ಹತ್ಯೆಯಾದ ಎನ್ ಐ ಎ ಅಧಿಕಾರಿ ತನ್ಜಿಲ್ ಅಹ್ಮದ್ 
ಪ್ರಧಾನ ಸುದ್ದಿ

ಎನ್ ಐ ಎ ಅಧಿಕಾರಿ ಹತ್ಯೆ; ಪ್ರಮುಖ ಆರೋಪಿ ಸುಳಿವು ನೀಡಿದವರಿಗೆ ೨ ಲಕ್ಷ ಬಹುಮಾನ

ಎನ್ ಐ ಎ ಅಧಿಕಾರಿ ತನ್ಜಿಲ್ ಅಹ್ಮದ್ ಅವರ ಹತ್ಯೆಯ ಪ್ರಮುಖ ರೂವಾರಿ ಎಂದು ಆರೋಪಿಸಲಾಗಿರುವ ಮುನೀರ್ ಬಗ್ಗೆ ಮಾಹಿತಿ ನೀಡಿದವರಿಗೆ ಉತ್ತರ ಪ್ರದೇಶ ಪೊಲೀಸರು ೨ ಲಕ್ಷ ಬಹುಮಾನ

ಲಕನೌ: ಎನ್ ಐ ಎ ಅಧಿಕಾರಿ ತನ್ಜಿಲ್ ಅಹ್ಮದ್ ಅವರ ಹತ್ಯೆಯ ಪ್ರಮುಖ ರೂವಾರಿ ಎಂದು ಆರೋಪಿಸಲಾಗಿರುವ ಮುನೀರ್ ಬಗ್ಗೆ ಮಾಹಿತಿ ನೀಡಿದವರಿಗೆ ಉತ್ತರ ಪ್ರದೇಶ ಪೊಲೀಸರು ೨ ಲಕ್ಷ ಬಹುಮಾನ ಘೋಷಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ.

ಈ ಹತ್ಯೆಯಲ್ಲಿ ಇನ್ನಿಬ್ಬರು ಆರೋಪಿಗಳಾದ ರೆಯಾನ್ ಮತ್ತು ಜೈನುಲ್ ರನ್ನು ಬಂಧಿಸಲಾಗಿದ್ದು, ಮುನೀರ್ ಇನ್ನು ತಲೆಮರೆಸಿಕೊಂಡಿದ್ದಾನೆ.

ಎ ಎಂ ಯು ವಿದ್ಯಾರ್ಥಿ ಹತ್ಯೆ, ಬ್ಯಾಂಕ್ ದರೋಡೆ ಇತ್ಯಾದಿ ಪ್ರಕರಣಗಳಲ್ಲಿ ಬೇಕಾಗಿರುವ ಈ ಶಾರ್ಪ್ ಶೂಟರ್ ಮುನೀರ್ ಬಗ್ಗೆ ಸುಳಿವಿಗೆ ಈ ಹಿಂದೆ ಪೊಲೀಸ್ ಮಹಾನಿರ್ದೇಶಕ ಜಾವೇದ್ ಅಹ್ಮದ್ ೫೦೦೦೦ ರೂ ಬಹುಮಾನ ಘೋಷಿಸಿದ್ದರು.

ಏಪ್ರಿಲ್ 13 ರಂದು ನಡೆದ ಈ ಹತ್ಯೆಯ ನಂತರ ಬಿಜ್ನುರಿನ ಮುನೀರ್ ಕಾಣೆಯಾಗಿದ್ದಾನೆ ಎಂದು ತಿಳಿದುಬಂದಿದೆ.

ಈ ಪ್ರಕರಣವನ್ನು ಭೇದಿಸಿರುವುದಾಗಿ ಹೇಳಿರುವ ಪೊಲೀಸರು, ನವದೆಹಲಿಯಲ್ಲಿನ ಅಂಗಡಿ ಆಸ್ತಿಯ ಬಗೆಗಿನ ವಿವಾದದಲ್ಲಿ ಅಹ್ಮದ್ ಅವರನ್ನು ಇವರು ಹತ್ಯೆ ಮಾಡಿರುವುದಾಗಿ ಹೇಳಿದ್ದಾರೆ. ಆದರೆ ಕೊಲೆಗೆ ಕಾರಣ ಅಥವಾ ಕೊಲೆಗೆ ಬಳಸಿದ ಶಸ್ತ್ರಾಸ್ತ್ರ, ಮತ್ತು ಬಳಸಿದ ವಾಹನವನ್ನು ವಶಪಡಿಸಿಕೊಳ್ಳುವುದಕ್ಕೆ ವಿಫಲರಾಗಿರುವುದು ಹಲವು ಸಂಶಯಗಳಿಗೆ ಎಡೆಮಾಡಿಕೊಟ್ಟಿದೆ.

ಮೊಬೈಲ್ ಫೋನ್ ಬಳಸದ ಮುನೀರ್ ಗೋವ ಅಥವಾ ಮುಂಬೈನಲ್ಲಿ ತಲೆಮರೆಸಿಕೊಂಡಿದ್ದಾನೆ ಎನ್ನಲಾಗಿದ್ದು, ಅವನು ಸೆರೆ ಸಿಕ್ಕರೆ ಕೊಲೆಯ ಎಲ್ಲ ಕಾರಣವೂ ತಿಳಿಯಲಿದೆ ಎನ್ನುತ್ತಾರೆ ಪೊಲೀಸರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಕ್ಷಣಾ, ಭದ್ರತಾ ಒಪ್ಪಂದ ಬಲವರ್ಧನೆ: ಭಾರತ- ಜರ್ಮನಿ ಮಹತ್ವದ ಕ್ರಮಗಳ ಘೋಷಣೆ!

ಸ್ವಾತಂತ್ರ್ಯ ಬಳಿಕ ಇದೇ ಮೊದಲು: ಮಕರ ಸಂಕ್ರಾಂತಿಗೆ ಮತ್ತೊಂದು ಹೊಸ 'ದಾಖಲೆ'ಗೆ ಸಜ್ಜಾದ ಪ್ರಧಾನಿ ಮೋದಿ!

'ಅಜ್ಮೀರ್' ದರ್ಗಾ ಶಿವ ದೇಗುಲವಾಗಿತ್ತು: ಕೋರ್ಟ್ ಮೆಟ್ಟಿಲೇರಿದ ವಿವಾದ!

'ವಿಬಿ-ಜಿ-ರಾಮ್' ಕಾಯ್ದೆ ವಿರುದ್ಧ ಕಾನೂನು ಸಮರ: ವಿಶೇಷ ಅಧಿವೇಶನ ಕರೆದು ಚರ್ಚೆ- ಸಿಎಂ ಸಿದ್ದರಾಮಯ್ಯ

ಟ್ರಂಪ್ ಗೆ 'ಮರೆಯಲಾಗದ ಪಾಠ' ಕಲಿಸುತ್ತೇವೆ: ಇರಾನ್ ಸಂಸತ್ ಸ್ಪೀಕರ್ ಖಡಕ್ ವಾರ್ನಿಂಗ್!

SCROLL FOR NEXT