ಕಾಣೆಯಾದ ಹೋರಿಯ ಬಗ್ಗೆ ಪ್ರಕಟಣೆ 
ಪ್ರಧಾನ ಸುದ್ದಿ

ಹೋರಿ ಹುಡುಕಿಕೊಟ್ಟವರಿಗೆ ೫೦ ಸಾವಿರ ರೂ ಬಹುಮಾನ ಘೋಷಿಸಿದ ವಾರಣಾಸಿ ವ್ಯಕ್ತಿ

ಕಳೆದುಹೋಗಿರುವ 'ಬಾದಶಾಃ' ಇರಬಹುದಾದ ಜಾಗದ ಸುಳಿವು ನೀಡಿದವರಿಗೆ, ಹುಡುಕಿಕೊಟ್ಟವರಿಗೆ ೫೦೦೦೦ ರೂ ಬಹುಮಾನ ನೀಡುವುದಾಗಿ ವಾರಣಾಸಿಯ ಸಾರನಾಥದೆಲ್ಲೆಡೆ

ವಾರಣಾಸಿ: ಕಳೆದುಹೋಗಿರುವ 'ಬಾದಶಾಃ' ಇರಬಹುದಾದ ಜಾಗದ ಸುಳಿವು ನೀಡಿದವರಿಗೆ, ಹುಡುಕಿಕೊಟ್ಟವರಿಗೆ ೫೦೦೦೦ ರೂ ಬಹುಮಾನ ನೀಡುವುದಾಗಿ ವಾರಣಾಸಿಯ ಸಾರನಾಥದೆಲ್ಲೆಡೆ ಭಿತ್ತಿಚಿತ್ರಗಳು ರಾರಾಜಿಸುತ್ತಿವೆ.

'ಬಾದಶಾಃ' ಯಾವುದೋ ಒಂದು ಪ್ರಾಣಿಯಲ್ಲ ಬದಲಾಗಿ ಕೆಲವು ದಿನಗಳಿಂದ ಕಾಣೆಯಾಗಿರುವ ಮೂರು ವರ್ಷದ ಸಾಕಿದ-ಪ್ರೀತಿಯ ಹೋರಿ! ಇದು ಪೋಲಿಸ್ ಠಾಣೆಯ ಮೆಟ್ಟಿಲು ಕೂಡ ಏರಿದ್ದು, ಮಾಲೀಕ ಮನೋಜ್ ಕುಮಾರ್ ಕಾಣೆಯಾದ ಹೋರಿಯ ಬಗೆಗೆ ಸಾರನಾಥ ಪೊಲೀಸ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಹೋರಿಯ ದೈಹಿಕ ಗುಣಗಳು, ಆಕಾರ, ಬಣ್ಣದ ವಿವರಗಳುಳ್ಳ ಪೋಸ್ಟರ್ ಗಳನ್ನು ಗ್ರಾಮದ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹಾಕಲಾಗಿದೆ. 'ಬಾದಶಾಃ' ತಮ್ಮ ಕುಟುಂಬದ ಸದಸ್ಯನಾಗಿದ್ದು, ಅವನಿಗೆ ಮನೆಯಲ್ಲಿ ಸ್ವತಂತ್ರವಾಗಿ ಓಡಾಡುವ ಅವಕಾಶವಿತ್ತು ಎಂದು ಕೂಡ ಮನೋಜ್ ಹೇಳಿದ್ದಾರೆ.

"ಅದು ಯಾರಿಗೂ ತೊಂದರೆ ನೀಡದೆ ಈ ಪ್ರದೇಶದಲ್ಲೆಲ್ಲಾ ಸುತ್ತಾಡುತ್ತಿತ್ತು" ಎಂದು ಕೂಡ ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Iranಗೆ ಅಮೆರಿಕಾ ಬಿಗ್ ಶಾಕ್: 140 ಗುರಿಗಳ ಮೇಲೆ ಭಾರೀ ವೈಮಾನಿಕ ದಾಳಿ; Gulf ರಾಷ್ಟ್ರಗಳತ್ತ ಕ್ಷಿಪಣಿ ಹಾರಿಸಿ Tehran ತಿರುಗೇಟು..!

ಬಂಗಾಳ ಕೊಲ್ಲಿಯಲ್ಲಿ ಭೂಕಂಪ: ವಿಶಾಖಪಟ್ಟಣಂನಲ್ಲೂ ನಡುಗಿದ ಭೂಮಿ, ರಿಕ್ಟರ್ ಮಾಪಕದಲ್ಲಿ 4.5 ತೀವ್ರತೆ ದಾಖಲು..!

ಅಮೆರಿಕದಲ್ಲಿ ಕೌಟುಂಬಿಕ ಹಿಂಸಾಚಾರ: ಭಾರತೀಯ ಮೂಲದ ಗೂಗಲ್ ಟೆಕ್ಕಿ ಹತ್ಯೆ; ಮಗನಿಗೂ ಗುಂಡೇಟು!

ಹಾರ್ಮುಜ್ ಜಲಸಂಧಿ ಬಂದ್: ಅಮೆರಿಕಾ ಭೀಕರ ಪ್ರತಿಕಾರದ ದಾಳಿ, ಮಧ್ಯಪ್ರಾಚ್ಯದಲ್ಲಿ ಮತ್ತೆ ಭುಗಿಲೆದ್ದ ಸಂಘರ್ಷ..!

ಸಂಪುಟ ವಿಸ್ತರಣೆಗೆ ಕೌಂಟ್‌ಡೌನ್: ಸಿದ್ದು-ಡಿಕೆಶಿ, ಹರಿಪ್ರಸಾದ್'ಗೆ 'ಕೈ' ಕಮಾಂಡ್ ಬುಲಾವ್, ದೆಹಲಿಯಲ್ಲಿ ನಿರ್ಣಾಯಕ ಸಭೆ..!