ವೈಕೋ 
ಪ್ರಧಾನ ಸುದ್ದಿ

ಕರುಣಾನಿಧಿ ವಿರುದ್ಧ ವೈಯಕ್ತಿಕ ದಾಳಿ, ಚುನಾವಣಾ ಆಯೋಗದಿಂದ ವೈಕೋಗೆ ನೋಟಿಸ್

ಡಿಎಂಕೆ ಅಧ್ಯಕ್ಷ ಹಾಗೂ ತಮಿಳುನಾಡು ಮಾಜಿ ಮುಖ್ಯಮಂತ್ರಿ ಎಂ.ಕರುಣಾನಿಧಿ ಅವರ ವಿರುದ್ಧ ವೈಯಕ್ತಿಕ ದಾಳಿ ನಡೆಸಿದ ಆರೋಪದ ಮೇಲೆ...

ಚೆನ್ನೈ: ಡಿಎಂಕೆ ಅಧ್ಯಕ್ಷ ಹಾಗೂ ತಮಿಳುನಾಡು ಮಾಜಿ ಮುಖ್ಯಮಂತ್ರಿ ಎಂ.ಕರುಣಾನಿಧಿ ಅವರ ವಿರುದ್ಧ ವೈಯಕ್ತಿಕ ದಾಳಿ ನಡೆಸಿದ ಆರೋಪದ ಮೇಲೆ ಎಂಡಿಎಂಕೆ ಪ್ರಧಾನ ಕಾರ್ಯದರ್ಶಿ ವೈಕೋ ಅವರಿಗೆ ಬುಧವಾರ ಚುನಾವಣಾ ಆಯೋಗ ನೋಟಿಸ್ ಜಾರಿ ಮಾಡಿದೆ. ಅಲ್ಲದೆ ಇಂದು 3 ಗಂಟೆಯೊಳಗೆ ಪ್ರತಿಕ್ರಿಯೆ ಸಲ್ಲಿಸುವಂತೆ ಸೂಚಿಸಿದೆ.
ಏಪ್ರಿಲ್ 18ರಂದೇ ಮುಖ್ಯ ಚುನಾವಣಾ ಅಧಿಕಾರಿ ರಾಜೇಶ್ ಲಖೋನಿ ಅವರು ವೈಕೋ ಅವರಿಗೆ ನೋಟಿಸ್ ಜಾರಿ ಮಾಡಿದ್ದು, ಪ್ರತಿಕ್ರಿಯೆ ಸಲ್ಲಿಸುವಂತೆ ಸೂಚಿಸಿದ್ದಾರೆ.
ಕಳೆದ ಏಪ್ರಿಲ್ 6ರಂದು ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ್ದ ವೈಕೋ, ಕರುಣಾನಿಧಿ ಅವರು ರಾಜಕೀಯ ಮಾಡುವ ಬದಲು ಸೆಕ್ಸ್ ವರ್ಕ್ ನಲ್ಲಿ ಬ್ಯುಸಿಯಾಗಲಿ ಎಂದು ವಾಗ್ದಾಳಿ ನಡೆಸಿದ್ದರು, ಇದಕ್ಕೆ ಮಿತ್ರ ಪಕ್ಷಗಳು ಸೇರಿದಂತೆ ಹಲವರಿಂದ ತೀವ್ರ ಆಕ್ಷೇಪ ವ್ಯಕ್ತವಾಗಿತ್ತು. ನಂತರ ವೈಕೋ ಅವರು ಕರುಣಾನಿಧಿ ಅವರ ಬಳಿ ಬೇಷರತ್ತು ಕ್ಷಮೆಯಾಚಿಸಿದ್ದರು.
ಡಿಎಂಕೆಯಿಂದ ಹೊರಬಂದು ಎಂಡಿಎಂಕೆ ಪಕ್ಷ ಕಟ್ಟಿದ ವೈಕೋ ಅವರು 20 ವರ್ಷಗಳ ನಂತರ ಇದೇ ಮೊದಲ ಬಾರಿಗೆ ತಮಿಳುನಾಡು ವಿಧಾನಸಭೆ ಚುನಾವಣೆ ಅಖಾಡಕ್ಕೆ ಧುಮುಕಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT