ಕೆ.ಮಥಾಯಿ 
ಪ್ರಧಾನ ಸುದ್ದಿ

ಬಿಬಿಎಂಪಿ ಸಹಾಯಕ ಆಯುಕ್ತ ಕೆ.ಮಥಾಯಿ ಎತ್ತಂಗಡಿ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ)ಯ ಜಾಹೀರಾತು ಹಗರಣ ಬಯಲಿಗೇಳೆದಿದ್ದ ಬಿಬಿಎಂಪಿ ಸಹಾಯಕ ಆಯುಕ್ತ ಕೆ.ಮಥಾಯಿ ಅವರನ್ನು...

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ)ಯ ಜಾಹೀರಾತು ಹಗರಣ ಬಯಲಿಗೇಳೆದಿದ್ದ ಬಿಬಿಎಂಪಿ ಸಹಾಯಕ ಆಯುಕ್ತ ಕೆ.ಮಥಾಯಿ ಅವರನ್ನು ಮಂಗಳವಾರ ಮಾತೃ ಇಲಾಖೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಗೆ ವರ್ಗಾವಣೆ ಮಾಡಲಾಗಿದೆ.
ನಿಯಮಾವಳಿಗೆ ವ್ಯತಿರಿಕ್ತವಾಗಿ ನಡೆದುಕೊಂಡ ಆರೋಪದ ಹಿನ್ನೆಲೆಯಲ್ಲಿ ಕೆ.ಮಥಾಯಿ ಅವರ ವಿರುದ್ಧ ಶಿಸ್ತು ಕ್ರಮಕ್ಕೆ ಮುಂದಾಗಿರುವ ಸರ್ಕಾರ, ತಕ್ಷಣದಿಂದಲೇ ಜಾರಿಗೆ ಬರುವಂತೆ ಅವರನ್ನು ಬಿಬಿಎಂಪಿ ಸೇವೆಯಿಂದ ಬಿಡುಗಡೆಗೊಳಿಸಿದೆ
ಕರ್ನಾಕಟ ನಾಗರಿಕ ಸೇವಾ ನಿಯಮ ಉಲ್ಲಂಘಿಸಿದ ಆರೋಪದ ಮೇಲೆ ಮಥಾಯಿ ಅವರನ್ನು ವರ್ಗಾವಣೆ ಮಾಡಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಗೆ ಆದೇಶ ಹೊರಡಿಸಿದೆ.
ಈ ಹಿಂದೆ ಮಥಾಯಿ ಅವರನ್ನು ಜಾಹೀರಾತು ವಿಭಾಗದಿಂದ ಎತ್ತಂಗಡಿ ಮಾಡಿ, ಮಾರುಕಟ್ಟೆ ವಿಭಾಗದ ಜವಾಬ್ದಾರಿ ನೀಡುವಂತೆ ಬಿಬಿಎಂಪಿ ಮೇಯರ್ ಬಿ.ಎನ್.ಮಂಜುನಾಥ್ ರೆಡ್ಡಿ ಅವರು ಆಯುಕ್ತರಿಗೆ ಶಿಫಾರಸು ಮಾಡಿದ್ದರು.
ಮಥಾಯಿ ಅವರು 2014ರಿಂದ ಬಿಬಿಎಂಪಿಯ ಜಾಹೀರಾತು ವಿಭಾಗದ ಸಹಾಯಕ ಆಯುಕ್ತರಾಗಿ ಕಾರ್ಯನಿರ್ವಹಸುತ್ತಿದ್ದರು. ಇದಕ್ಕು ಮುನ್ನ ಅವರು ರಾಜ್ಯದ ಹಲವು ಕಡೆ ಕಾರ್ಯನಿರ್ವಹಿಸಿದ್ದಾರೆ. ಅವರನ್ನು ಆರು ತಿಂಗಳಲ್ಲಿ ಮೂರು ಬಾರಿ ವರ್ಗಾವಣೆ ಮಾಡಲಾಗಿತ್ತು.
ಜಾಹೀರಾತು ವಿಭಾಗದ ಅವ್ಯವಸ್ಥೆ, ಜಾಹೀರಾತು ತೆರಿಗೆ ಸಂಗ್ರಹದ ವೈಫಲ್ಯದ ಬಗ್ಗೆ ಕೆ.ಮಥಾಯಿ ಅವರು 5 ವರದಿಗಳನ್ನು ನೀಡಿದ್ದರು. ತೆರಿಗೆ ಸಂಗ್ರಹ ವೈಫಲ್ಯದಿಂದ 2000 ಸಾವಿರ ಕೋಟಿ ನಷ್ಟ ಉಂಟಾಗಿದೆ ಎಂದು ಅವರು ವರದಿಯಲ್ಲಿ ಹೇಳಿದ್ದರು. ಅಲ್ಲದೆ ಬಿಬಿಎಂಪಿಯ ಜಾಹೀರಾತು, ಕಂದಾಯ ವಿಭಾಗದ ಅಧಿಕಾರಿಗಳು, ನೌಕರರು, ಹಿರಿಯ ಅಧಿಕಾರಿಗಳ ಅಡಳಿತ ವೈಫಲ್ಯವೇ ಈ ನಷ್ಟಕ್ಕೆ ಕಾರಣ ಎಂದು ವರದಿಯಲ್ಲಿ ಹೇಳಿದ್ದರು. ಈ ಜಾಹೀರಾತು ಹಗರಣದ ಬಗ್ಗೆ ಸಿಬಿಐ ಅಥವ ಸಿಐಡಿ ತನಿಖೆಯಾಗಬೇಕು ಎಂದು ಶಿಫಾರಸು ಮಾಡಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT