ಮಲ್ಲಿಕಾರ್ಜುನ್ ಖರ್ಗೆ 
ಪ್ರಧಾನ ಸುದ್ದಿ

ಬಿಜೆಪಿ ರಾಜ್ಯಾಧ್ಯಕ್ಷರು ಯಾರಾದರೇನು, ಕೇಂದ್ರ ಬರ ಪರಿಸ್ಥಿತಿಗೆ ಸ್ಪಂದಿಸಲಿ: ಖರ್ಗೆ

ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ರಾಜ್ಯ ಬಿಜೆಪಿ ಸಾರಥ್ಯ ನೀಡಿರುವುದಕ್ಕೆ ಖಾರವಾಗಿಯೇ ಪ್ರತಿಕ್ರಿಯಿಸಿರುವ ಲೋಕಸಭೆ...

ನವದೆಹಲಿ: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ರಾಜ್ಯ ಬಿಜೆಪಿ ಸಾರಥ್ಯ ನೀಡಿರುವುದಕ್ಕೆ ಖಾರವಾಗಿಯೇ ಪ್ರತಿಕ್ರಿಯಿಸಿರುವ ಲೋಕಸಭೆ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ್ ಖರ್ಗೆ ಅವರು, ಬಿಜೆಪಿ ರಾಜ್ಯಾಧ್ಯಕ್ಷರು ಯಾರಾಗುತ್ತಿದ್ದಾರೆ ಎನ್ನುವುದು ಈಗ ರ್ಚಚಿಸಬೇಕಾದ ವಿಚಾರವೇ ಅಲ್ಲ. ಕೇಂದ್ರ ಸರ್ಕಾರ ಮೊದಲು ರಾಜ್ಯದ ಬರ ಪರಿಸ್ಥಿತಿಗೆ ಸ್ಪಂದಿಸಲಿ ಎಂದಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷರಾಗಿ ಯಡಿಯೂರಪ್ಪನವರೇ ಆಗಲಿ ಅಥವಾ ಬೇರಿನ್ನಾರೇ ಆಗಲಿ, ಅದು ಮುಖ್ಯವಲ್ಲ. ಕರ್ನಾಟಕದ ಬಹುತೇಕ ಜಿಲ್ಲೆಗಳು ಇಂದು ಬರ ಸಮಸ್ಯೆಯಿಂದ ತತ್ತರಿಸುತ್ತಿವೆ. ಈ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಇಂಥ ರಾಜ್ಯಗಳಿಗೆ ನೆರವು ನೀಡಬೇಕು. ಈ ಬಗ್ಗೆ ಬಿಜೆಪಿ ಗಮನ ಕೊಡಬೇಕಿದೆ ಎಂದು ಖರ್ಗೆ ಹೇಳಿದ್ದಾರೆ.
ಈ ಕುರಿತು ಎಎನ್​ಐ ಸುದ್ದಿ ಸಂಸ್ಥೆಗೆ ಪ್ರತಿಕ್ರಿಯಿಸಿರುವ ಅವರು, ಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಗಳು ಇಂದು ಸಂಕಷ್ಟದಲ್ಲಿವೆ. ಬರ ಪರಿಸ್ಥತಿ ಎದುರಿಸುತ್ತಿವೆ. ಆದರೆ ಕೇಂದ್ರ ಸರ್ಕಾರ ಕರ್ನಾಟಕ ಕೇಳಿದ ಅರ್ಧದಷ್ಟು ಪರಿಹಾರ ಧನವನ್ನು ನೀಡಿಲ್ಲ. ಮೊದಲು ಬರ ಪರಿಸ್ಥಿತಿಯಲ್ಲಿರುವ ಜಿಲ್ಲೆಗಳ ಜನತೆಗೆ ಸ್ಪಂದಿಸಲು ಮುಂದಾಗಲಿ ಎಂದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

ಬಿಕಿನಿ ಧರಿಸಿರುವ ಮಹಿಳೆಯರ ಜೊತೆಗೆ ಸ್ಟೀಫನ್ ಹಾಕಿಂಗ್! Epstein ಫೈಲ್ಸ್ ನಲ್ಲಿ ಪೋಟೋ ಬಿಡುಗಡೆ

ಅಜಿತ್ ಪವಾರ್ ವಿಮಾನ ಪತನ ವಿಧ್ವಂಸಕ ಕೃತ್ಯವೋ ಅಥವಾ ನಿರ್ಲಕ್ಷ್ಯವೋ? ಸಿಐಡಿ ಹೇಳಿದ್ದೇನು?

'The Kerala Story 2: Goes Beyond' ಬಿಡುಗಡೆಗೆ ಕೇರಳ ಹೈಕೋರ್ಟ್ ತಡೆ

ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತ ವರ್ತನೆ: ಪೋಕ್ಸೋ ಕೇಸ್ ದಾಖಲಾಗುತ್ತಿದಂತೆ ಮಲ್ಲಿಕಾರ್ಜುನ ಮುತ್ಯಾ video ರಿಲೀಸ್!

SCROLL FOR NEXT