ಸಾಂದರ್ಭಿಕ ಚಿತ್ರ 
ಪ್ರಧಾನ ಸುದ್ದಿ

ರಾಷ್ಟ್ರೀಯ ಹೆದ್ದಾರಿಗಳಲ್ಲಿರುವ ಹಂಪ್ ಗಳನ್ನು ತೆಗೆಯಿರಿ : ಕೇಂದ್ರ ಸೂಚನೆ

ವೇಗದ ಮಿತಿಯನ್ನು ಕಡಿಮೆಗೊಳಿಸಲು ರಾಷ್ಟ್ರೀಯ ಹೆದ್ದಾರಿಗಳಲ್ಲಿರುವ ಹಂಪ್ ಗಳನ್ನು ತೆಗೆದು ಹಾಕುವಂತೆ ಕೇಂದ್ರ ರಸ್ತೆ ಸಾರಿಗೆ ಸಚಿವಾಲಯ ರಾಜ್ಯ ಸರ್ಕಾರ ಹಾಗೂ

ನವದೆಹಲಿ: ವೇಗದ ಮಿತಿಯನ್ನು ಕಡಿಮೆಗೊಳಿಸಲು ರಾಷ್ಟ್ರೀಯ ಹೆದ್ದಾರಿಗಳಲ್ಲಿ ಹಾಕಿರುವ ಹಂಪ್ ಗಳನ್ನು ತೆಗೆದು ಹಾಕುವಂತೆ ಕೇಂದ್ರ ರಸ್ತೆ ಸಾರಿಗೆ ಸಚಿವಾಲಯ ರಾಜ್ಯ ಸರ್ಕಾರ  ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮತ್ತು ಪಿಡಬ್ಲ್ಯುಡಿ, ಬಿಆರ್‌ಒ ಗಳಿಗೆ ನಿರ್ದೇಶನ ನೀಡಿದೆ.
 
2014ರ ರಸ್ತೆ ಅಪಘಾತ ವರದಿ ಪ್ರಕಾರ ರಸ್ತೆಯಲ್ಲಿರುವ ಹಂಪ್ ಗಳ ಕಾರಣಕ್ಕೆ ಸಂಭವಿಸಿದ ಅಪಘಾತದಲ್ಲಿ 4,726 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ ಎಂದು ಸಚಿವಾಲಯ ತಿಳಿಸಿದೆ. ಗುಂಡಿಗಳು ಮತ್ತು ವೇಗ ನಿಯಂತ್ರಕಗಳಿಂದಾಗಿ 6,672 ಮಂದಿ ಅಸು ನೀಗಿದ್ದಾರೆ ಎಂದು ವರದಿಯಲ್ಲಿ ವಿವರಿಸಲಾಗಿದೆ. ಹೀಗಾಗಿ ಇದಕ್ಕೆ ಸಂಬಂಧಿಸಿದಂತೆ ಕೈಗೊಳ್ಳಲಾಗುವ ಕ್ರಮಗಳ ಮಾಹಿತಿಯನ್ನು ಮುಂದಿನ ಬುಧವಾರ ಸಲ್ಲಿಸುವಂತೆ ಸಚಿವಾಲಯ ತಿಳಿಸಿದೆ.

ಮಾರ್ಗದರ್ಶಿ ಸೂತ್ರಗಳನ್ನು ಪ್ರಕಟಿಸಿದ್ದರೂ ಸ್ಥಳೀಯ ಪ್ರಾಧಿಕಾರಗಳು ರಾಷ್ಟ್ರೀಯ ಹೆದ್ದಾರಿಗಳಲ್ಲಿ ವೇಗ ನಿಯಂತ್ರಣಕ್ಕೆ ಹಂಪ್ ಗಳನ್ನು ಅಳವಡಿಸುವುದು ಅನಪೇಕ್ಷಿತ. ಇವು ಗಂಭೀರ ಅಪಾಯಗಳಿಗೆ ದಾರಿ ಮಾಡಿ ಕೊಡುತ್ತಿದೆ ಎಂದು ಸಚಿವಾಲಯ ಹೇಳಿದೆ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದೆಹಲಿ: ರಾಮಲೀಲಾ ಮೈದಾನದ ಮಸೀದಿ ಬಳಿ ಅತಿಕ್ರಮಣ ತೆರವು ಕಾರ್ಯಾಚರಣೆ ವೇಳೆ ಘರ್ಷಣೆ; ಪೊಲೀಸರ ಮೇಲೆ ಕಲ್ಲು ತೂರಾಟ, ಐವರಿಗೆ ಗಾಯ

ದೆಹಲಿ ಕಲ್ಲು ತೂರಾಟ ಘಟನೆ ಪೂರ್ವ ಯೋಜಿತವೇ?: FIR ದಾಖಲು; ತನಿಖೆ ಚುರುಕು

ಅಮೆರಿಕ ವೆನೆಜುವೆಲಾದಿಂದ ಮಾರುಕಟ್ಟೆ ಬೆಲೆಗೆ 30 ರಿಂದ 50 ಮಿಲಿಯನ್ ಬ್ಯಾರೆಲ್ ತೈಲ ಪಡೆಯಲಿದೆ: Donald Trump

ಎಷ್ಟು ದಿನ ಕುರ್ಚಿ ಮೇಲೆ ಕೂತಿದ್ದರು ಎನ್ನುವುದಕ್ಕಿಂತ ಆ ಸ್ಥಾನದಲ್ಲಿ ಕುಳಿತು ಮಾಡಿದ ಕೆಲಸಗಳಿಗೆ ಮಹತ್ವ ಹೆಚ್ಚು..!

ಶಿಕ್ಷಕ ಮತ್ತು ಪದವೀಧರ ಕ್ಷೇತ್ರಗಳ ಪರಿಷತ್ ಚುನಾವಣೆ: ಬಿಜೆಪಿ 3 ಸ್ಥಾನಗಳಲ್ಲಿ ಸ್ಪರ್ಧೆ ಇಂಗಿತ, ಕೋರ್ ಕಮಿಟಿಯಲ್ಲಿ ಚರ್ಚೆ

SCROLL FOR NEXT