ಎಸ್.ಎಂ.ಕೃಷ್ಣ 
ಪ್ರಧಾನ ಸುದ್ದಿ

ಮದ್ದೂರು ನೀರಿನ ಯೋಜನೆಗಳನ್ನು ಪೂರ್ಣಗೊಳಿಸಿ: ಸರ್ಕಾರಕ್ಕೆ ಎಸ್ಎಂ ಕೃಷ್ಣ ಪತ್ರ

ರಾಜ್ಯದಲ್ಲಿ ತೀವ್ರ ಬರಗಾಲ ಸ್ಥಿತಿ ನಿರ್ಮಾಣವಾಗಿದ್ದು, ಇದಕ್ಕೆ ಮಂಡ್ಯ ಜಿಲ್ಲೆಯೂ ಹೊರತಲ್ಲ. ಅನೇಕ ಕಡೆ ನೀರಿಗಾಗಿ ಜನತೆ ಸಾಕಷ್ಟು ಪರದಾಡಬೇಕಾದ ಸ್ಥಿತಿ...

ಬೆಂಗಳೂರು: ರಾಜ್ಯದಲ್ಲಿ ತೀವ್ರ ಬರಗಾಲ ಸ್ಥಿತಿ ನಿರ್ಮಾಣವಾಗಿದ್ದು, ಇದಕ್ಕೆ ಮಂಡ್ಯ ಜಿಲ್ಲೆಯೂ ಹೊರತಲ್ಲ. ಅನೇಕ ಕಡೆ ನೀರಿಗಾಗಿ ಜನತೆ ಸಾಕಷ್ಟು ಪರದಾಡಬೇಕಾದ ಸ್ಥಿತಿ ಇದೆ. ನಾನು ಮುಖ್ಯಮಂತ್ರಿ ಆಗಿದ್ದಾಗ ಸಾಕಷ್ಟು ಯೋಜನೆಗಳನ್ನು ಅಲ್ಲಿನ ಜನತೆಗೆ ನೀಡಿದ್ದೆ. ಆದರೆ ಇಂದು ಸರಿಯಾದ ನಿರ್ವಹಣೆ ಇಲ್ಲದೇ ನೆನಗುದಿಗೆ ಬಿದ್ದಿವೆ. ಕೂಡಲೇ ನೀರು ಪೂರೈಕೆಗೆ ಸೂಕ್ತ ಕ್ರಮ ಕೈಗೊಳ್ಳಿ ಎಂದು ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರು ಕಾನೂನು ಹಾಗೂ ಸಂಸದೀಯ ವ್ಯವಹಾರಗಳ ಸಚಿವ ಟಿ.ಬಿ. ಜಯಚಂದ್ರ ಅವರಿಗೆ ಪತ್ರ ಬರೆದಿದ್ದಾರೆ.
ನೀವು ಹಾಗೂ ಸಂಪುಟದ ಇನ್ನಿತರ ಸಹೋದ್ಯೋಗಿಗಳ ತಂಡ ಮೈಸೂರು ವಿಭಾಗದಲ್ಲಿ ಬರ ಪ್ರವಾಸ ಕೈಗೊಂಡು, ಅಲ್ಲಿನ ಪರಿಸ್ಥಿತಿ ಏನಿದೆ ಎನ್ನುವುದನ್ನು ಅರಿತಿದ್ದೀರಿ. ಹಾಗೇಯೇ ಮಂಡ್ಯದಲ್ಲಿಯೂ ಅಧ್ಯಯನ ನಡೆಸಿ ವಾಸ್ತವ ಸ್ಥಿತಿ ಏನೆನ್ನುವುದನ್ನು ಅರಿತುಕೊಂಡಿದ್ದೀರಿ. ಜಿಲ್ಲೆಯ ಹಲವು ಹಳ್ಳಿಗಳಿಗೆ ಖುದ್ದು ತೆರಳಿ ಅಲ್ಲಿನ ಜನತೆ ಕುಡಿಯುವ ನೀರಿಗಾಗಿ ಎಷ್ಟು ಕಷ್ಟ ಅನುಭವಿಸುತ್ತಿದೆ ಎನ್ನುವುದನ್ನು, ಜಾನುವಾರುಗಳು ನೀರಿಗಾಗಿ ಎಷ್ಟು ಪರದಾಡುತ್ತಿವೆ ಎನ್ನುವುದನ್ನು ಮನಗಂಡಿರುತ್ತೀರಿ. ಕಾರಣ ಕೂಡಲೇ ಕಾರ್ಯೋನ್ಮುಖರಾಗಿ ನೆನೆಗುದಿಗೆ ಬಿದ್ದಿರುವ ನೀರಿನ ಯೋಜನೆಗಳನ್ನು ತಕ್ಷಣ ಪೂರ್ಣಗೊಳಿಸಿ. ಆತಗೂರು ಹಾಗೂ ಬಾಣೋಜಿಪಂತ್ ಏತ ನೀರಾವರಿ ಯೋಜನೆಯ ಪಂಪ್​ಗಳನ್ನು ಬದಲಾಯಿಸಿ ಕೆರೆಗಳನ್ನು ತುಂಬಿಸುವ ಕಾರ್ಯಕ್ಕೆ ಮುಂದಾಗುವಂತೆ ಮಾಜಿ ಸಿಎಂ ಮನವಿ ಮಾಡಿದ್ದಾರೆ.
ಇನ್ನು ಬನ್ನಹಳ್ಳಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಪೂರ್ಣಗೊಳಿಸುವಂತೆ ಮನವಿ ಮಾಡಿರುವ ಎಸ್​ಎಂ ಕೃಷ್ಣ, ಕೂಡಲೇ ಅಲ್ಲಿನ ಅಧಿಕಾರಿಗಳ ಸಭೆ ಕರೆದು ತುರ್ತು ನಿರ್ದೇಶನವನ್ನು ನೀಡಿ ಬರಪರಿಸ್ಥಿತಿಗೆ ಸ್ಪಂದಿಸುವಂತೆ ಸೂಚಿಸಿ ಎಂದು ಕೇಳಿಕೊಂಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT