ಪ್ರಧಾನ ಸುದ್ದಿ

ಮೀಸಲಾತಿ ಬಗ್ಗೆ ಮೋಹನ್ ಭಾಗವತ್ ಹೇಳಿಕೆ ಸಂವಿಧಾನಕ್ಕೆ ವಿರುದ್ಧ: ಜೆಡಿಯು

ಮೀಸಲಾತಿ ನಿಯಮವನ್ನು ಪರಾಮರ್ಶಿಸುವ ಬಗ್ಗೆ ಆರ್ ಎಸ್ಎಸ್ ಮುಖಂಡ ಮೋಹನ್ ಭಾಗವತ್ ನೀಡಿದ್ದ ಹೇಳಿಕೆ ವಿರುದ್ಧ ಜೆಡಿಯು ಆಕ್ರೋಶ ವ್ಯಕ್ತಪಡಿಸಿದೆ.

ನವದೆಹಲಿ: ಮೀಸಲಾತಿ ನಿಯಮವನ್ನು ಪರಾಮರ್ಶಿಸುವ ಬಗ್ಗೆ ಆರ್ ಎಸ್ಎಸ್ ಮುಖಂಡ ಮೋಹನ್ ಭಾಗವತ್ ನೀಡಿದ್ದ ಹೇಳಿಕೆ ವಿರುದ್ಧ ಜೆಡಿಯು ಆಕ್ರೋಶ ವ್ಯಕ್ತಪಡಿಸಿದ್ದು, ಇದು ಎಸ್.ಸಿ, ಎಸ್.ಟಿ ಹಾಗೂ ಹಿಂದುಳಿದ ವರ್ಗದ ಜನರನ್ನು ಬಲಹೀನಗೊಳಿಸುವ ಯತ್ನ ಎಂದು ಆರೋಪಿಸಿದೆ.

ಮೀಸಲಾತಿ ನಿಯಮವನ್ನು ಪರಾಮರ್ಶಿಸಲು ಸಮಿತಿ ರಚನೆ ಮಾಡುವ ಪ್ರಸ್ತಾವನೆಯನ್ನು ಜೆಡಿಯು ತಿರಸ್ಕರಿಸಿದ್ದು, ಮೀಸಲಾತಿಯಾ ಗುರಿ ಇನ್ನೂ ತಲುಪಿಲ್ಲ. ಈ ಹಂತದಲ್ಲಿ ನಿಯಮಗಳನ್ನು ಪರಿಶೀಲಿಸಿದರೆ ಅದರಿಂದ ಎಸ್.ಸಿ, ಎಸ್.ಟಿ ಹಾಗೂ ಹಿಂದುಳಿದ ವರ್ಗದ ಜನರು ಬಲಹೀನಗೊಳ್ಳುತ್ತಾರೆ ಎಂದು ಅಭಿಪ್ರಾಯಪಟ್ಟಿದೆ.

ಅಂಬೇಡ್ಕರ್, ಗಾಂಧಿ ಅವರ ಸಲಹೆಯಂತೆ ಮೀಸಲಾತಿಯನ್ನು ಸಂವಿಧಾನದಲ್ಲಿ ಜಾರಿಗೊಳಿಸಲಾಗಿದೆ. ಸಂವಿಧಾನ ರಚನೆ ಪ್ರಕ್ರಿಯೆಯಲ್ಲಿ ಆರ್.ಎಸ್.ಎಸ್ ಸಕ್ರಿಯವಾಗಿ ಪಾಲ್ಗೊಂಡಿರಲಿಲ್ಲ. ಆರ್.ಎಸ್.ಎಸ್ ಸಂವಿಧಾನದ ಸ್ಪೂರ್ತಿಗೆ ವಿರುದ್ಧವಾಗಿತ್ತು ಎಂದು ಜೆಡಿಯು ನಾಯಕ ಕೆ.ಸಿ ತ್ಯಾಗಿ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT