ಕಿಮ್ಮನೆ ರತ್ನಾಕರ 
ಪ್ರಧಾನ ಸುದ್ದಿ

ನಾಳೆಯಿಂದ ಪಿಯು ಮೌಲ್ಯಮಾಪನ ಆರಂಭ, ಮೇ ಮೊದಲ ವಾರದಲ್ಲಿ ಫಲಿತಾಂಶ: ಕಿಮ್ಮನೆ

ವೇತನ ತಾರತಮ್ಯ ನಿವಾರಣೆ ಹಾಗೂ ಕುಮಾರ್ ನಾಯಕ್ ವರದಿ ಜಾರಿಗೆ ಆಗ್ರಹಿಸಿ ಉಪನ್ಯಾಸಕರು ಪಿಯುಸಿ ಮೌಲ್ಯಮಾಪನ...

ಬೆಂಗಳೂರು: ವೇತನ ತಾರತಮ್ಯ ನಿವಾರಣೆ ಹಾಗೂ ಕುಮಾರ್ ನಾಯಕ್ ವರದಿ ಜಾರಿಗೆ ಆಗ್ರಹಿಸಿ ಉಪನ್ಯಾಸಕರು ಪಿಯುಸಿ ಮೌಲ್ಯಮಾಪನ ಬಹಿಷ್ಕರಿಸಿ ಕಳೆದ 12 ದಿನಗಳಿಂದ ನಡೆಯುತ್ತಿರುವ ಪ್ರತಿಭಟನೆ ಮುಂದುವರೆದಿದೆ. ಆದರೆ ಬಹಿಷ್ಕಾರಕ್ಕೆ ಬಗ್ಗದ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ ಅವರು, ನಾಳೆಯಿಂದ ಮೌಲ್ಯ ಮಾಪನ ಆರಂಭಿಸುವುದಾಗಿ ಗುರುವಾರ ತಿಳಿಸಿದ್ದಾರೆ.
ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ರತ್ನಾಕರ, ನಾಳೆಯಿಂದ ಪಿಯುಸಿ ಮೌಲ್ಯ ಮಾಪನ ನಡೆಯಲಿದೆ. ಖಾಸಗಿ ಉಪನ್ಯಾಸಕರನ್ನು ಬಳಸಿ ಮೌಲ್ಯಮಾಪನ ನಡೆಸಲಾಗುತ್ತಿದೆ.ಎಪ್ರಿಲ್‌ 30 ರ ಒಳಗೆ ಮೌಲ್ಯ ಮಾಪನ ಪೂರ್ಣ ಗೊಳಿಸಿ, ಮೇ ಮೊದಲ ವಾರದಲ್ಲಿ ಫ‌ಲಿತಾಂಶ ಪ್ರಕಟ ಮಾಡುವುದಾಗಿ ಹೇಳಿದ್ದಾರೆ.
ಕಿಮ್ಮನೆ ರತ್ನಾಕರ ಅವರು ಪ್ರತಿಭಟನಾನಿರತ ಪದವಿ ಪೂರ್ವ ಕಾಲೇಜು ಉಪನ್ಯಾಸಕರೊಂದಿಗೆ ನಡೆಸಿದ ಸಾಲು ಸಾಲು ಸಂಧಾನ ಸಭೆಗಳು ವಿಫ‌ಲವಾಗಿದ್ದು, ದ್ವಿತೀಯ ಪಿಯುಸಿ ಮೌಲ್ಯಮಾಪನ ವಿಚಾರದಲ್ಲಿ ತಲೆದೋರಿರುವ ಸಮಸ್ಯೆ ಮತ್ತಷ್ಟು ತೀವ್ರ ಸ್ವರೂಪ ಪಡೆದುಕೊಂಡಿದೆ.
ಈ ಬಾರಿ ದ್ವಿತೀಯ ಪಿಯುಸಿ ಪರೀಕ್ಷೆ ಬರೆದಿರುವ 6.40 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳ ಜೀವನದಲ್ಲಿ ಸರ್ಕಾರ ಮತ್ತು ಉಪನ್ಯಾಸಕರಿಬ್ಬರೂ ಚೆಲ್ಲಾಟ ಮುಂದುವರೆಸಿದ್ದಾರೆ. ಕಳೆದ 12 ದಿನಗಳಿಂದ ಉಪನ್ಯಾಸಕರ ಹೋರಾಟವನ್ನು ಹಗುರುವಾಗಿ ಪರಿಗಣಿಸುತ್ತಾ ಬಂದಿದ್ದ ಸರ್ಕಾರ ಬುಧವಾರ ಗಂಭೀರವಾಗಿ ಪರಿಗಣಿಸಿತ್ತಾದರೂ ಉಪನ್ಯಾಸಕರ ಬೇಡಿಕೆಗೆ ಬಗ್ಗದೆ ಚೌಕಾಶಿ ಮುಂದುವರೆಸಿದ್ದು ಸಂಧಾನ ವಿಫ‌ಲಗೊಳ್ಳಲು ಕಾರಣ.
ಬೇಡಿಕೆ ಈಡೇರಿಕೆಗಾಗಿ ಬುಧವಾರದಿಂದ ಪ್ರತಿಭಟನೆ ಬದಲು ಉಪವಾಸ ಸತ್ಯಾಗ್ರಹ ಆರಂಭಿಸಿದ್ದ ಪದವಿ ಪೂರ್ವ ಪ್ರಾಂಶುಪಾಲರು ಮತ್ತು ಉಪನ್ಯಾಸಕರು ಅಹೋರಾತ್ರಿ ಉಪವಾಸ ಮುಂದುವರೆಸಲು ನಿರ್ಧರಿಸಿದ್ದಾರೆ ಎಂದು ತಿಳಿದು ಬಂದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT