ಪಿಯು ಬೋರ್ಡ್ 
ಪ್ರಧಾನ ಸುದ್ದಿ

ಪಿಯು ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ: ಸಿಐಡಿಯಿಂದ ಮತ್ತಿಬ್ಬರ ಬಂಧನ

ದ್ವಿತೀಯ ಪಿಯುಸಿ ರಸಾಯನಶಾಸ್ತ್ರ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ತನಿಖೆಯನ್ನು ಮತ್ತಷ್ಟು ಚುರುಕುಗೊಳಿಸಿರುವ ಸಿಐಡಿ,...

ಬೆಂಗಳೂರು: ದ್ವಿತೀಯ ಪಿಯುಸಿ ರಸಾಯನಶಾಸ್ತ್ರ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ತನಿಖೆಯನ್ನು ಮತ್ತಷ್ಟು ಚುರುಕುಗೊಳಿಸಿರುವ ಸಿಐಡಿ, ಬುಧವಾರ ಮತ್ತೆ ಇಬ್ಬರು ಆರೋಪಿಗಳನ್ನು ಬಂಧಿಸಿದೆ.
ಬೆಂಗಳೂರಿನ ಸದಾಶಿವನಗರದಲ್ಲಿರುವ ಪೂರ್ಣಪ್ರಜ್ಞ ಪಿಯು ಕಾಲೇಜ್ ನ ದೈಹಿಕ ಶಿಕ್ಷಕ, ಮಲ್ಲೇಶ್ವರಂ ನಿವಾಸಿ ಅನಿಲ್ ಹಾಗೂ ಬೆಂಗಳೂರಿನ ಮತ್ತಿಕೆರೆಯಲ್ಲಿರುವ ಸರ್ಕಾರಿ ಶಾಲೆಯ ದೈಹಿಕ ಶಿಕ್ಷಕ ಸತೀಶ್ ನನ್ನು ಇಂದು ಸಿಐಡಿ ವಶಕ್ಕೆ ಪಡೆದಿದ್ದು, ಆರೋಪಿಗಳನ್ನು ತೀವ್ರ ವಿಚಾರಣೆಗೊಳಪಡಿಸಿದೆ.
ಪ್ರಶ್ನೆ ಪತ್ರಿಕೆ ಮಾರಾಟ ಜಾಲದಲ್ಲಿ ಭಾಗಿಯಾಗಿದ್ದ ಆರೋಪದ ಮೇಲೆ ಅನಿಲ್ ಹಾಗೂ ಸತೀಶ್ ನನ್ನು ಸಿಐಡಿ ಪೊಲೀಸರು ಬಂಧಿಸಿದ್ದಾರೆ.
ಪ್ರಕರಣ ಸಂಬಂಧ ಈಗಾಗಲೇ ಸಚಿವರೊಬ್ಬರ ವಿಶೇಷ ಅಧಿಕಾರಿ ಸೇರಿದಂತೆ ಪ್ರಮುಖ ಮೂವರು ಆರೋಪಿಗಳನ್ನು ಬಂಧಿಸಿದ್ದ ಸಿಐಡಿ ಈಗ ಮತ್ತೆ ಇಬ್ಬರನ್ನು ವಶಕ್ಕೆ ಪಡೆದಿದೆ. 
ಪ್ರಶ್ನೆ ಪತ್ರಿಕೆ ಸೋರಿಕೆ ದಂಧೆಯು ಹಲವು ವರ್ಷಗಳಿಂದ ನಡೆಯುತ್ತಿದ್ದು, ಅದರಲ್ಲಿ ಹಲವು ಟ್ಯೂಟೋರಿಯಲ್‌ಗಳು ಹಾಗೂ ಶಿಕ್ಷಕರು ಭಾಗಿಯಾಗಿರುವ ಮಾಹಿತಿ ದೊರೆತಿದೆ, ಅದನ್ನು ಆಧರಿಸಿ ಕಾರ್ಯಾಚರಣೆ ನಡೆಸಿರುವ ಸಿಐಡಿ, ಹಲವು ಅಧಿಕಾರಿಗಳು ಮತ್ತು ಶಿಕ್ಷಕರನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸುತ್ತಿದೆ.
ಪ್ರಶ್ನೆ ಪತ್ರಿಕೆ ಸೋರಿಕೆಯಲ್ಲಿ ಗುಬ್ಬಿ ತಾಲ್ಲೂಕಿನ ಕಾಗೇರಿಯ ಶಿವಕುಮಾರ್ ಅಲಿಯಾಸ್ ಶಿವಕುಮಾರಸ್ವಾಮಿ ಪ್ರಮುಖ ಪಾತ್ರವಹಿಸಿರುವುದು ಪತ್ತೆಯಾಗಿದೆ. ಹಲವು ವರ್ಷಗಳಿಂದ ದಂಧೆ ನಡೆಸುತ್ತಿರುವ ಈತ ಮೊದಲು ಉಪನ್ಯಾಸಕನಾಗಿರುವುದು ಗೊತ್ತಾಗಿದ್ದು ಈಗ ತಲೆ ಮರೆಸಿಕೊಂಡಿರುವ ಆತನಿಗಾಗಿ ಸಿಐಡಿ ತೀವ್ರ ಶೋಧ ನಡೆಸುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT