ಅಜಿತ್ ದೋವಲ್ 
ಪ್ರಧಾನ ಸುದ್ದಿ

ಅಬ್ದುಲ್ ಬಸಿತ್ ಹೇಳಿಕೆ ತಳ್ಳಿ ಹಾಕಿ ಇಲ್ಲವೇ ಪರಿಣಾಮ ಎದುರಿಸಲು ಸಿದ್ಧರಾಗಿ

ಭಾರತದೊಂದಿಗೆ ಶಾಂತಿ ಮಾತುಕತೆ ಪ್ರಕ್ರಿಯೆ ಸ್ಥಗಿತಗೊಂಡಿದೆ ಎಂದ ಪಾಕಿಸ್ತಾನದ ರಾಯಭಾರಿ ಅಬ್ದುಲ್ ಬಸಿತ್ ಹೇಳಿಕೆ ಹಿನ್ನಲೆಯಲ್ಲಿ ಭಾರತದ...

ನವದೆಹಲಿ: ಭಾರತದೊಂದಿಗೆ ಶಾಂತಿ ಮಾತುಕತೆ ಪ್ರಕ್ರಿಯೆ ಸ್ಥಗಿತಗೊಂಡಿದೆ ಎಂದ ಪಾಕಿಸ್ತಾನದ ರಾಯಭಾರಿ ಅಬ್ದುಲ್ ಬಸಿತ್ ಹೇಳಿಕೆ ಹಿನ್ನಲೆಯಲ್ಲಿ ಭಾರತದ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಪಾಕ್‌ಗೆ ಎಚ್ಚರಿಕೆ ನೀಡಿದ್ದಾರೆ.
ಜನವರಿ 2 ರಂದು ನಡೆದ ಪಠಾಣ್‌ಕೋಟ್ ದಾಳಿಗೆ ಸಂಬಂಧಿಸಿದಂತೆ ಮಾತನಾಡಿದ ಬಸಿತ್ ಅವರು, ಭಾರತದ ಎನ್‌ಐಎ ತನಿಖೆಗಾಗಿ ಪಾಕಿಸ್ತಾನಕ್ಕೆ ಬಂದಿಲ್ಲ ಎಂದು ಹೇಳಿದ್ದಾರೆ . ಬಸಿತ್ ಅವರ ಈ ಹೇಳಿಕೆ ಹಿನ್ನಲೆಯಲ್ಲಿ ಪಾಕಿಸ್ತಾನದ ಅಧಿಕಾರಿ ನಸೀರ್ ಖಾನ್ ಜಂಜುವಾ ಅವರಿಗೆ ಭಾನುವಾರ ರಾತ್ರಿ ದೋವಲ್ ಫೋನ್ ಮಾಡಿದ್ದಾರೆ.
ಈ ಫೋನ್ ಸಂಭಾಷಣೆಯಲ್ಲಿ ದೋವಲ್ ಅವರು ಪಠಾಣ್‌ಕೋಟ್ ಉಗ್ರ ದಾಳಿಯ ತನಿಖೆ ಅನ್ಯೋನ್ಯತೆಗೆ ಸಂಬಂಧಪಟ್ಟದ್ದಲ್ಲ, ಅದು ಸಹಕಾರಕ್ಕೆ ಸಂಬಂಧಪಟ್ಟಿದ್ದು ಎಂದಿದ್ದಾರೆ.
ಪಾಕಿಸ್ತಾನದ ಮಾಧ್ಯಮಗಳ ಪ್ರಕಾರ ದೋವಲ್ ಜಂಜುವಾ ಅವರಲ್ಲಿ, ಪಾಕಿಸ್ತಾನ ತಮ್ಮ ರಾಯಭಾರಿ ಬಸಿತ್ ಅವರ ಹೇಳಿಕೆಯನ್ನು ತಿರಸ್ಕರಿಸಬೇಕು ಮತ್ತು ಈ ಬಗ್ಗೆ  ಪಾಕ್ ಸರ್ಕಾರದ ನಿಲುವು ಏನೆಂಬುದನ್ನು ಸ್ಪಷ್ಟಪಡಿಸಬೇಕು ಎಂದು ಹೇಳಿರುವುದಾಗಿ ಉಲ್ಲೇಖಿಸಿವೆ. 
ಒಂದು ವೇಳೆ ಪಾಕಿಸ್ತಾನ ಈ ರೀತಿ ಮಾಡದೇ ಇದ್ದರೆ ಪಾಕಿಸ್ತಾನದೊಂದಿಗಿರುವ ಸಂಬಂಧದ ಬಗ್ಗೆ ಭಾರತ ಕಠಿಣ ನಿಲುವು ಅನುಸರಿಸಬೇಕಾಗುತ್ತದೆ ಎಂದು ದೋವಲ್ ಎಚ್ಚರಿಕೆ ನೀಡಿರುವುದಾಗಿ ಸುದ್ದಿಯಲ್ಲಿ ಹೇಳಲಾಗಿದೆ.
ಆದಾಗ್ಯೂ, ದೋವಲ್ ಪ್ರಶ್ನೆಗೆ ಪಾಕ್ ಉತ್ತರಿಸಿದ ನಂತರವೇ ಈ ವರ್ಷಾಂತ್ಯದಲ್ಲಿ ಪಾಕಿಸ್ತಾನದಲ್ಲಿ ನಡೆಯಲಿರುವ ಸಾರ್ಕ್ ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಭಾಗವಹಿಸಬೇಕೋ ಬೇಡವೋ ಎಂಬುದರ ಬಗ್ಗೆಯೂ ಭಾರತ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಹೇಳಲಾಗುತ್ತಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

ಮೈಸೂರು ಪೊಲೀಸರಿಗೆ CM ಪುತ್ರನ ಕಾಟ: ಯಾವುದೇ ವರ್ಗಾವಣೆಯಾಗಬೇಕಾದರೂ ಯತೀಂದ್ರಗೆ ಟ್ಯಾಕ್ಸ್ ಕಟ್ಟಬೇಕು; ಪ್ರತಾಪ್ ಸಿಂಹ

SCROLL FOR NEXT