ಮಲ್ಲಿಕಾರ್ಜುನ್ ಖರ್ಗೆ 
ಪ್ರಧಾನ ಸುದ್ದಿ

ಬಿಜೆಪಿ ರಾಜ್ಯಾಧ್ಯಕ್ಷರು ಯಾರಾದರೇನು, ಕೇಂದ್ರ ಬರ ಪರಿಸ್ಥಿತಿಗೆ ಸ್ಪಂದಿಸಲಿ: ಖರ್ಗೆ

ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ರಾಜ್ಯ ಬಿಜೆಪಿ ಸಾರಥ್ಯ ನೀಡಿರುವುದಕ್ಕೆ ಖಾರವಾಗಿಯೇ ಪ್ರತಿಕ್ರಿಯಿಸಿರುವ ಲೋಕಸಭೆ...

ನವದೆಹಲಿ: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ರಾಜ್ಯ ಬಿಜೆಪಿ ಸಾರಥ್ಯ ನೀಡಿರುವುದಕ್ಕೆ ಖಾರವಾಗಿಯೇ ಪ್ರತಿಕ್ರಿಯಿಸಿರುವ ಲೋಕಸಭೆ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ್ ಖರ್ಗೆ ಅವರು, ಬಿಜೆಪಿ ರಾಜ್ಯಾಧ್ಯಕ್ಷರು ಯಾರಾಗುತ್ತಿದ್ದಾರೆ ಎನ್ನುವುದು ಈಗ ರ್ಚಚಿಸಬೇಕಾದ ವಿಚಾರವೇ ಅಲ್ಲ. ಕೇಂದ್ರ ಸರ್ಕಾರ ಮೊದಲು ರಾಜ್ಯದ ಬರ ಪರಿಸ್ಥಿತಿಗೆ ಸ್ಪಂದಿಸಲಿ ಎಂದಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷರಾಗಿ ಯಡಿಯೂರಪ್ಪನವರೇ ಆಗಲಿ ಅಥವಾ ಬೇರಿನ್ನಾರೇ ಆಗಲಿ, ಅದು ಮುಖ್ಯವಲ್ಲ. ಕರ್ನಾಟಕದ ಬಹುತೇಕ ಜಿಲ್ಲೆಗಳು ಇಂದು ಬರ ಸಮಸ್ಯೆಯಿಂದ ತತ್ತರಿಸುತ್ತಿವೆ. ಈ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಇಂಥ ರಾಜ್ಯಗಳಿಗೆ ನೆರವು ನೀಡಬೇಕು. ಈ ಬಗ್ಗೆ ಬಿಜೆಪಿ ಗಮನ ಕೊಡಬೇಕಿದೆ ಎಂದು ಖರ್ಗೆ ಹೇಳಿದ್ದಾರೆ.
ಈ ಕುರಿತು ಎಎನ್​ಐ ಸುದ್ದಿ ಸಂಸ್ಥೆಗೆ ಪ್ರತಿಕ್ರಿಯಿಸಿರುವ ಅವರು, ಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಗಳು ಇಂದು ಸಂಕಷ್ಟದಲ್ಲಿವೆ. ಬರ ಪರಿಸ್ಥತಿ ಎದುರಿಸುತ್ತಿವೆ. ಆದರೆ ಕೇಂದ್ರ ಸರ್ಕಾರ ಕರ್ನಾಟಕ ಕೇಳಿದ ಅರ್ಧದಷ್ಟು ಪರಿಹಾರ ಧನವನ್ನು ನೀಡಿಲ್ಲ. ಮೊದಲು ಬರ ಪರಿಸ್ಥಿತಿಯಲ್ಲಿರುವ ಜಿಲ್ಲೆಗಳ ಜನತೆಗೆ ಸ್ಪಂದಿಸಲು ಮುಂದಾಗಲಿ ಎಂದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

SCROLL FOR NEXT