ಅರವಿಂದ್ ಕೇಜ್ರಿವಾಲ್ 
ಪ್ರಧಾನ ಸುದ್ದಿ

ಲಾತೂರ್ ಗೆ ನೀರು ಪೂರೈಕೆ: ಪ್ರಧಾನಿ ಮೋದಿಯನ್ನು ಪ್ರಶಂಸಿಸಿದ ಕೇಜ್ರಿವಾಲ್

ಬರಪೀಡಿತ ಲಾತೂರ್ ಗೆ ನೀರು ಪೂರೈಕೆ ಮಾಡುತ್ತಿರುವ ಕೇಂದ್ರ ಸರ್ಕಾರದ ಕಾರ್ಯದ ಬಗ್ಗೆ ಶ್ಲಾಘಿಸಿರುವ ಅರವಿಂದ್ ಕೇಜ್ರಿವಾಲ್...

ನವದೆಹಲಿ: ಬರಪೀಡಿತ ಲಾತೂರ್ ಗೆ ನೀರು ಪೂರೈಕೆ ಮಾಡುತ್ತಿರುವ ಕೇಂದ್ರ ಸರ್ಕಾರದ ಕಾರ್ಯದ ಬಗ್ಗೆ ಶ್ಲಾಘಿಸಿರುವ ಅರವಿಂದ್ ಕೇಜ್ರಿವಾಲ್, ತಾವು ಕೂಡ ನೀರು ಪೂರೈಕೆ ಸಹಾಯ ಮಾಡುತ್ತೇವೆ ಎಂದು ಹೇಳಿದ್ದಾರೆ.
ಬರಗಾಲದಿಂದ ತೀವ್ರ ಸಂಕಷ್ಟಕ್ಕೆ ತುತ್ತಾಗಿರುವ ಪೂರ್ವ ಮಹಾರಾಷ್ಟ್ರದಲ್ಲಿನ ಮರಾಠಾವಾಡದ ಲಾತೂರ್ ಪ್ರದೇಶಕ್ಕೆ 'ನೀರು ರೈಲು' ಮೂಲಕ ಮೀರಜ್ ನಿಂದ ಸೋಮವಾರ ನೀರು ಪೂರೈಸಲಾಯಿತು.
ಮಹಾರಾಷ್ಟ್ರ ಸರ್ಕಾರ ಮತ್ತು ರೈಲ್ವೆ ಸಚಿವಾಲಯ ಲಾತೂರ್ ಗೆ ಸರಕು ಸಾಗಣೆ ರೈಲಿನ 50 ಬೋಗಿಗಳಲ್ಲಿ ನೀರು ಪೂರೈಕೆ ಮಾಡಿತ್ತು. ಈ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರನ್ನು ಕೇಜ್ರಿವಾಲ್ ಪ್ರಶಂಸಿಸಿದ್ದಾರೆ. ಅಲ್ಲದೇ, ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿರುವ ಕೇಜ್ರಿವಾಲ್, ಲಾತೂರ್ ನೀರು ಪೂರೈಕೆಗೆ ನಾವು ಪ್ರತಿ ದಿನ 10 ಲಕ್ಷ ಲೀಟರ್ ನೀರು ಪೂರೈಕೆ ಮಾಡಲು ಸಿದ್ಧವಿದ್ದೇವೆ ಎಂದು ತಿಳಿಸಿದ್ದಾರೆ. ನೀರು ರವಾನೆಗೆ ಕೇಂದ್ರ ಸರ್ಕಾರ ವ್ಯವಸ್ಥೆ ಮಾಡಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ.
ರೈಲು ಮುಖಾಂತರ ಲಾತೂರ್ ಗೆ ನೀರು ಪೂರೈಕೆ ಮಾಡುತ್ತಿರುವ ಕೇಂದ್ರ ಸರ್ಕಾರದ ಕೆಲಸ ಶ್ಲಾಘನೀಯ ಎಂದ ಅವರು, 21ನೇ ಶತಮಾನದಲ್ಲೂ ನೀರಿನ ಬವಣೆಯಿಂದ ಜನರು ಸಾಯುತ್ತಾರೆನ್ನುವುದು ಇಡಿ ದೇಶಕ್ಕೆ ನಾಚಿಕೆಗೇಡು. ಲಾತೂರ್ ಜನಕ್ಕೆ ಸಹಾಯ ಮಾಡುವುದು ಇಡೀ ದೇಶದ ಜವಾಬ್ದಾರಿಯಾಗಿದೆ ಎಂದು ಹೇಳಿದ್ದಾರೆ.
ದೆಹಲಿಯಲ್ಲೂ ನೀರಿನ ಸಮಸ್ಯೆಯಿದೆ. ಆದರೆ, ಲಾತೂರ್ ಸ್ಥಿತಿಯನ್ನು ಗಣನೆಗೆ ತೆಗೆದುಕೊಂಡರೆ, ಅಲ್ಲಿನ ಜನರಿಗೂ ನಾವು ಸಹಾಯ ಮಾಡಬೇಕಿದೆ ಎಂದು ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

'China isn't afraid': ಅಮೆರಿಕದ ಶೇ.100 ರಷ್ಟು ಸುಂಕದ ಬಗ್ಗೆ ಚೀನಿಯರ ಪ್ರತಿಕ್ರಿಯೆ!

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

SCROLL FOR NEXT