ಕನ್ನಡ ಪರ ಸಂಘಟನೆಳಿಂದ ಪ್ರತಿಭಟನೆ (ಸಂಗ್ರಹ ಚಿತ್ರ) 
ಪ್ರಧಾನ ಸುದ್ದಿ

ದೆಹಲಿಯಲ್ಲೂ ಪ್ರತಿಭಟನೆ

ಕಳಸಾಬಂಡೂರಿ ಯೋಜನೆ ಅನುಷ್ಠಾನಕ್ಕೆ ಒತ್ತಾಯಿಸಿ ಶನಿವಾರ ಕರ್ನಾಟಕದಲ್ಲಿ ಬಂದ್ ಆಚರಿಸಿದರೆ, ದೆಹಲಿಯ ಜಂತರ್ ಮಂತರ್ ನಲ್ಲಿ ಪ್ರತಿಭಟನೆ ನಡೆಸಲಾಯಿತು...

ನವದೆಹಲಿ: ಕಳಸಾಬಂಡೂರಿ ಯೋಜನೆ ಅನುಷ್ಠಾನಕ್ಕೆ ಒತ್ತಾಯಿಸಿ ಶನಿವಾರ ಕರ್ನಾಟಕದಲ್ಲಿ ಬಂದ್ ಆಚರಿಸಿದರೆ, ದೆಹಲಿಯ ಜಂತರ್ ಮಂತರ್ ನಲ್ಲಿ ಪ್ರತಿಭಟನೆ ನಡೆಸಲಾಯಿತು.

ಕಸ್ತೂರಿ ಕರ್ನಾಟಕ ಜನಪರ ವೇದಿಕೆಯ ನೂರಾರು ಕಾರ್ಯಕರ್ತರು ಕೇಂದ್ರ ಮತ್ತು ಗೋವಾ ಸರ್ಕಾರದ ವಿರುದ್ಧ ಘೋಷಣೆ ಕೂಗಿ, ಮಹಾದಾಯಿ ನೀರು ಬಳಸಿಕೊಳ್ಳಲು ಅನುಮತಿ ನೀಡಬೇಕು  ಎಂದು ಆಗ್ರಹಿಸಿದರು. ಕರ್ನಾಟಕ ತನ್ನ ಪಾಲಿನ ನೀರನ್ನು ಬಳಸಿಕೊಳ್ಳಲು ಗೋವಾ ಸರ್ಕಾರ ತಕರಾರು ತೆಗೆದಿರುವುದು ಸರಿಯಲ್ಲ. ಕೇಂದ್ರ ಸರ್ಕಾರ ಕೂಡಲೇ ಮಧ್ಯಪ್ರವೇಶಿಸಿ ಯೋಜನೆ  ಅನುಷ್ಠಾನಕ್ಕೆ ಅನುವು ಮಾಡಿಕೊಡಬೇಕು ಎಂದು ಆಗ್ರಹಿಸಿದರು. ಇದೇ ವೇಳೆ, ಕಾವೇರಿ ಕಣಿವೆಯ ಯೋಜನೆಗಳಿಗೆ ಕೇಂದ್ರ ಅನುಮತಿ ನೀಡಬೇಕು, ಕಬ್ಬು ಬೆಳೆಗಾರರ ಬಾಕಿ ಪಾವತಿ  ಮಾಡಬೇಕು, ರೇಷ್ಮೆ ಮೇಲಿನ ಆಮದು ಸುಂಕವನ್ನು ಶೇ.35ಕ್ಕೆ ಏರಿಸಬೇಕು ಎಂದು ಪ್ರತಿಭಟನಾ ನಿರತರು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ವೇದಿಕೆ ಅಧ್ಯಕ್ಷ ರಮೇಶ್‍ಗೌಡ, ಕರ್ನಾಟಕ ತನ್ನ ಪಾಲಿನ ನೀರನ್ನು ಬಳಸಿಕೊಳ್ಳಲು ಕೇಂದ್ರ ಮತ್ತು ನೆರೆರಾಜ್ಯಗಳ ಅನುಮತಿ ಕೇಳಬೇಕಾದ ಸ್ಥಿತಿ ಇದೆ.  ಕೇಂದ್ರ ಸರ್ಕಾರ ಕುಡಿಯುವ ನೀರಿನ ಯೋಜನೆಗಳಿಗೆ ತ್ವರಿತವಾಗಿ ಅನುಮಿತಿ ನೀಡಬೇಕು. ಈ ವಿಷಯದಲ್ಲಿ ರಾಜಕೀಯ, ತಾರತಮ್ಯ ಮಾಡಬಾರದು ಎಂದು ಒತ್ತಾಯಿಸಿದರು.

ಗೋಡೆ ಒಡೆಯುತ್ತೇವೆ
ಅ.10 ರಂದು ಬೆಳಗಾವಿಯ ಖಾನಾಪುರದ ಕಣಕುಂಬಿ ಬಳಿ ಕಳಸಾ ಬಂಡೂರಿ ನಾಲೆಯ ಗೋಡೆ ಒಡೆಯುವ ಚಳವಳಿ ಹಮ್ಮಿಕೊಂಡಿದ್ದು, ಪ್ರತಿಯೊಬ್ಬರು ಗುದ್ದಲಿ ತರಬೇಕು ಎಂದು ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಕರೆ ನೀಡಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪ್ರಹ್ಲಾದ್ ಜೋಶಿ ಕೊಳಕು ಮನುಷ್ಯ; ಅತ್ಯಾಚಾರಿಯನ್ನು ರಕ್ಷಿಸುವವರು ನೂತನ ಶಿಕ್ಷಣ ಸಚಿವರಾಗಿದ್ದಾರೆ: ರಾಹುಲ್ ಗಂಭೀರ ಆರೋಪ, Video

ದೆಹಲಿಗೆ ಬಂದು ನಾಟಕವಾಡುವ ನಿಮಗೆ KPSC ಹಗರಣ ಅನ್ಯಾಯ ಅನಿಸಲಿಲ್ಲವೇ?: ಲೋಕಸಭೆಯಲ್ಲಿ ಸಿಎಂ ಶಿವಕುಮಾರ್ ವಿರುದ್ಧ ತೇಜಸ್ವಿ ವಾಗ್ದಾಳಿ!

ಕಾಕಿನಾಡ ಯುವಕನಿಗೆ ₹1 ಕೋಟಿ ಸಂಬಳದ AI ಉದ್ಯೋಗ: ವಿಶೇಷಚೇತನ ಟೇಲರ್ ಪುತ್ರನಿಗೆ ಬಂಪರ್ ಆಫರ್!

ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ 'ಕಿರುಕುಳ' ಮುಂದುವರಿದರೆ ಸರಿ ಇರಲ್ಲ: ಕೇಂದ್ರ ಸರ್ಕಾರಕ್ಕೆ ವಾರ್ನಿಂಗ್ ಕೊಟ್ಟ ದಿಪ್ಕೆ!

ರಾಜ್ಯ ವಿಧಾನಮಂಡಲದ ಮುಂಗಾರು ಅಧಿವೇಶನ ಆಗಸ್ಟ್ 13 ರಿಂದ ಆರಂಭ; ಟಾಪ್‌ 10 ಚರ್ಚಾ ವಿಷಯಗಳಿವು