ಬ್ರಿಕ್ಸ್ ಬ್ಯಾಂಕ್ ಅಧ್ಯಕ್ಷ ಕೆವಿ ಕಾಮತ್ (ಸಂಗ್ರಹ ಚಿತ್ರ) 
ಪ್ರಧಾನ ಸುದ್ದಿ

ಅಭಿವೃದ್ಧಿ ಬ್ಯಾಂಕ್ ನಿಂದ ಭಾರತಕ್ಕೆ 250 ಮಿಲಿಯನ್ ಡಾಲರ್ ಸಾಲ ಮಂಜೂರು

ಭಾರತದ ಮಹತ್ವಾಕಾಂಕ್ಷಿ ಯೋಜನೆಗೆ ನ್ಯೂ ಡೆವಲೆಪ್ ಮೆಂಟ್ ಬ್ಯಾಂಕ್ ನಿಂದ 250 ಮಿಲಿಯನ್ ಡಾಲರ್ ಸಾಲ ಮಂಜೂರಾಗಿದೆ ಎಂದು ಕೇಂದ್ರ ವಿತ್ತ ಸಚಿವಾಲಯದ ಮೂಲಗಳು ತಿಳಿಸಿವೆ...

ವಾಷಿಂಗ್ಟನ್: ಭಾರತದ ಮಹತ್ವಾಕಾಂಕ್ಷಿ ಯೋಜನೆಗೆ ನ್ಯೂ ಡೆವಲೆಪ್ ಮೆಂಟ್ ಬ್ಯಾಂಕ್ ನಿಂದ 250 ಮಿಲಿಯನ್ ಡಾಲರ್ ಸಾಲ ಮಂಜೂರಾಗಿದೆ ಎಂದು ಕೇಂದ್ರ ವಿತ್ತ ಸಚಿವಾಲಯದ  ಮೂಲಗಳು ತಿಳಿಸಿವೆ.

ಬ್ರಿಕ್ಸ್ (ಬ್ರೆಜಿಲ್, ರಷ್ಯಾ, ಭಾರತ, ಚೀನಾ ಮತ್ತು ದಕ್ಷಿಣ ಆಫ್ರಿಕಾ) ಒಕ್ಕೂಟದಿಂದ ಸ್ಥಾಪನೆಯಾಗಿರುವ ಬ್ರಿಕ್ಸ್ ಬ್ಯಾಂಕ್ ಎಂದೇ ಕರೆಯಲ್ಪಡುವ ಡೆವಲಪ್ ಮೆಂಟ್ ಬ್ಯಾಂಕ್ ನಿಂದ ಇದೇ ಮೊದಲ  ಬಾರಿಗೆ ಭಾರತಕ್ಕೆ ನಾಲ್ಕು ವಿವಿಧ ಸಾಲ ಮಂಜೂರಾಗಿದ್ದು, ಈ ಪೈಕಿ ಭಾರತದ ಉದ್ದೇಶಿತ ಹೊಸ ಮತ್ತು ನವೀಕರಿಸಬಹುದಾದ ಇಂಧನ ಶಕ್ತಿ ಯೋಜನೆಗಾಗಿ ಡೆವಲಪ್ ಮೆಂಟ್ ಬ್ಯಾಂಕ್ 250  ಮಿಲಿಯನ್ ಡಾಲರ್ ಸಾಲ ಮಂಜೂರು ಮಾಡಿದೆ ಎಂದು ಕೇಂದ್ರ ಹಣಕಾಸು ಇಲಾಖೆಯ ಕಾರ್ಯದರ್ಶಿ ಶಕ್ತಿಕಾಂತ ದಾಸ್ ಅವರು ಟ್ವೀಟ್ ಮಾಡಿದ್ದಾರೆ.

ವಾಷಿಂಗ್ಟನ್ ಡಿಸಿಯಲ್ಲಿ ಇಂದು ನಡೆದ ವಿವಿಧ ದೇಶಗಳ ವಿತ್ತ ಸಚಿವರ ಸಭೆಯಲ್ಲಿ ಪಾಲ್ಗೊಂಡಿದ್ದ ಶಕ್ತಿಕಾಂತ ದಾಸ್ ಸಭೆಯಲ್ಲಿ ಪ್ರಮುಖ ಆರ್ಥಿಕ ನೀತಿಗಳ ಕುರಿತು ಚರ್ಚಿಸಲಾಯಿತು ಎಂದು  ಹೇಳಿದ್ದಾರೆ. ಡೆವಲೆಪ್ ಮೆಂಟ್ ಬ್ಯಾಂಕ್ ನಿಂದ ಭಾರತಕ್ಕೆ ಸೋಲಾರ್ ಯೋಜನೆ ಸೇರಿದಂತೆ ನಾಲ್ಕು ಪ್ರಮುಖ ವಿಭಾಗಗಳಲ್ಲಿ ಸಾಲ ಮಂಜೂರಾಗಿರುವುದು ಉತ್ತಮ ಬೆಳವಣಿಗೆಯಾಗಿದೆ  ಎಂದು ಶಕ್ತಿಕಾಂತ್ ದಾಸ್ ಅವರು ಅಭಿಪ್ರಾಯ ಪಟ್ಟಿದ್ದಾರೆ.

ಅಭಿವೃದ್ಧಿ ಶೀಲ ರಾಷ್ಟ್ರಗಳ ಅಭಿವೃದ್ಧಿಗಾಗಿ ಮತ್ತು ವಿಶ್ವಬ್ಯಾಂಕ್ ಗೆ ಪರ್ಯಾಯವಾಗಿ ಆರಂಭವಾದ ಬ್ರಿಕ್ಸ್ ಬ್ಯಾಂಕ್ ಗೆ ಮೊದಲ ಅಧ್ಯಕ್ಷರಾಗಿ ಕನ್ನಡಿಗೆ ಕೆವಿ ಕಾಮತ್ ಆಯ್ಕೆಯಾಗಿದ್ದರು. ಇದೀಗ  ಭಾರತದ ಬಹು ಉದ್ದೇಶಿತ ಯೋಜನೆಗಳಿಗೆ ಬ್ರಿಕ್ಸ್ ಬ್ಯಾಂಕ್ ನಿಂದ ಸಾಲ ಮಂಜೂರಾಗಿರುವುದು ಭಾರತೀಯರಲ್ಲಿ ಹರ್ಷ ಮೂಡಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT