ಶ್ರೀನಗರದ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಮುಂದುವರೆದ ಉದ್ವಿಗ್ನತೆ 
ಪ್ರಧಾನ ಸುದ್ದಿ

ಮುಂದುವರೆದ ಎನ್ ಐ ಟಿ ಜಟಾಪಟಿ; ಕಾಶ್ಮೀರಿಯೇತರ ವಿದ್ಯಾರ್ಥಿಗಳಿಂದ ತರಗತಿಗಳ ಬಹಿಷ್ಕಾರ

ಶ್ರೀನಗರದ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ (ಎನ್ ಐ ಟಿ) ಜಟಾಪಟಿ ಮುಂದುವರೆದಿದ್ದು, ಅನ್ಯ ಕಾಶ್ಮೀರಿಯೇತರ ವಿದ್ಯಾರ್ಥಿಗಳು ಗುರುವಾರ ತರಗತಿಗಳಿಂದ...

ಶ್ರೀನಗರ: ಶ್ರೀನಗರದ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ (ಎನ್ ಐ ಟಿ) ಜಟಾಪಟಿ ಮುಂದುವರೆದಿದ್ದು, ಕಾಶ್ಮೀರಿಯೇತರ ವಿದ್ಯಾರ್ಥಿಗಳು ಗುರುವಾರ ತರಗತಿಗಳಿಂದ ದೂರ ಉಳಿದಿದ್ದಾರೆ.

ಉದ್ವಿಗ್ನತೆ ತಿಳಿಗೊಳಿಸಲು ಹಾಗೂ ಕಾಶ್ಮೀರಿಯೇತರ  ವಿದ್ಯಾರ್ಥಿಗಳ ಜೊತೆಗೆ ಮಾತುಕತೆ ನಡೆಸಲು ಜಮ್ಮು ಮತ್ತು ಕಾಶ್ಮೀರದ ಉಪಮುಖ್ಯಮಂತ್ರಿ ನಿರ್ಮಲ್ ಸಿಂಗ್ ಕೂಡ ಗುರುವಾರ ಕಾಲೇಜಿಗೆ ಆಗಮಿಸಿದ್ದಾರೆ.

ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಭೇಟಿ ಮಾಡಲು ರಾಜ್ಯದ ಪೊಲೀಸ್ ಮಹಾನಿರ್ದೇಶಕ ಕೆ ರಾಜೆಂದ್ರ ಕುಮಾರ್ ಕೂಡ ಕ್ಯಾಂಪಸ್ಸಿಗೆ ಭೇಟಿ ನೀಡಿದ್ದರು.

ಹೊರಗಿನಿಂದ ಬಂದಿರುವ ವಿದ್ಯಾರ್ಥಿಗಳು ಹಿಂಸೆಯಲ್ಲಿ ತೊಡಗಿರುವುದಕ್ಕೆ ಸಾಕ್ಷ್ಯವಾಗಿ ಪೊಲೀಸರು ವಿಡಿಯೋ ಬಿಡುಗಡೆ ಮಾಡಿದ್ದಾರೆ. ಕೆಲವು ವಿದ್ಯಾರ್ಥಿಗಳ ವಿರುದ್ಧ ಸಾರ್ವಜನಿಕ ಆಸ್ತಿಪಾಸ್ತಿ ಹಾನಿ, ಸೇವಾ ನಿರತ ಸಾರ್ವಜನಿಕ ಸಿಬ್ಬಂದಿಯ ಕೆಲಸಕ್ಕೆ ತಡೆ ಒಡ್ಡಿದ ಆರೋಪದ ಮೇಲೆ ಎರಡು ಎಫ್ ಐ ಆರ್ ಗಳನ್ನು ನಿಗೀನ್ ಪೋಲಿ ಠಾಣೆಯಲ್ಲಿ ದಾಖಲಿಸಲಾಗಿದೆ" ಎಂದು ಪೊಲೀಸರು ತಿಳಿಸಿದ್ದಾರೆ.

ಕೇಂದ್ರ ಮೀಸಲು ಪೊಲೀಸ್ ಪಡೆ ಮತ್ತು ಸೀಮಾ ಸುರಕ್ಷಾ ಬಲ (ಎಸ್ ಎಸ್ ಬಿ) ಪಡೆಗಳು ಕ್ಯಾಂಪಸ್ಸಿನಲ್ಲಿ ಬೀಡು ಬಿಟ್ಟಿದ್ದು, ದ್ವಾರಗಳಲ್ಲಿ ಪ್ರಾದೇಶಿಕ ಪೊಲೀಸರನ್ನು ನಿಯೋಜಿಸಲಾಗಿದೆ.

ತಮ್ಮ ಪೋಷಕರ ಬಳಿ ತೆರಳ ಬಯಸುವ ವಿದ್ಯಾರ್ಥಿಗಳು, ಹೊರ ಹೋಗಬೇಕಿದ್ದಲ್ಲಿ ಪೋಷಕರ ದೂರವಾಣಿ ಸಂಖ್ಯೆ ನೀಡಿ ಪರವಾನಗಿ ಪಡೆಯಬೇಕೆಂಬ ಆದೇಶವನ್ನು ಎನ್ ಐ ಟಿ ಆಡಳಿತ ಮಂಡಳಿ ಹೊರಡಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

20 ವರ್ಷ ಸಾಕಿ ಬೆಳೆಸಿದ 'ಅಶ್ವತ್ಥ'ಕ್ಕೆ ಕಿಡಿಗೇಡಿಗಳ ಕೊಡಲಿ ಪೆಟ್ಟು, ಬಿಕ್ಕಿ ಬಿಕ್ಕಿ ಅತ್ತ 'ವೃಕ್ಷಮಾತೆ', ಇಬ್ಬರ ಬಂಧನ, video viral

2nd Test: ವಿಂಡೀಸ್ ವಿರುದ್ಧ ಕುಲದೀಪ್ ಯಾದವ್ ಭರ್ಜರಿ ಬೌಲಿಂಗ್, ವಿಶ್ವ ದಾಖಲೆ

2nd Test, Day 3: ಮೊದಲ ಇನ್ನಿಂಗ್ಸ್ ನಲ್ಲಿ 248 ರನ್ ಗೆ ವಿಂಡೀಸ್ ಆಲೌಟ್, ಫಾಲೋಆನ್ ಹೇರಿದ ಭಾರತ

SCROLL FOR NEXT