಕಿಡಿಕಾರಿದ್ದಾರೆ...

ನವದೆಹಲಿ: ಹಿರಿಯ ಕಾಂಗ್ರೆಸ್ ನಾಯಕ ಎಚ್.ಆರ್. ಭಾರದ್ವಾಜ್ ಮತ್ತೆ ಪಕ್ಷದ ಮುಖಂಡರ ವಿರುದ್ಧ ಟೀಕಾಸ್ತ್ರ ಪ್ರಯೋಗಿಸಿದ್ದಾರೆ. ಕಾಂಗ್ರೆಸ್ ವರಿಷ್ಠರ ಭಟ್ಟಂಗಿಗಳಿಂದಾಗಿ ತಾವು ರಾಜ್ಯಪಾಲನಾಗಬೇಕಾಯಿತು ಎಂದು ಕಿಡಿಕಾರಿದ್ದಾರೆ.

ರಾಜ್ಯಪಾಲ ಹುದ್ದೆಗೆ ನಾನೊಬ್ಬ ಅನರ್ಹ ವ್ಯಕ್ತಿ. ನನ್ನನ್ನು ರಾಜ್ಯಪಾಲರನ್ನಾಗಿ ಮಾಡಿದ್ದ ಕ್ಕಾಗಿ ಮನಮೋಹನ ಸಿಂಗ್‍ರನ್ನು ದೂರುವು ದಿಲ್ಲ. ದಿಲ್ಲಿಯ ಕೆಲವು ಭಟ್ಟಂಗಿಗಳಿಗೆ ಒಳ್ಳೆ ಯವರು ಸರ್ಕಾರದಲ್ಲಿರುವುದೇ ಬೇಕಿಲ್ಲ. ಇಂದಿರಾ ಗಾಂಧಿಯವರು ಯಾವತ್ತೂ ಈ ರೀತಿ ವರ್ತಿಸಿರಲಿಲ್ಲ ಎಂದು ಪುಸ್ತಕ ಬಿಡುಗಡೆ ಸಮಾರಂಭವೊಂದರಲ್ಲಿ ಶನಿವಾರ ಭಾರ ದ್ವಾಜ್ ಕಿಡಿಕಾರಿದ್ದಾರೆ. 2009ರ ಚುನಾವಣೆ ಬಳಿಕ ಕಾನೂನು ಸಚಿವರಾಗಿದ್ದ ಭಾರದ್ವಾಜ್ ರನ್ನು ಕರ್ನಾಟಕದ ರಾಜ್ಯಪಾಲರಾಗಿ ನೇಮಿಸಲಾಗಿತ್ತು.

ಇದೇ ವೇಳೆ ಕರ್ನಾಟಕದ ರಾಜ್ಯಪಾಲರಾಗಿದ್ದಾಗ ಅವಧಿಯಲ್ಲಿ ಕೇಳಿ ಬಂದ ವಿವಾದಗಳ ಕುರಿತೂ ಪ್ರತಿಕ್ರಿಯಿಸಿದ್ದಾರೆ. ನನ್ನನ್ನು ರಾಜ್ಯಪಾಲರನ್ನಾಗಿ ಮಾಡಿ ನಂತರ ಅವಮಾನ ಮಾಡಿದರು ಎಂದೂ ಅಸಮಾಧಾನ ತೋಡಿಕೊಂಡಿದ್ದಾರೆ. ರಾಷ್ಟ್ರಪತಿ, ಉಪರಾಷ್ಟ್ರಪತಿ, ಪ್ರಧಾನಿಯಂಥ ಹುದ್ದೆಗೆ ಸಂವಿಧಾನಬದ್ಧ ಜವಾಬ್ದಾರಿ ಇದೆ. ಹಾಗಾಗಿ ಅಂಥ ಹುದ್ದೆಗೆ ಗೌರವ ನೀಡುವ ಅಗತ್ಯವಿದೆ ಎಂದಿದ್ದಾರೆ ಭಾರದ್ವಾಜ್.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನೀವು ಇಲ್ಲಿ ಹುಟ್ಟೋದು ಬೇಡ ನಿಮ್ಮ ಕ್ಷೇತ್ರದ ಶೇ. 75 ರಷ್ಟಾದರೂ ಇಲ್ಲಿ ಅಭಿವೃದ್ಧಿ ಮಾಡಿ: ಡಿಕೆಶಿಗೆ ಖರ್ಗೆ ಟಾಂಗ್; Video

ಸ್ವಾತಂತ್ರ್ಯ ಬಳಿಕ ಇದೇ ಮೊದಲು: ಮಕರ ಸಂಕ್ರಾಂತಿಗೆ ಮತ್ತೊಂದು ಹೊಸ 'ದಾಖಲೆ'ಗೆ ಸಜ್ಜಾದ ಪ್ರಧಾನಿ ಮೋದಿ!

ಡೆಂಟಲ್ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ ಕೇಸ್: ಕೆಲಸದಿಂದ 6 ಪ್ರಾಧ್ಯಾಪಕರ ವಜಾ

ಯಶ್ 'ಟಾಕ್ಸಿಕ್' ಟೀಸರ್ ವಿರುದ್ಧ ಮಹಿಳಾ ಆಯೋಗಕ್ಕೆ ಎಎಪಿ ದೂರು; 'ಆ' ದೃಶ್ಯಕ್ಕೆ ಆಕ್ಷೇಪ!

ಟ್ರಂಪ್ ಗೆ 'ಮರೆಯಲಾಗದ ಪಾಠ' ಕಲಿಸುತ್ತೇವೆ: ಇರಾನ್ ಸಂಸತ್ ಸ್ಪೀಕರ್ ಖಡಕ್ ವಾರ್ನಿಂಗ್!

SCROLL FOR NEXT