ಸಾಹಿತಿ ಪುಂಡಲೀಕ ಹಾಲಂಬಿ (ಸಂಗ್ರಹ ಚಿತ್ರ) 
ಪ್ರಧಾನ ಸುದ್ದಿ

ಪುಂಡಲೀಕ ಹಾಲಂಬಿ ಅವರ ಕನ್ನಡದ ಸೇವೆ ಅಪಾರ

ಮೂಲತಃ ಉಡುಪಿ ಜಿಲ್ಲೆ ಕುಂದಾಪುರ ತಾಲ್ಲೂಕು ಹಾಲಾಡಿಯ ಚಂದ್ರಶೇಖರ ಹಾಲಂಬಿ ಮತ್ತು ವಾಸಂತಿ ದಂಪತಿಗಳ ಮಗನಾದ ಪುಂಡಲೀಕ ಹಾಲಂಬಿ ಅವರು ಜನಿಸಿದ್ದು ಹಾಸನ ಜಿಲ್ಲೆ ಅರಸೀಕೆರೆಯಲ್ಲಿ. ಪ್ರಾಥಮಿಕ ವಿದ್ಯಾಭ್ಯಾಸವನ್ನು ಅರಸೀಕೆರೆಯಲ್ಲಿ ಮುಗಿಸಿ ಬೆಂಗಳೂರಿನತ್ತ ಪಯಣ ಬೆಳೆಸಿದರು..

ಮೂಲತಃ ಉಡುಪಿ ಜಿಲ್ಲೆ ಕುಂದಾಪುರ ತಾಲ್ಲೂಕು ಹಾಲಾಡಿಯ ಚಂದ್ರಶೇಖರ ಹಾಲಂಬಿ ಮತ್ತು ವಾಸಂತಿ ದಂಪತಿಗಳ ಮಗನಾದ ಪುಂಡಲೀಕ ಹಾಲಂಬಿ ಅವರು ಜನಿಸಿದ್ದು ಹಾಸನ ಜಿಲ್ಲೆ  ಅರಸೀಕೆರೆಯಲ್ಲಿ. ಪ್ರಾಥಮಿಕ ವಿದ್ಯಾಭ್ಯಾಸವನ್ನು ಅರಸೀಕೆರೆಯಲ್ಲಿ ಮುಗಿಸಿ ಬೆಂಗಳೂರಿನತ್ತ ಪಯಣ ಬೆಳೆಸಿದರು. ಬೆಂಗಳೂರು ವಿಶ್ವವಿದ್ಯಾಲಯದಿಂದ ಕನ್ನಡ ಎಂ.ಎ. ಪದವಿಯನ್ನು ಪಡೆದ  ನಂತರ ಅದೇ ವಿಶ್ವವಿದ್ಯಾಲಯದ ಪ್ರಸಾರಾಂಗದಲ್ಲಿ ಸಂಯೋಜನಾಧಿಕಾರಿಯಾಗಿ ಸೇವೆಗೆ ಸೇರಿದರು.

ಪ್ರಸಾರಾಂಗದಲ್ಲಿ ಮೂವತ್ತಾರು ವರ್ಷಗಳ ಸಾರ್ಥಕ ಸೇವೆಯ ನಂತರ ನಿವೃತ್ತರಾದ ಹಾಲಂಬಿ ಅವರು ಬೆಂಗಳೂರು ವಿಶ್ವವಿದ್ಯಾಲಯ ಬೋಧಕೇತರ ನೌಕರರ ಸಂಘದ ಅಧ್ಯಕ್ಷರಾಗಿ ಇಪ್ಪತ್ತು  ವರ್ಷ ದುಡಿದರು. ಏಕಕಾಲಕ್ಕೆ ಹಲವಾರು ಸಂಸ್ಥೆಗಳಲ್ಲಿ ದುಡಿಯುವ ಸಾಮರ್ಥ್ಯ ಹೊಂದಿದ್ದ ಹಾಲಂಬಿ ಅವರು, ಬೆಂಗಳೂರು ವಿಶ್ವವಿದ್ಯಾಲಯ ನೌಕರರ ಗೃಹ ನಿರ್ಮಾಣ ಸಂಘದ ಅಧ್ಯಕ್ಷರಾಗಿ  ಎರಡು ಬಾರಿ ಆಯ್ಕೆಯಾಗಿದ್ದಲ್ಲದೆ ಅದೇ ಸಂಸ್ಥೆಗೆ ಮೂರು ಬಾರಿ ನಿರ್ದೇಶಕರಾಗಿಯೂ ಸೇವೆ ಸಲ್ಲಿಸಿದ್ದರು.

ಸಹಕಾರ ಕ್ಷೇತ್ರಕ್ಕೆ ಹಾಲಂಬಿ ಅವರು ಸಲ್ಲಿಸಿದ್ದ ಸೇವೆಯೂ ಗಣನೀಯವಾಗಿತ್ತು. ಹೋಟೆಲ್ ಉದ್ಯಮದಾರರ ಸಹಕಾರ ಬ್ಯಾಂಕಿನ ನಿರ್ದೆಶಕರಾಗಿ, ಗೌರವ ಕಾರ್ಯದರ್ಶಿಯಾಗಿ, ಕಾರ್ಯ  ನಿರ್ವಹಿಸಿದ ಅನುಭವದ ಮೇಲೆ 1997 ರಲ್ಲಿ ಆ ಬ್ಯಾಂಕಿನ ಅಧ್ಯಕ್ಷರಾದರು. ಇದೇ ವೇಳೆ ಹೊಟೆಲ್ ಗಳಲ್ಲಿ ಕನ್ನಡದ ಬಾವುಟ ಹಾರಿಸಿದ್ದು ಇದೇ ಹಾಲಂಬಿ ಅವರು. ಹೋಟೆಲ್ ಮತ್ತು ಬ್ಯಾಂಕು  ಕ್ಷೇತ್ರಗಳಲ್ಲಿ ಕನ್ನಡವನ್ನು ಪರಿಣಾಮಕಾರಿಯಾಗಿ ಜಾರಿಗೆ ತರುವಲ್ಲಿ ಹಾಲಂಬಿ ಅವರದ್ದು ಪ್ರಮುಖ ಪಾತ್ರವಾಗಿತ್ತು. ಬ್ಯಾಂಕಿನ ವ್ಯವಹಾರವನ್ನು ಸಂಪೂರ್ಣವಾಗಿ ಕನ್ನಡೀಕರಣ ಮಾಡಿದ್ದಲ್ಲದೆ  ಕನ್ನಡ ಸಾಹಿತಿಗಳ ಭಾವಚಿತ್ರಗಳನ್ನು ಬ್ಯಾಂಕಿನಲ್ಲಿ ತೂಗುಹಾಕುವ ಮೂಲಕ ತಮ್ಮ ಕನ್ನಡಾಭಿಮಾನವನ್ನು ಮೆರೆದರು.

ಕನ್ನಡಪರ ಚಳುವಳಿಗಳಲ್ಲಿ ಕ್ರಿಯಾತ್ಮಕವಾಗಿ ತೊಡಗಿಸಿಕೊಂಡಿದ್ದ ಹಾಲಂಬಿ ಅವರು ಬೆಂಗಳೂರಿನ ಸೆಂಟ್ರಲ್ ಕಾಲೇಜಿನ ವಿಧ್ಯಾರ್ಥಿಯಾಗಿದ್ದಾಗಿನಿಂದಲೂ ಕನ್ನಡಪರವಾಗಿ ದನಿ ಎತ್ತುತ್ತಲೇ,  ಸೆಂಟ್ರಲ್ ಕಾಲೇಜು ಕರ್ನಾಟಕ ಸಂಘದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಅಖಿಲ ಕರ್ನಾಟಕ ಕನ್ನಡಮಾಧ್ಯಮ ವಿಧ್ಯಾರ್ಥಿ ಸಮ್ಮೇಳನದ ಪ್ರಥಮ ಅಧ್ಯಕ್ಷರಾಗಿ ಹಾಲಂಬಿ ಅವರು  ನೇಮಕವಾಗಿದ್ದು ಅವರ ಕ್ರಿಯಾಶೀಲತೆಗೆ ಸಂದ ಗೌರವವಾಗಿತ್ತು. ದೊಡ್ಡಬಳ್ಳಾಪುರದ ಕನ್ನಡ ಪರ ಹೆಸರಾಂತ ಸಂಸ್ಥೆಯಾದ ಕನ್ನಡ ಜಾಗೃತ ಪರಿಷತ್ತಿನ ಉಪಾಧ್ಯಕ್ಷರಾಗಿಯೂ ಹಾಲಂಬಿ  ಅವರು ದುಡಿದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT