ಮುಷ್ಕರ ನಡೆಸುತ್ತಿದ್ದ ಉಪನ್ಯಾಸಕರು 
ಪ್ರಧಾನ ಸುದ್ದಿ

ಸ್ವಯಂಪ್ರೇರಿತವಾಗಿ ಪ್ರತಿಭಟನೆ ಹಿಂಪಡೆದ ಶಿಕ್ಷಕರು

ವೇತನ ತಾರತಮ್ಯ ನಿವಾರಣೆ ಹಾಗೂ ಕುಮಾರ್ ನಾಯಕ್ ವರದಿ ಜಾರಿಗೆ ಆಗ್ರಹಿಸಿ ದ್ವಿತೀಯ ಪಿಯುಸಿ ಮೌಲ್ಯಮಾಪನ ಬಹಿಷ್ಕರಿಸಿ ಪ್ರತಿಭಟನೆ ನಡೆಸುತ್ತಿರುವ ಉಪನ್ಯಾಸಕರು ಸ್ವಯಂಪ್ರೇರಿತವಾಗಿ

ಬೆಂಗಳೂರು:  ವೇತನ ತಾರತಮ್ಯ ನಿವಾರಣೆ ಹಾಗೂ ಕುಮಾರ್ ನಾಯಕ್ ವರದಿ ಜಾರಿಗೆ ಆಗ್ರಹಿಸಿ ದ್ವಿತೀಯ ಪಿಯುಸಿ ಮೌಲ್ಯಮಾಪನ ಬಹಿಷ್ಕರಿಸಿ ಪ್ರತಿಭಟನೆ ನಡೆಸುತ್ತಿರುವ ಉಪನ್ಯಾಸಕರು ಸ್ವಯಂಪ್ರೇರಿತವಾಗಿ ಮುಷ್ಕರ ಹಿಂಪಡೆದಿದ್ದು, ನಾಳೆಯಿಂದ ಮೌಲ್ಯಮಾಪನಕ್ಕೆ ಹಾಜರಾಗಲಿದ್ದಾರೆ ಎಂದು ತಿಳಿಸಿದ್ದಾರೆ. ಇದರಿಂದ ಪಿಯುಸಿ ಪರೀಕ್ಷೆ ಬರೆದು ಆತಂಕದಲ್ಲಿದ್ದ ವಿದ್ಯಾರ್ಥಿಗಳು ನಿಟ್ಟುಸಿರು ಬಿಡುವಂತಾಗಿದೆ. ಈ ವಿಷಯವನ್ನು ಪಿಯು ಉಪನ್ಯಾಸಕರ ಸಂಘದ ಅಧ್ಯಕ್ಷ ತಿಮ್ಮಯ್ಯ ಪುರ್ಲೆ ಘೋಷಿಸಿದ್ದಾರೆ.

ಇದಕ್ಕೂ ಪೂರ್ವವಾಗಿ ಪದವಿ ವೂರ್ವ ಶಿಕ್ಷಣ ಮಂಡಳಿ ಸೋಮವಾರ ಶಿಕ್ಷಕರಿಗೆ ನೋಟಿಸ್ ಜಾರಿ ಮಾಡಿ, ಶಿಸ್ತು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿತ್ತು.

ಈಗ ಪ್ರತಿಭಟನೆ ಹಿಂಪಡೆದಿರುವ ಶಿಕ್ಷಕರು ಸರ್ಕಾರದ ಭರವಸೆ ನೀಡಿದ್ದ ಒಂದು ವರ್ಷದ ಭಡ್ತಿಯನ್ನು ಕೂಡ ನಿರಾಕರಿಸಿದೆ. ರಾಜ್ಯ ಸರ್ಕಾರ ನೀಡಿರುವ ಬಿಕ್ಷಾ ರೂಪದ ಹಣ ಬೇಡ ಎಂದು ಕೂಡ ತಿಮ್ಮಯ್ಯ ಪುರ್ಲೆ ಹೇಳಿದ್ದಾರೆ.

ಕಳೆದ 17 ದಿನಗಳಿಂದ ನಗರದ ಫ್ರೀಡಂ ಪಾರ್ಕ್ ನಲ್ಲಿ ಉಪನ್ಯಾಸಕರು ಪ್ರತಿಭಟನೆ ನಡೆಸುತ್ತಿದ್ದು, ಸೋಮವಾರ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ ಪಿಯು ಬೋರ್ಡ್ ಶಾಖಾಧಿಕಾರಿ ಹಾಗೂ ಸೂಪರಿಡೆಂಟ್ ಅವರು ಪಿಯು ಉಪನ್ಯಾಸಕರ ಸಂಘದ ಅಧ್ಯಕ್ಷ ತಿಮ್ಮಯ್ಯ ಪುರ್ಲೆ ಅವರನ್ನು ಭೇಟಿ ಮಾಡಿ ನೋಟಿಸ್ ನೀಡಿದ್ದರು.

ಇನ್ನು ಪ್ರತಿಭಟನೆ ಕೈಬಿಟ್ಟು ಮೌಲ್ಯಮಾಪನಕ್ಕೆ ಹಾಜರಾಗದಿದ್ದರೆ ಉಪನ್ಯಾಸಕರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲಾಗುವುದು ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ ಅವರು ಎಚ್ಚರಿಸಿದ್ದರು.

ಪಿಯು ಉಪನ್ಯಾಸಕರ ವೇತನ ಪರಿಷ್ಕರಣೆಗೆಂದು ರಚಿಸಿದ್ದ ಕುಮಾರ್ ನಾಯಕ್ ಅವರ ಸಮಿತಿ 2001ರಲ್ಲಿ ವರದಿ ಸಲ್ಲಿಸಿದರೂ ಸಹ ಸರ್ಕಾರ ಇದರ ಅನುಷ್ಠಾನಕ್ಕೆ ಮುಂದಾಗಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿ ಪಿಯು ಉಪನ್ಯಾಸಕರು ಮೌಲ್ಯ ಮಾಪನ ಬಹಿಷ್ಕರಿಸಿ ಪ್ರತಿಭಟನೆ ನಡೆಸುತ್ತಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

CM ಕುರ್ಚಿ ಕಸರತ್ತು: ಸಮಸ್ಯೆಗೆ ಪರಿಹಾರ ಇದ್ದೇ ಇರುತ್ತದೆ, ರಾಹುಲ್-ಸೋನಿಯಾ ಜೊತೆ ಚರ್ಚಿಸಿ ಗೊಂದಲ ಬಗೆಹರಿಸುವೆ; AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ

ಕೊಟ್ಟ ಮಾತು ಉಳಿಸಿಕೊಳ್ಳುವುದೇ ವಿಶ್ವದಲ್ಲಿರುವ ದೊಡ್ಡ ಶಕ್ತಿ: ಸಿದ್ದುಗೆ ಪರೋಕ್ಷ ಟಾಂಗ್ ಕೊಟ್ಟರೇ ಡಿಕೆಶಿ..?

ಮೊದಲು ಪರಮೇಶ್ವರ್ ಕೂಲಿ ಚುಕ್ತಾ ಮಾಡಲಿ: ನಂತರ ವಿಧಾನಸಭೆ ವಿಸರ್ಜಿಸಿ ಡಿಕೆಶಿ ನೇತೃತ್ವದಲ್ಲೇ ಚುನಾವಣೆಗೆ ಹೋಗೋಣ!

ನಾವು ಬಿಟ್ಟರು ಧರ್ಮ, ಜಾತಿ ನಮ್ಮನ್ನು ಬಿಡುವುದಿಲ್ಲ: ಒಕ್ಕಲಿಗನಾಗಿ ಹುಟ್ಟಿದ್ದೇನೆ; ಅಶೋಕಣ್ಣನಿಗೆ ಬ್ಯಾಡ್ಜ್ ಕಳಿಸುತ್ತೇನೆ ಹಾಕಿಕೊಳ್ಳಲಿ; DKS

ಅಮೆರಿಕ ಶಕ್ತಿ ಕೇಂದ್ರ ಶ್ವೇತಭವನ ಬಳಿ ಇಬ್ಬರು ಯುಎಸ್ ರಾಷ್ಟ್ರೀಯ ಗಾರ್ಡ್ ಗಳ ಮೇಲೆ ಗುಂಡಿನ ದಾಳಿ: ಶಂಕಿತನ ಗುರುತು ಪತ್ತೆ

SCROLL FOR NEXT