ಮೃತ ದೇಹಗಳ ಮಧ್ಯೆ ನಡೆದು ಹೋಗುತ್ತಿರುವ ಯಾತ್ರಿಕ 
ಪ್ರಧಾನ ಸುದ್ದಿ

ಹಜ್ ಯಾತ್ರೆ ವೇಳೆ ಕಾಲ್ತುಳಿತ, ಸಾವಿನ ಸಂಖ್ಯೆ 717ಕ್ಕೆ ಏರಿಕೆ

ಸೌದಿ ಅರೇಬಿಯಾದಲ್ಲಿರುವ ಮುಸ್ಲಿಮರ ಪವಿತ್ರ ಸ್ಥಳ ಮೆಕ್ಕಾದ ಮಸೀದಿ ಬಳಿ ಹಜ್ ಯಾತ್ರೆ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ ಮೃತಪಟ್ಟವ...

ದುಬೈ: ಸೌದಿ ಅರೇಬಿಯಾದಲ್ಲಿರುವ ಮುಸ್ಲಿಮರ ಪವಿತ್ರ ಸ್ಥಳ ಮೆಕ್ಕಾದ ಮಸೀದಿ ಬಳಿ ಹಜ್ ಯಾತ್ರೆ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ ಮೃತಪಟ್ಟವರ ಸಂಖ್ಯೆ 700ಕ್ಕೆ ಏರಿಕೆಯಾಗಿದ್ದು, ಸಾವಿನ ಸಂಖ್ಯೆ ಇನ್ನು ಹೆಚ್ಚುವ ಸಾಧ್ಯತೆ ಇದೆ.

ಬಕ್ರೀದ್ ಹಬ್ಬದ ಪ್ರಾರ್ಥನೆ ವೇಳೆ ನೂಕುನುಗ್ಗಲು ಉಂಟಾಗಿ ಕಾಲ್ತುಳಿತ ಸಂಭವಿಸಿದ್ದು, ದುರಂತದಲ್ಲಿ 717 ಮಂದಿ ಮೃತಪಟ್ಟಿದ್ದಾರೆ ಮತ್ತು 863 ಯಾತ್ರಿಕರು ತೀವ್ರವಾಗಿ ಗಾಯಗೊಂಡಿದ್ದಾರೆ ಎಂದು ಸೌದಿ ಅರೇಬಿಯಾ ನಾಗರಿಕ ರಕ್ಷಣಾ ನಿರ್ದೇಶನಾಲಯ ತಿಳಿಸಿದೆ.

ಮೆಕ್ಕಾದಿಂದ ಸುಮಾರು 5 ಕಿ.ಮೀ.ದೂರದಲ್ಲಿರುವ ಮೀನಾದಲ್ಲಿ ಈ ದುರಂತ ಸಂಭವಿಸಿದ್ದು, ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗುತ್ತಿದೆ. ಪರಸ್ಥಿತಿ ನಿಯಂತ್ರಣದಲ್ಲಿದ್ದು, ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೆಕ್ಕಾದಲ್ಲಿ ಕಳೆದ 15 ದಿನಗಳಲ್ಲಿ ಸಂಭವಿಸಿದ ಎರಡನೇ ಭೀಕರ ದುರಂತ ಇದಾಗಿದ್ದು, ಸೆಪ್ಟೆಂಬರ್ 12ರಂದು ಕ್ರೇನ್ ಕುಸಿದು 107 ಮಂದಿ ಮೃತಪಟ್ಟಿದ್ದರು. ಈಗ ಬಕ್ರೀದ್ ಮುನ್ನಾ ದಿನ ಮತ್ತೊಂದು ದುರಂತ ಸಂಭವಿಸಿದೆ.

ರಾಜ್ಯದಿಂದ  6 ಸಾವಿರ ಮಂದಿ ಹಜ್ ಯಾತ್ರೆಗೆ
ಈ ಬಾರಿ ಕರ್ನಾಟಕದಿಂದ ಸುಮಾರು 6.400 ಮಂದಿ ಹಜ್ ಯಾತ್ರೆಗೆ ತೆರಳಿದ್ದಾರೆ ಎಂದು ಮೂಲಗಳು ತಿಳಿಸಿವೆ. ಕರ್ನಾಟಕ ಸೇರಿದಂತೆ ಭಾರತದಿಂದ ಸುಮಾರು 1,20,000 ಮಂದಿ ಹಜ್ ಯಾತ್ರೆಗೆ ತೆರಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT