ಹತ್ಯೆಯಾದ ಎನ್ ಐ ಎ ಅಧಿಕಾರಿ ತನ್ಜಿಲ್ ಅಹ್ಮದ್ 
ಪ್ರಧಾನ ಸುದ್ದಿ

ಎನ್ ಐ ಎ ಅಧಿಕಾರಿ ಹತ್ಯೆ; ಪ್ರಮುಖ ಆರೋಪಿ ಸುಳಿವು ನೀಡಿದವರಿಗೆ ೨ ಲಕ್ಷ ಬಹುಮಾನ

ಎನ್ ಐ ಎ ಅಧಿಕಾರಿ ತನ್ಜಿಲ್ ಅಹ್ಮದ್ ಅವರ ಹತ್ಯೆಯ ಪ್ರಮುಖ ರೂವಾರಿ ಎಂದು ಆರೋಪಿಸಲಾಗಿರುವ ಮುನೀರ್ ಬಗ್ಗೆ ಮಾಹಿತಿ ನೀಡಿದವರಿಗೆ ಉತ್ತರ ಪ್ರದೇಶ ಪೊಲೀಸರು ೨ ಲಕ್ಷ ಬಹುಮಾನ

ಲಕನೌ: ಎನ್ ಐ ಎ ಅಧಿಕಾರಿ ತನ್ಜಿಲ್ ಅಹ್ಮದ್ ಅವರ ಹತ್ಯೆಯ ಪ್ರಮುಖ ರೂವಾರಿ ಎಂದು ಆರೋಪಿಸಲಾಗಿರುವ ಮುನೀರ್ ಬಗ್ಗೆ ಮಾಹಿತಿ ನೀಡಿದವರಿಗೆ ಉತ್ತರ ಪ್ರದೇಶ ಪೊಲೀಸರು ೨ ಲಕ್ಷ ಬಹುಮಾನ ಘೋಷಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ.

ಈ ಹತ್ಯೆಯಲ್ಲಿ ಇನ್ನಿಬ್ಬರು ಆರೋಪಿಗಳಾದ ರೆಯಾನ್ ಮತ್ತು ಜೈನುಲ್ ರನ್ನು ಬಂಧಿಸಲಾಗಿದ್ದು, ಮುನೀರ್ ಇನ್ನು ತಲೆಮರೆಸಿಕೊಂಡಿದ್ದಾನೆ.

ಎ ಎಂ ಯು ವಿದ್ಯಾರ್ಥಿ ಹತ್ಯೆ, ಬ್ಯಾಂಕ್ ದರೋಡೆ ಇತ್ಯಾದಿ ಪ್ರಕರಣಗಳಲ್ಲಿ ಬೇಕಾಗಿರುವ ಈ ಶಾರ್ಪ್ ಶೂಟರ್ ಮುನೀರ್ ಬಗ್ಗೆ ಸುಳಿವಿಗೆ ಈ ಹಿಂದೆ ಪೊಲೀಸ್ ಮಹಾನಿರ್ದೇಶಕ ಜಾವೇದ್ ಅಹ್ಮದ್ ೫೦೦೦೦ ರೂ ಬಹುಮಾನ ಘೋಷಿಸಿದ್ದರು.

ಏಪ್ರಿಲ್ 13 ರಂದು ನಡೆದ ಈ ಹತ್ಯೆಯ ನಂತರ ಬಿಜ್ನುರಿನ ಮುನೀರ್ ಕಾಣೆಯಾಗಿದ್ದಾನೆ ಎಂದು ತಿಳಿದುಬಂದಿದೆ.

ಈ ಪ್ರಕರಣವನ್ನು ಭೇದಿಸಿರುವುದಾಗಿ ಹೇಳಿರುವ ಪೊಲೀಸರು, ನವದೆಹಲಿಯಲ್ಲಿನ ಅಂಗಡಿ ಆಸ್ತಿಯ ಬಗೆಗಿನ ವಿವಾದದಲ್ಲಿ ಅಹ್ಮದ್ ಅವರನ್ನು ಇವರು ಹತ್ಯೆ ಮಾಡಿರುವುದಾಗಿ ಹೇಳಿದ್ದಾರೆ. ಆದರೆ ಕೊಲೆಗೆ ಕಾರಣ ಅಥವಾ ಕೊಲೆಗೆ ಬಳಸಿದ ಶಸ್ತ್ರಾಸ್ತ್ರ, ಮತ್ತು ಬಳಸಿದ ವಾಹನವನ್ನು ವಶಪಡಿಸಿಕೊಳ್ಳುವುದಕ್ಕೆ ವಿಫಲರಾಗಿರುವುದು ಹಲವು ಸಂಶಯಗಳಿಗೆ ಎಡೆಮಾಡಿಕೊಟ್ಟಿದೆ.

ಮೊಬೈಲ್ ಫೋನ್ ಬಳಸದ ಮುನೀರ್ ಗೋವ ಅಥವಾ ಮುಂಬೈನಲ್ಲಿ ತಲೆಮರೆಸಿಕೊಂಡಿದ್ದಾನೆ ಎನ್ನಲಾಗಿದ್ದು, ಅವನು ಸೆರೆ ಸಿಕ್ಕರೆ ಕೊಲೆಯ ಎಲ್ಲ ಕಾರಣವೂ ತಿಳಿಯಲಿದೆ ಎನ್ನುತ್ತಾರೆ ಪೊಲೀಸರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಗರ ನಕ್ಸಲರ ಟಾರ್ಗೆಟ್‌ ಚಾಮುಂಡಿ ಬೆಟ್ಟ- ಬಿಎಲ್ ಸಂತೋಷ್: ಸತ್ಯ ಹೇಳಿದರೆ ಕೆಲವರು ಸಹಿಸಲ್ಲ, ಮಾತನಾಡದಿರುವುದೇ ಲೇಸು-dks

ಉಳಿಕೆ ಮತ್ತು ಹೂಡಿಕೆ ನಡುವೆ ಸಮತೋಲನವಿರಲಿ! (ಹಣಕ್ಲಾಸು)

ಚಾಮುಂಡೇಶ್ವರಿ ದೇವಿ ಸುತ್ತ ನಡೆಯುತ್ತಿರುವ ರಾಜಕೀಯ ತೀವ್ರ ಬೇಸರ ತರಿಸಿದೆ: ಪ್ರಮೋದಾದೇವಿ ಒಡೆಯರ್

Techie Kidnap case: Lakshmi Menonಗೆ ಬಿಗ್ ರಿಲೀಫ್, ನಿರೀಕ್ಷಣಾ ಜಾಮೀನು ಮಂಜೂರು, ಏನಿದು ಪ್ರಕರಣ? ನಟಿ ಹೇಳಿದ್ದೇನು?

ಉಕ್ರೇನ್ ವಿರುದ್ಧ ರಷ್ಯಾದ ದೀರ್ಘ ಸಂಘರ್ಷಕ್ಕೆ ಭಾರತವೇ ಕಾರಣ, ಇದು 'ಮೋದಿ ಯುದ್ಧ': White House ವ್ಯಾಪಾರ ಸಲಹೆಗಾರ ಪೀಟರ್ ನವರೊ

SCROLL FOR NEXT