ಶ್ರೀನಗರದ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಮುಂದುವರೆದ ಉದ್ವಿಗ್ನತೆ 
ಪ್ರಧಾನ ಸುದ್ದಿ

ಮುಂದುವರೆದ ಎನ್ ಐ ಟಿ ಜಟಾಪಟಿ; ಕಾಶ್ಮೀರಿಯೇತರ ವಿದ್ಯಾರ್ಥಿಗಳಿಂದ ತರಗತಿಗಳ ಬಹಿಷ್ಕಾರ

ಶ್ರೀನಗರದ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ (ಎನ್ ಐ ಟಿ) ಜಟಾಪಟಿ ಮುಂದುವರೆದಿದ್ದು, ಅನ್ಯ ಕಾಶ್ಮೀರಿಯೇತರ ವಿದ್ಯಾರ್ಥಿಗಳು ಗುರುವಾರ ತರಗತಿಗಳಿಂದ...

ಶ್ರೀನಗರ: ಶ್ರೀನಗರದ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ (ಎನ್ ಐ ಟಿ) ಜಟಾಪಟಿ ಮುಂದುವರೆದಿದ್ದು, ಕಾಶ್ಮೀರಿಯೇತರ ವಿದ್ಯಾರ್ಥಿಗಳು ಗುರುವಾರ ತರಗತಿಗಳಿಂದ ದೂರ ಉಳಿದಿದ್ದಾರೆ.

ಉದ್ವಿಗ್ನತೆ ತಿಳಿಗೊಳಿಸಲು ಹಾಗೂ ಕಾಶ್ಮೀರಿಯೇತರ  ವಿದ್ಯಾರ್ಥಿಗಳ ಜೊತೆಗೆ ಮಾತುಕತೆ ನಡೆಸಲು ಜಮ್ಮು ಮತ್ತು ಕಾಶ್ಮೀರದ ಉಪಮುಖ್ಯಮಂತ್ರಿ ನಿರ್ಮಲ್ ಸಿಂಗ್ ಕೂಡ ಗುರುವಾರ ಕಾಲೇಜಿಗೆ ಆಗಮಿಸಿದ್ದಾರೆ.

ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಭೇಟಿ ಮಾಡಲು ರಾಜ್ಯದ ಪೊಲೀಸ್ ಮಹಾನಿರ್ದೇಶಕ ಕೆ ರಾಜೆಂದ್ರ ಕುಮಾರ್ ಕೂಡ ಕ್ಯಾಂಪಸ್ಸಿಗೆ ಭೇಟಿ ನೀಡಿದ್ದರು.

ಹೊರಗಿನಿಂದ ಬಂದಿರುವ ವಿದ್ಯಾರ್ಥಿಗಳು ಹಿಂಸೆಯಲ್ಲಿ ತೊಡಗಿರುವುದಕ್ಕೆ ಸಾಕ್ಷ್ಯವಾಗಿ ಪೊಲೀಸರು ವಿಡಿಯೋ ಬಿಡುಗಡೆ ಮಾಡಿದ್ದಾರೆ. ಕೆಲವು ವಿದ್ಯಾರ್ಥಿಗಳ ವಿರುದ್ಧ ಸಾರ್ವಜನಿಕ ಆಸ್ತಿಪಾಸ್ತಿ ಹಾನಿ, ಸೇವಾ ನಿರತ ಸಾರ್ವಜನಿಕ ಸಿಬ್ಬಂದಿಯ ಕೆಲಸಕ್ಕೆ ತಡೆ ಒಡ್ಡಿದ ಆರೋಪದ ಮೇಲೆ ಎರಡು ಎಫ್ ಐ ಆರ್ ಗಳನ್ನು ನಿಗೀನ್ ಪೋಲಿ ಠಾಣೆಯಲ್ಲಿ ದಾಖಲಿಸಲಾಗಿದೆ" ಎಂದು ಪೊಲೀಸರು ತಿಳಿಸಿದ್ದಾರೆ.

ಕೇಂದ್ರ ಮೀಸಲು ಪೊಲೀಸ್ ಪಡೆ ಮತ್ತು ಸೀಮಾ ಸುರಕ್ಷಾ ಬಲ (ಎಸ್ ಎಸ್ ಬಿ) ಪಡೆಗಳು ಕ್ಯಾಂಪಸ್ಸಿನಲ್ಲಿ ಬೀಡು ಬಿಟ್ಟಿದ್ದು, ದ್ವಾರಗಳಲ್ಲಿ ಪ್ರಾದೇಶಿಕ ಪೊಲೀಸರನ್ನು ನಿಯೋಜಿಸಲಾಗಿದೆ.

ತಮ್ಮ ಪೋಷಕರ ಬಳಿ ತೆರಳ ಬಯಸುವ ವಿದ್ಯಾರ್ಥಿಗಳು, ಹೊರ ಹೋಗಬೇಕಿದ್ದಲ್ಲಿ ಪೋಷಕರ ದೂರವಾಣಿ ಸಂಖ್ಯೆ ನೀಡಿ ಪರವಾನಗಿ ಪಡೆಯಬೇಕೆಂಬ ಆದೇಶವನ್ನು ಎನ್ ಐ ಟಿ ಆಡಳಿತ ಮಂಡಳಿ ಹೊರಡಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT