ಸಾಂದರ್ಭಿಕ ಚಿತ್ರ 
ಪ್ರಧಾನ ಸುದ್ದಿ

ಕೊಲ್ಲಂ ಪಟಾಕಿ ದುರಂತ: 50 ಕೆಜಿ ಪಟಾಕಿ ವಶಕ್ಕೆ ಪಡೆದ ಪೊಲೀಸರು

ಕೇರಳದ ಕೊಲ್ಲಂ ಜಿಲ್ಲೆಯಲ್ಲಿ ಸಂಭವಿಸಿದ ಪಟಾಕಿ ದುರಂತದ ಹಿನ್ನಲೆಯಲ್ಲಿ ದೇವಾಲಯದ ಬಳಿ ಇದ್ದ ಮತ್ತೊಂದು...

ತಿರುವನಂತಪುರಂ: ಕೇರಳದ ಕೊಲ್ಲಂ ಜಿಲ್ಲೆಯಲ್ಲಿ ಸಂಭವಿಸಿದ ಪಟಾಕಿ ದುರಂತದ ಹಿನ್ನಲೆಯಲ್ಲಿ ದೇವಾಲಯದ ಬಳಿ ಇದ್ದ ಮತ್ತೊಂದು ಪಟಾಕಿ ಘಟಕದ ಮೇಲೆ ದಾಳಿ ಮಾಡಿದ ಅಂಚುತೆಂಗು ಪೊಲೀಸರು 50 ಕೆಜಿ ಪಟಾಕಿಯನ್ನು ಜಪ್ತಿ ಪಡೆದಿದ್ದಾರೆ. 
ಜಾತ್ರೆ ವೇಳೆ ಪುತ್ತಿಂಗಲ್ ದೇವಾಲಯದ ಬಳಿ ಪಟಾಕಿ ಸಿಡಿಸಿದ ಗುತ್ತಿಗೆದಾರನ ಪಟಾಕಿ ಘಟಕದ ಮೇಲೆ ದಾಳಿ ಮಾಡಿದ ಪೊಲೀಸರು 50 ಕೆಜಿ ಪಟಾಕಿಯನ್ನು ವಶಪಡಿಸಿಕೊಂಡಿದ್ದಾರೆ.
ಪಟಾಕಿ ಘಟಕದ ಮಾಲಿಕ ವರ್ಕಲಾ ಕೃಷ್ಣಮೂರ್ತಿ ತಲೆಮರೆಸಿಕೊಂಡಿದ್ದಾನೆ. ಆತನ ಪತ್ನಿ ಅನಾರ್ಕಲಿ ಹೆಸರಲ್ಲಿ ಪರವಾನಗಿ ಪಡೆದಿದ್ದ. ತಯಾರಕ ಘಟಕ ಗೋಡನ್ ನಲ್ಲಿ ಪಟಾಕಿಗಳನ್ನು ಇಡಲಾಗಿತ್ತು. ಅಕ್ರಮವಾಗಿ ಸ್ಫೋಟಕಗಳನ್ನು ತಯಾರಿಸಿ ಮಾರಾಟ ಮಾಡುತ್ತಿದ್ದರು ಎಂಬು ಆರೋಪಗಳು ಕೇಳಿ ಬಂದ ಹಿನ್ನಲೆಯಲ್ಲಿ ನಿನ್ನೆ ಮಧ್ನಾಹ್ನ ಪಟಾಕಿ ಘಟಕದ ಮೇಲೆ ದಾಳಿ ಮಾಡಿದ್ದಾರೆ. 
15 ಕೆಜಿ ಪಟಾಕಿಗಳನ್ನು ತಯಾರಿಸಲು ಸರ್ಕಾರ ಅನುಮತಿ ನೀಡಿರುತ್ತದೆ. ಆದರೆ, ಇವರು ಕಾನೂನು ಉಲ್ಲಂಘಿಸಿ ಹೆಚ್ಚಿನ ಮಟ್ಟದಲ್ಲಿ ಪಟಾಕಿಗಳನ್ನು ತಯಾರಿಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. 
ಈ ಮುಂಚೆ ಮತ್ತೊಬ್ಬ ಗುತ್ತಿಗೆದಾರನ ಪಟಾಕಿ ಘಟಕದ ಮೇಲೆ ದಾಳಿ ಮಾಡಿದ್ದ ಪೊಲೀಸರು 1,000 ಕೆಜಿ ಪಟಾಕಿಯನ್ನು ವಶಪಡಿಸಿಕೊಂಡಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

SCROLL FOR NEXT