2006ರ ಮುಂಬೈ ಸರಣಿ ಸ್ಫೋಟ ಪ್ರಕರಣ (ಸಂಗ್ರಹ ಚಿತ್ರ) 
ಪ್ರಧಾನ ಸುದ್ದಿ

ಮುಂಬೈ ಸರಣಿ ಸ್ಫೋಟ: ಐವರಿಗೆ ಗಲ್ಲು, ಏಳು ಮಂದಿಗೆ ಜೀವಾವಧಿ ಶಿಕ್ಷೆ

2006ರ ಮುಂಬೈ ಸರಣಿ ಸ್ಫೋಟ ಪ್ರಕರಣದ 12 ಅಪರಾಧಿಗಳಿಗೆ ಮೋಕಾ ವಿಶೇಷ ನ್ಯಾಯಾಲಯ ಬುಧವಾರ ಶಿಕ್ಷೆ ಪ್ರಮಾಣ ಪ್ರಕಟಿಸಿದ್ದು, ಐವರು ಅಪರಾಧಿಗಳಿಗೆ ಗಲ್ಲು...

ಮುಂಬೈ: 2006ರ ಮುಂಬೈ ಸರಣಿ ಸ್ಫೋಟ ಪ್ರಕರಣದ 12 ಅಪರಾಧಿಗಳಿಗೆ ಮೋಕಾ(ಸಂಘಟಿತ ಅಪರಾಧಗಳ ನಿಯಂತ್ರಣ ಕಾಯ್ದೆ) ವಿಶೇಷ ನ್ಯಾಯಾಲಯ ಬುಧವಾರ ಶಿಕ್ಷೆ ಪ್ರಮಾಣ ಪ್ರಕಟಿಸಿದ್ದು, ಐವರುಗೆ ಗಲ್ಲು ಶಿಕ್ಷೆ ಹಾಗೂ ಏಳು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ.

ಪ್ರಕರಣದಲ್ಲಿ ತಪ್ಪಿತಸ್ಥರೆಂದು ಸಾಬೀತಾಗಿದ್ದ, ರೈಲಿನಲ್ಲಿ ಬಾಂಬ್ ಇಟ್ಟಿದ್ದ ಕಮಲ್ ಅಹ್ಮದ್ ಅನ್ಸಾರಿ(37), ಮೊಹಮ್ಮದ್ ಫೈಸಲ್ ಶೇಕ್(36), ಇಹ್ತೆಶಾಮ್ ಸಿದ್ದಿಕಿ(30), ನಾವೇದ್ ಹುಸೇನ್ ಖಾನ್ ಹಾಗೂ ಆಸಿಫ್ ಖಾನ್ ಗೆ ಗಲ್ಲು ಶಿಕ್ಷೆ ವಿಧಿಸಲಾಗಿದೆ.

ಇನ್ನು ಇತರೆ ತಪ್ಪಿತಸ್ಥರಾದ ಮೊಹಮ್ಮದ್ ಮಜೀದ್ ಶಫಿ(32), ಶೇಕ್ ಆಲಂ ಶೇಕ್(41), ಮೊಹಮ್ಮದ್ ಸಾಜಿದ್ ಅನ್ಸಾರಿ(34), ಮುಝಾಮಿಲ್ ಶೇಕ್(27), ಸೋಹೈಲ್ ಮೆಹಮೂದ್ ಶೇಕ್(43), ಜಮೀರ್ ಅಹ್ಮದ್ ಶೇಕ್ (36), ತನ್ವೀರ್ ಅಹ್ಮದ್ ಅನ್ಸಾರಿ(37)ಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ.

ಮೋಕಾ ಕೋರ್ಟ್‌ ನ್ಯಾಯಾಧೀಶ ಯತಿನ್‌ ಡಿ. ಶಿಂಧೆ ಅವರು ಪ್ರಕರಣದ ವಿಚಾರಣೆಯನ್ನು ಕಳೆದ ವರ್ಷ ಆ.19ರಂದು ಅಂತ್ಯಗೊಳಿಸಿದ್ದರು. ಕಳೆದ 9 ವರ್ಷಗಳಿಂದ ಪ್ರಕರಣದ ವಿಚಾರಣೆ ನಡೆಸಲಾಗಿದ್ದು, ಪ್ರಾಸಿಕ್ಯೂಷನ್‌ ಪರ 192 ಸಾಕ್ಷಿಗಳ ಹೇಳಿಕೆಗಳನ್ನು ಪಡೆಯಲಾಗಿತ್ತು. ಸಾಕ್ಷಿಗಳ ಹೇಳಿಕೆಗಳನ್ನು 5500 ಪುಟಗಳಲ್ಲಿ ದಾಖಲಿಸಲಾಗಿತ್ತು. ಪ್ರಕರಣದಲ್ಲಿ 13 ಆರೋಪಿಗಳು ಬಂಧಿತರಾಗಿದ್ದು, ಅಜಂ ಚೀಮಾ ಸೇರಿ 14 ಮಂದಿ ಇನ್ನೂ ನಾಪತ್ತೆಯಾದ್ದಾರೆ.

2006 ಜು.11ರಂದು ಮುಂಬೈ ಉಪನಗರ ರೈಲಿನಲ್ಲಿ ಸರಣಿ ಸ್ಫೋಟ ಸಂಭವಿಸಿತ್ತು. ಖಾರ್‌ರೋಡ್‌-ಸಾಂತಾಕ್ರೂಜ್‌ ಮತ್ತು ಬೊರಿವಲಿ ಮಧ್ಯೆ ವಿವಿಧೆಡೆ 7 ಆರ್‌ಡಿಎಕ್ಸ್‌ ಬಾಂಬ್ ಸ್ಫೋಟಿಸಿ, 200 ಮಂದಿಯನ್ನು ಬಲಿತೆಗೆದುಕೊಂಡಿದ್ದರು. ಅಲ್ಲದೆ 800ಕ್ಕೂ ಹೆಚ್ಚು ಜನರನ್ನು ಗಾಯಗೊಳಿಸಿದ್ದ ಸ್ಫೋಟ ಪ್ರಕರಣದ ವಿಚಾರಣೆ ನಡೆಸುತ್ತಿದ್ದ ವಿಶೇಷ ಮೋಕಾ ನ್ಯಾಯಾಲಯ, 13 ಆರೋಪಿಗಳ ಪೈಕಿ ಒಬ್ಬರನ್ನು ಹೊರತುಪಡಿಸಿ ಉಳಿದೆಲ್ಲಾ 12 ಮಂದಿ ತಪ್ಪಿತಸ್ಥರು ಎಂದು ತೀರ್ಪು ನೀಡಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT