ಅಮಿತಾಬ್ ಬಚ್ಚನ್ 
ಪ್ರಧಾನ ಸುದ್ದಿ

ಪನಾಮಾ ಪೇಪರ್ಸ್ ನಲ್ಲಿ ಬಿಗ್ ಬಿ: ಇನ್‌ಕ್ರೆಡಿಬಲ್ ಇಂಡಿಯಾ ರಾಯಭಾರಿ ಸ್ಥಾನ ಕೈ ಜಾರಲಿದೆಯೇ?

ಇನ್‌ಕ್ರೆಡಿಬಲ್ ಇಂಡಿಯಾ ಪ್ರಚಾರ ಕಾರ್ಯಕ್ರಮದ ರಾಯಭಾರಿಯಾಗಿ ಬಾಲಿವುಡ್‌ ನಟ ಅಮಿತಾಬ್ ಬಚ್ಚನ್ ಅವರನ್ನು ನೇಮಕ ಮಾಡಲಾಗಿತ್ತಾದರೂ...

ನವದೆಹಲಿ: ಇನ್‌ಕ್ರೆಡಿಬಲ್ ಇಂಡಿಯಾ ಪ್ರಚಾರ ಕಾರ್ಯಕ್ರಮದ ರಾಯಭಾರಿಯಾಗಿ ಬಾಲಿವುಡ್‌ ನಟ ಅಮಿತಾಬ್ ಬಚ್ಚನ್ ಅವರನ್ನು ನೇಮಕ ಮಾಡಲಾಗಿತ್ತಾದರೂ, ಇದೀಗ ನೇಮಕಾತಿಯ ಬಗ್ಗೆ ಅನಿಶ್ಚಿತತೆ ಮುಂದುವರಿದಿದೆ. 
ಪನಾಮಾ ಕಂಪನಿಯಾದ ಮೊಸಾಕ್ ಫೋನ್ಸಿಕಾ ಮೂಲಕ ಕಪ್ಪು ಹಣ ಸಂಗ್ರಹಿಸಿದವರ ಪಟ್ಟಿ ಬಹಿರಂಗವಾಗಿದ್ದು, ಅದರಲ್ಲಿ ಬಚ್ಚನ್ ಹೆಸರಿರುವುದೇ ಈ ಅನಿಶ್ಚಿತತೆಗೆ ಕಾರಣ ಎಂದು ಹೇಳಲಾಗುತ್ತಿದೆ.
ಪನಾಮಾ ಪೇಪರ್ಸ್ ಪಟ್ಟಿಯಲ್ಲಿ ಅಮಿತಾಬ್ ಹೆಸರಿರುವ ಕಾರಣ ಇನ್‌ಕ್ರೆಡಿಬಲ್ ಇಂಡಿಯಾ ಪ್ರಚಾರ ಕಾರ್ಯಕ್ರಮದ ರಾಯಭಾರಿ ನೇಮಕಾತಿ ಪ್ರಕ್ರಿಯೆ ವಿಳಂಬ ಮಾಡಲಾಗುತ್ತಿದೆ ಎಂಬ ಸುದ್ದಿ ಕೇಳಿ ಬಂದಿದ್ದರೂ, ಈ ಬಗ್ಗೆ ಅಧಿಕೃತ ಮಾಹಿತಿ ಲಭ್ಯವಾಗಿಲ್ಲ. 
ಪನಾಮಾ ಪೇಪರ್ಸ್ ಮೂಲಕ ಬಹಿರಂಗವಾಗಿರುವ ಕಪ್ಪು ಹಣ ಹೊಂದಿರುವವರ ಪಟ್ಟಿಯನ್ನು ಸರ್ಕಾರ ಪರಿಶೀಲಿಸುತ್ತಿದೆ. ಆದಾಗ್ಯೂ, ಇದರಲ್ಲಿ ಬಚ್ಚನ್ ಅವರ ಪಾತ್ರವೇನು? ಎಂಬುದರ ಬಗ್ಗೆ ವಿತ್ತ ಸಚಿವಾಲಯ ತನಿಖೆ ನಡೆಸುತ್ತಿದೆ. 
ಸರ್ಕಾರದ ಮಹತ್ವದ ಪ್ರಚಾರ ಕಾರ್ಯಕ್ರಮವಾಗಿರುವ ಇನ್‌ಕ್ರೆಡಿಬಲ್ ಇಂಡಿಯಾದ ರಾಯಭಾರಿಯಾಗಿದ್ದ ಶಾರುಖ್ ಖಾನ್ 'ಅಸಹಿಷ್ಣುತ'ೆ ವಿವಾದಕ್ಕೆ ಸಿಲುಕಿದ ನಂತರ ಆ ಸ್ಥಾನಕ್ಕೆ ಬಿಗ್ ಬಿ ಹೆಸರು ಸೂಚಿಸಲಾಗಿತ್ತು. ಇದೀಗ ಬಿಗ್ ಬಿ ಹೆಸರು ಪನಾಮಾ ಪೇಪರ್ಸ್ ಪಟ್ಟಿಯಲ್ಲಿರುವುದರಿಂದ ಪ್ರಸ್ತುತ ಪ್ರಚಾರ ಕಾರ್ಯಕ್ರಮದ ರಾಯಭಾರಿ ನೇಮಕಾತಿ ವಿಳಂಬವಾಗಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT