ಸಿಎಂ ಸಿದ್ದರಾಮಯ್ಯ ಮತ್ತು ಕೇಂದ್ರ ಸಚಿವೆ ಸ್ಮೃತಿ ಇರಾನಿ (ಸಂಗ್ರಹ ಚಿತ್ರ) 
ಪ್ರಧಾನ ಸುದ್ದಿ

ರಾಯಚೂರಿನಲ್ಲೇ ಐಐಟಿ ಸ್ಥಾಪಿಸಿ: ಕೇಂದ್ರಕ್ಕೆ ಸಿಎಂ ಸಿದ್ದರಾಮಯ್ಯ ಪತ್ರ

ರಾಜ್ಯಕ್ಕೆ ಮಂಜೂರಾಗಿರುವ ಐಐಟಿಯನ್ನು ರಾಯಚೂರಿನಲ್ಲಿಯೇ ಸ್ಥಾಪಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ...

ಬೆಂಗಳೂರು: ರಾಜ್ಯಕ್ಕೆ ಮಂಜೂರಾಗಿರುವ ಐಐಟಿಯನ್ನು ರಾಯಚೂರಿನಲ್ಲಿಯೇ ಸ್ಥಾಪಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.

ಸೆಪ್ಟೆಂಬರ್ 16ರಂದೇ ಸಿದ್ದರಾಮಯ್ಯ ಅವರು ಕೇಂದ್ರ ಮಾನವ ಸಂಪನ್ಮೂಲ ಸಚಿವೆ ಸ್ಮೃತಿ ಇರಾನಿ ಅವರಿಗೆ ಪತ್ರವನ್ನು ಬರೆದಿದ್ದು, ರಾಯಚೂರಿನಲ್ಲೇ ಐಐಟಿ ಸ್ಥಾಪಿಸುವುದಾದರೆ  ಸಂಪೂರ್ಣ ಸಹಕಾರ ನೀಡುವುದಾಗಿ ಭರವಸೆ ನೀಡಿದ್ದಾರೆ. ಅಲ್ಲದೆ ಹುಬ್ಬಳ್ಳಿ-ಧಾರವಾಡದಲ್ಲಿ ಈಗಾಗಲೇ ಇಂಟರ್‌ನ್ಯಾಷನಲ್ ಇನ್‌ಫರ್ಮೇಷನ್ ಟೆಕ್ನಾಲಜಿ ಇನ್‌ಸ್ಟಿಟ್ಯೂಷನ್ (ಐಐಟಿಐ)  ಸ್ಥಾಪಿಸಲಾಗಿದೆ. ಕಳೆದ ವರ್ಷವೇ ಇದು ಆರಂಭವಾಗಿದೆ. ಹೀಗಾಗಿ ಹುಬ್ಬಳ್ಳಿಯ ಬದಲು ರಾಯಚೂರಿನಲ್ಲಿ ಐಐಟಿ ಸ್ಥಾಪಿಸಿದರೆ ಪ್ರಾದೇಶಿಕ ಅಸಮತೋಲನ ಸರಿದೂಗಿಸಲು ನೆರವಾಗುತ್ತದೆ  ಎಂದು ವಿವರಿಸಿದ್ದಾರೆ.

ಪತ್ರದಲ್ಲಿ ಪ್ರಾದೇಶಿಕ ಸಮತೋಲನದ ಆಧಾರದ ಮೇಲೆ ರಾಯಚೂರಿಗೆ ಐಐಟಿ ಮಂಜೂರು ಮಾಡುವುದು ವೈಜ್ಞಾನಿಕ ನಿರ್ಧಾರ. ರಾಯಚೂರಿನಲ್ಲಿ ಐಐಟಿ ಸ್ಥಾಪಿಸುವುದಾದರೆ ಕಾಲಮಿತಿಯಲ್ಲಿ  ಭೂಮಿ, ನೀರು ಸೇರಿದಂತೆ ಎಲ್ಲ ಅಗತ್ಯ ಸೌಲಭ್ಯ ಒದಗಿಸುವ ಭರವಸೆ ನೀಡಿದ್ದಾರೆ.

ಕೇಂದ್ರ ಸರ್ಕಾರಕ್ಕೆ ಮುಖ್ಯಮಂತ್ರಿಗಳು ಬರೆದಿರುವ ಪತ್ರದ ವಿಚಾರ ಮಾಧ್ಯಮಗಳಲ್ಲಿ ಬಹಿರಂಗವಾಗುತ್ತಿದ್ದಂತೆಯೇ ಮುಂಬೈ ಕರ್ನಾಟಕ, ಹೈದರಾಬಾದ್ ಕರ್ನಾಟಕ ಭಾಗದಲ್ಲಿ ಐಐಟಿ  ರಾಜಕೀಯ ತೀವ್ರಗೊಂಡಿದೆ. ಕೇಂದ್ರ ಸರ್ಕಾರದ ಅಧಿಕಾರಿಗಳ ತಂಡ ಅಧ್ಯಯನ ನಡೆಸಿ ವರದಿ ನೀಡಿದ ಎಂಟು ದಿನಗಳಲ್ಲೇ ಬಿಜೆಪಿ ನಾಯಕರಾದ ಪ್ರಹ್ಲಾದ್ ಜೋಷಿ, ಅನಂತ್‌ಕುಮಾರ್,  ಜಗದೀಶ್ ಶೆಟ್ಟರ್, ಸದಾನಂದಗೌಡ ಕೇಂದ್ರ ಸರ್ಕಾರದ  ಮೇಲೆ ಒತ್ತಡ ಹೇರಿ ಹುಬ್ಬಳ್ಳಿಗೆ ಐಐಟಿ ಮಂಜೂರು ಮಾಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದರು. ಆದರೆ, ಇದಕ್ಕೆ ಸಡ್ಡು ಹೊಡೆಯಲು  ಮುಂದಾಗಿರುವ ರಾಜ್ಯ ಸರ್ಕಾರ ಮತ್ತು ಹೈದರಾಬಾದ್ ಕರ್ನಾಟಕ ಭಾಗದ ಜನಪ್ರತಿನಿಧಿಗಳು ಮತ್ತೆ ರಾಯಚೂರಿನಲ್ಲೇ ಐಐಟಿ  ಸ್ಥಾಪಿಸಬೇಕೆಂದು ಪಟ್ಟು ಹಿಡಿದಿದ್ದಾರೆ.

ಹೈದರಾಬಾದ್ ಕರ್ನಾಟಕ ಭಾಗದ ಆರು ಜಿಲ್ಲೆಗಳಿಗೆ ಸಂವಿಧಾನ ತಿದ್ದುಪಡಿ ಆಗಿ 371(ಜೆ) ಅಡಿ ಉದ್ಯೋಗ, ಶಿಕ್ಷಣದಲ್ಲಿ ವಿಶೇಷ ಮೀಸಲಾತಿ ಸಿಕ್ಕಿದೆ. ಹೀಗಾಗಿ ಹೈದರಾಬಾದ್-ಕರ್ನಾಟಕ  ಭಾಗದಲ್ಲಿ ಕಾಂಗ್ರೆಸ್ ಪ್ರಾಬಲ್ಯವನ್ನು ಹೆಚ್ಚಿಸಿದೆ. ಕೆಲ ದಿನಗಳ ಹಿಂದಷ್ಟೇ ಕಾಂಗ್ರೆಸ್ ಪಕ್ಷದ ಲೋಕಸಭೆಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಸಿಎಂ ಸಿದ್ದರಾಮಯ್ಯ ಅವರ ಮೇಲೆ ಒತ್ತಡ  ಹೇರಿದ್ದರು. ಧಾರವಾಡದ ಬದಲಾಗಿ ರಾಯಚೂರಿನಲ್ಲಿಯೇ ಐಐಟಿ ಸ್ಥಾಪನೆ ಬಗ್ಗೆ ಕೇಂದ್ರ ಸರ್ಕಾರದ ಗಮನ ಸೆಳೆಯುವಂತೆ ಸಲಹೆ ನೀಡಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

SCROLL FOR NEXT