ವಿಜ್ಞಾನ ಮತ್ತು ತಂತ್ರಜ್ಞಾನ ರಾಜ್ಯ ಸಚಿವ ವೈ ಎಸ್ ಚೌಧರಿ 
ಪ್ರಧಾನ ಸುದ್ದಿ

ಕೇಂದ್ರ ಸಚಿವರ ವಿರುದ್ಧ ಜಾಮೀನುರಹಿತ ವಾರಂಟ್ ರದ್ದುಮಾಡಿದ ಹೈದರಾಬಾದ್ ಹೈಕೋರ್ಟ್

ಸಾಲ ಸುಸ್ಥಿದಾರ ಪ್ರಕರಣದಲ್ಲಿ ಕೇಂದ್ರ ಸಚಿವ ವೈ ಎಸ್ ಚೌಧರಿ ವಿರುದ್ಧ ನಗರ ನ್ಯಾಯಾಲಯ ಹೊರಡಿಸಿದ್ದ ಜಾಮೀನು ರಹಿತ ವಾರಂಟ್ ಅನ್ನು ಮಂಗಳವಾರ ಹೈಕೋರ್ಟ್ ವಜಾ

ಹೈದರಾಬಾದ್: ಸಾಲ ಸುಸ್ಥಿದಾರ ಪ್ರಕರಣದಲ್ಲಿ ಕೇಂದ್ರ ಸಚಿವ ವೈ ಎಸ್ ಚೌಧರಿ ವಿರುದ್ಧ ನಗರ ನ್ಯಾಯಾಲಯ ಹೊರಡಿಸಿದ್ದ ಜಾಮೀನು ರಹಿತ ವಾರಂಟ್ ಅನ್ನು ಮಂಗಳವಾರ ಹೈಕೋರ್ಟ್ ವಜಾ ಮಾಡಿದೆ.

ಆದರೆ ಮೇ ೫ ರಂದು ಈ ಪ್ರಕರಣದ ವಿಚಾರಣೆಯಲ್ಲಿ ವೈಯಕ್ತಿಕವಾಗಿ ಹಾಜರಾಗುವಂತೆ ಸಚಿವರಿಗೆ ನ್ಯಾಯಾಲಯ ಸೂಚಿಸಿದೆ. ಸಾಲ ಮರುಪಾವತಿಸುವಲ್ಲಿ ವಿಫಲರಾಗಿದ್ದಕ್ಕೆ ಇವರ ವಿರುದ್ಧ ಮಾರಿಷಸ್ ಮೂಲಕ ಬ್ಯಾಂಕ್ ದ್ಯಾವೆ ಹೂಡಿದೆ.

ವಿಜ್ಞಾನ ಮತ್ತು ತಂತ್ರಜ್ಞಾನ ರಾಜ್ಯ ಸಚಿವ ವೈ ಎಸ್ ಚೌಧರಿ ತಮ್ಮ ಅರ್ಜಿಯಲ್ಲಿ, ತಮ್ಮ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣವನ್ನು ವಜಾ ಮಾಡುವಂತೆ ಕೇಳಿಕೊಂಡಿದ್ದರು.

ಮಧ್ಯಂತರ ಆದೇಶ ನೀಡಿದ ಹೈಕೋರ್ಟ್, ವಾರಂಟ್ ರದ್ದುಗೊಳಿಸಿ ಜೂನ್ ೧೬ಕ್ಕೆ ಪ್ರಕರಣದ ವಿಚಾರಣೆಯನ್ನು ಮುಂದೂಡಿದೆ.

ಕೋರ್ಟ್ ಸಮನ್ಸ್ ಉಲ್ಲಂಘಿಸಿ ಮೂರನೆ ಬಾರಿಗೆ ವೈಯಕ್ತಿಕವಾಗಿ ಹಾಜರಾಗಲು ವಿಫಲರಾಗಿದ್ದಕ್ಕೆ ೧೨ನೇ ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮೆಜೆಸ್ಟ್ರೇಟ್ ಏಪ್ರಿಲ್ ೭ರಂದು ಸಚಿವ ಬಂಧನಕ್ಕಾಗಿ ಜಾಮೀನು ರಹಿತ ವಾರಂಟ್ ಹೊರಡಿಸಿತ್ತು.

ಕೋರ್ಟ್ ವಿಚಾರಣೆಯನ್ನು ಬೇಕಂತಲೇ ಸಚಿವರು ತಪ್ಪಿಸಿಕೊಳ್ಳುತ್ತಿದ್ದಾರೆ ಎಂದು ದೂರಿ ಮಾರಿಷಸ್ ಕಮರ್ಷಿಯಲ್ ಬ್ಯಾಂಕ್ ಪರ ವಕೀಲ ವಾದ ಮಾಡಿದ್ದರು. ವೈ ಎಸ್ ಚೌಧರಿ ಮತ್ತಿತರರು ೧೦೬ಕೋಟಿಗಿಂತಲೂ ಹೆಚ್ಚಿನ ಸಾಲ ಮರುಪಾವತಿಸದೆ ಸುಸ್ಥಿದಾರರಾಗಿದ್ದಾರೆ ಎಂದು ದೂರಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

SCROLL FOR NEXT