ಉಮ್ಮನ್ ಚಾಂಡಿ 
ಪ್ರಧಾನ ಸುದ್ದಿ

ಕೊಲ್ಲಂ ಪಟಾಕಿ ಅವಘಡವನ್ನು ರಾಷ್ಟ್ರೀಯ ದುರಂತವೆಂದು ಘೋಷಿಸಿ: ಚಾಂಡಿ

ಕೊಲ್ಲಂ ಜಿಲ್ಲೆಯ ಪರವೂರ್ ಪುಟ್ಟಿಂಗಲ್ ದೇವಿ ದೇವಾಲಯದಲ್ಲಿ ಸಂಭವಿಸಿದ ಪಟಾಕಿ ದುರಂತವನ್ನು ರಾಷ್ಟ್ರೀಯ...

ತಿರುವನಂತಪುರಂ: ಕೊಲ್ಲಂ ಜಿಲ್ಲೆಯ ಪರವೂರ್ ಪುಟ್ಟಿಂಗಲ್ ದೇವಿ ದೇವಾಲಯದಲ್ಲಿ ಸಂಭವಿಸಿದ ಪಟಾಕಿ ಅವಘಡವನ್ನು ರಾಷ್ಟ್ರೀಯ ದುರಂತವೆಂದು ಘೋಷಿಸುವಂತೆ ಕೇರಳ ಸರ್ಕಾರ ಬುಧವಾರ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದೆ.
ಈ ಕುರಿತು ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಕೇರಳ ಮುಖ್ಯಮಂತ್ರಿ ಉಮ್ಮನ್ ಚಾಂಡಿ ಅವರು, ಅಗ್ನಿ ಅವಘಡವನ್ನು ರಾಷ್ಟ್ರೀಯ ದುರಂತವೆಂದು ಘೋಷಿಸಲು ಕೇಂದ್ರ ಸರ್ಕಾರ ಕೂಡಲೇ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
ಇತ್ತೀಚೆಗೆ ದೇವಾಲಯದ ವಾರ್ಷಿಕೋತ್ಸವ ಸಮಾರಂಭದ ವೇಳೆ ಪಟಾಕಿ ಸ್ಫೋಟಗೊಂಡ ಪರಿಣಾಮ ಅಗ್ನಿ ದುರಂತ ಸಂಭವಿಸಿತ್ತು. ಈ ಹಿನ್ನೆಲೆಯಲ್ಲಿ ಪಟಾಕಿ ನಿಷೇಧಿಸುವ ಕುರಿತು ಚರ್ಚಿಸಲು ಏಪ್ರಿಲ್ 14 ರಂದು ಸರ್ವಪಕ್ಷ ಸಭೆ ಕರೆದಿರುವುದಾಗಿ ಉಮ್ಮನ್ ಚಾಂಡಿ ತಿಳಿಸಿದ್ದಾರೆ.
ಕೇರಳ ಹೈಕೋರ್ಟ್ ಈಗಾಗಲೇ ರಾತ್ರಿ ವೇಳೆ ದೇವಾಲಯದಲ್ಲಿ ಪಟಾಕಿ ಪ್ರದರ್ಶನಗಳನ್ನು ನಿಷೇಧಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT