ಚೆನ್ನವೀರ ಕಣವಿ, ಡಾ.ಗಿರಡ್ಡಿ ಗೋವಿಂದ ರಾಜ್ ಮತ್ತು ತೋಂಟದಾರ್ಯ ಶ್ರೀಗಳಿಗೆ ಬೆದರಿಕೆ..! 
ಪ್ರಧಾನ ಸುದ್ದಿ

ಶ್ರೀರಾಮ ಸೇನೆಯಿಂದ ಮೂವರು ವಿಚಾರವಾದಿಗಳಿಗೆ ಬೆದರಿಕೆ..?

ಹಿರಿಯ ಸಾಹಿತಿ ಮತ್ತು ವಿಚಾರವಾದಿ ಡಾ.ಎಂಎಂ ಕಲಬುರ್ಗಿ ಹತ್ಯೆಯ ಕರಿ ನೆರಳಿನಲ್ಲೇ ಮತ್ತೆ ಮೂವರು ಕರ್ನಾಟಕದ ವಿಚಾರವಾದಿಗಳಿಗೆ ಬೆದರಿಕೆ ಬಂದಿದೆ ಎಂದು ಹೇಳಲಾಗುತ್ತಿದೆ.

ಬೆಂಗಳೂರು: ಹಿರಿಯ ಸಾಹಿತಿ ಮತ್ತು ವಿಚಾರವಾದಿ ಡಾ.ಎಂಎಂ ಕಲಬುರ್ಗಿ ಹತ್ಯೆಯ ಕರಿ ನೆರಳಿನಲ್ಲೇ ಮತ್ತೆ ಮೂವರು ಕರ್ನಾಟಕದ ವಿಚಾರವಾದಿಗಳಿಗೆ ಬೆದರಿಕೆ ಬಂದಿದೆ ಎಂದು  ಹೇಳಲಾಗುತ್ತಿದೆ.

ಮೂಲಗಳ ಪ್ರಕಾರ ಶ್ರೀರಾಮ ಸೇನೆಗೆ ಸೇರಿದ ಮುಖಂಡರು ಈ ಬೆದರಿಕೆ ಹಾಕಿದ್ದಾರೆ ಎಂದು ಹೇಳಲಾಗುತ್ತಿದ್ದು, ಹಿರಿಯ ಸಾಹಿತಿಗಳಾದ ಚೆನ್ನವೀರ ಕಣವಿ, ಡಾ.ಗಿರಡ್ಡಿ ಗೋವಿಂದ ರಾಜ್  ಮತ್ತು ತೋಂಟದಾರ್ಯ ಶ್ರೀಗಳಿಗೆ ಬೆದರಿಕೆ ಬಂದಿದೆ ಎಂದು ಹೇಳಲಾಗುತ್ತಿದೆ. ಇನ್ನು ಪ್ರಕರಣ ಸಂಬಂಧ ಶ್ರೀರಾಮ ಸೇನೆಯ ರಾಯಚೂರು ಜಿಲ್ಲಾ ಘಟಕದ ಅಧ್ಯಕ್ಷ ಮಂಜುನಾಥ  ಬಾವಿ ಎಂಬುವವರನ್ನು ರಾಯಚೂರು ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.

ಈ ಹಿಂದೆ ವಿಚಾರವಾದಿ ಮತ್ತು ಹಿರಿಯ ಸಂಶೋಧಕ ಡಾ. ಎಂಎಂ ಕಲಬುರ್ಗಿ ಅವರ ಹತ್ಯಾ ಪ್ರಕರಣದಲ್ಲಿ ಶ್ರೀರಾಮ ಸೇನೆ ಸಂಘಟನೆಯ ಪಾತ್ರವಿದೆ ಎಂದು ಆರೋಪಿಸಿ ಹಿರಿಯ  ಸಾಹಿತಿಗಳಾದ ಚನ್ನವೀರ ಕಣವಿ, ಡಾ. ಗಿರಡ್ಡಿ ಗೋವಿಂದರಾಜ, ತೊಂಟದಾರ್ಯ ಸ್ವಾಮಿಗಳ ನೇತೃತ್ವದ ಸಾಹಿತಿಗಳ ತಂಡ ಧಾರವಾಡ ಉಪವಿಭಾಗಾಧಿಕಾರಿಗೆ ದೂರು ನೀಡಿದ್ದರು.

ಈ ಆರೋಪವನ್ನು ತಳ್ಳಿಹಾಕಿದ್ದ ರಾಯಚೂರು ಶ್ರೀರಾಮ ಸೇನೆ ಘಟಕ ಕೂಡಲೇ ಸಾಕ್ಷಿ ಒದಗಿಸಬೇಕು, ಇಲ್ಲವಾದಲ್ಲಿ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿತ್ತು. ಅಷ್ಟೇ ಅಲ್ಲದೇ ಒಂದು ತಿಂಗಳೊಳಗೆ ಕ್ಷಮೆಯಾಚಿಸದಿದ್ದರೆ ಚನ್ನವೀರ ಕಣವಿ ಹಾಗೂ ಗಿರಡ್ಡಿ ಗೋವಿಂದರಾಜ ನಿವಾಸಗಳನ್ನು ಧ್ವಂಸ ಮಾಡುವುದಾಗಿ ಶ್ರೀರಾಮ ಸೇನೆ ಜಿಲ್ಲಾಧ್ಯಕ್ಷ ಮಂಜುನಾಥ್ ಬಾವಿ ಹೇಳಿಕೆ ನೀಡಿದ್ದರು. ಈ ಬೆದರಿಕೆಯ ಆರೋಪದಡಿಯಲಿ ಶ್ರೀರಾಮಸೇನೆ ಜಿಲ್ಲಾಧ್ಯಕ್ಷ ಮಂಜುನಾಥ್ ಬಾವಿಯನ್ನು ರಾಯಚೂರು ಪಶ್ಚಿಮ ಠಾಣೆ ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದ್ದಾರೆ. ಬೆದರಿಕೆ  ಹಿನ್ನೆಲೆ ಧಾರವಾಡದಲ್ಲಿ ಸಾಹಿತಿಗಳಿಬ್ಬರ ನಿವಾಸಗಳಿಗೂ ಬಿಗಿ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿದೆ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

SCROLL FOR NEXT