ಸಾಂದರ್ಭಿಕ ಚಿತ್ರ 
ಪ್ರಧಾನ ಸುದ್ದಿ

100ರೂ ಲಂಚ ನೀಡಲು ನಿರಾಕರಣೆ; ಕಾರ್ಮಿಕರನ್ನು ಸಾಯುವಂತೆ ಥಳಿಸಿದ ಉತ್ತರಪ್ರದೇಶ ಪೊಲೀಸರು

100ರೂ ಲಂಚ ನೀಡಲು ನಿರಾಕರಿಸಿದ್ದಕ್ಕೆ ಇಬ್ಬರು ಮೈನ್ ಪುರಿ ಕಾರ್ಮಿಕರನ್ನು ಉತ್ತರಪ್ರದೇಶ ಪೊಲೀಸರು ಮನಬಂದಂತೆ ಥಳಿಸಿದ್ದರಿಂದ ಅವರು ಮೃತಪಟ್ಟ ಘಟನೆ ಶನಿವಾರ ಬೆಳಗ್ಗೆ ನಡೆದಿದೆ

ಮೈನ್ ಪುರಿ (ಉತ್ತರ ಪ್ರದೇಶ): 100ರೂ ಲಂಚ ನೀಡಲು ನಿರಾಕರಿಸಿದ್ದಕ್ಕೆ ಇಬ್ಬರು ಮೈನ್ ಪುರಿ ಕಾರ್ಮಿಕರನ್ನು ಉತ್ತರಪ್ರದೇಶ ಪೊಲೀಸರು ಮನಬಂದಂತೆ ಥಳಿಸಿದ್ದರಿಂದ ಅವರು ಮೃತಪಟ್ಟ ಘಟನೆ ಶನಿವಾರ ಬೆಳಗ್ಗೆ ನಡೆದಿದೆ ಎಂದು ಆರೋಪಿಸಲಾಗಿದೆ. 
ಐದು ಕಾರ್ಮಿಕರಲ್ಲಿ ಒಬ್ಬರು ಹೇಳುವಂತೆ ಪೊಲೀಸ್ ಅಧಿಕಾರಿಗಳು ಪ್ರತಿದಿನ ಈ ಪ್ರದೇಶದಲ್ಲಿ ಲಂಚ ತೆಗೆದುಕೊಳ್ಳಲು ಬರುತ್ತಾರೆ "ನಾವು ಲಂಚ ನೀಡಲು ನಿರಾಕರಿಸಿದ್ದಕ್ಕೆ ನಾಲ್ಕು ಜನ ಪೊಲೀಸರು ನಮ್ಮನ್ನು ಪೊಲೀಸ್ ಠಾಣೆಗೆ ಕರೆದೊಯ್ದರು. ಅವರು ನಮಗೆ ಕೆಟ್ಟ ರೀತಿಯಲ್ಲಿ ಥಳಿಸಿದರು" ಎಂದು ಬೀರಬಲ್ ಎನ್ನುವ ಕಾರ್ಮಿಕ ಹೇಳಿದ್ದಾರೆ. 
ಆರೋಪಿ ಪೊಲೀಸ್ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ತೆಗೆದುಕೊಳ್ಳಲಾಗುವುದು ಎಂದು  ಮೈನ್ ಪುರಿ ಪೊಲೀಸ್ ಸೂಪರಿಂಟೆಂಡೆಂಟ್ ದೇವರಾಜನ್ ವರ್ಮಾ ಹೇಳಿದ್ದರೆ. 
"ಎಫ್ ಐ ಆರ್ ದಾಖಲಿಸಿ ತನಿಖೆ ನಡೆಸಲಿದ್ದೇವೆ ಮತ್ತು ಆರೋಪಿಗಳ ವಿರುದ್ಧ ಶಿಸ್ತು ಕ್ರಮ ತೆಗೆದುಕೊಳ್ಳಲಿದ್ದೇವೆ" ಎಂದು ವರ್ಮಾ ವರದಿಗಾರರಿಗೆ ತಿಳಿಸಿದ್ದಾರೆ. 
"ಸುಮಾರು ಬೆಳಗ್ಗೆ 4 ಘಂಟೆಗೆ ಈ ಘಟನೆ ನಡೆದಿದೆ. ಇತ್ತೀಚಿನ ದಿನಗಳಲ್ಲಿ ಕಳ್ಳತನದ ಘಟನೆಗಳು ವರದಿಯಾಗಿದ್ದರಿಂದ ಪೊಲೀಸರು ಗಸ್ತು ನಡೆಸುತ್ತಿದ್ದರು. ಪೊಲೀಸ್ ಅಡೆಗೆ ಇಟ್ಟಿಗೆ ತುಂಬಿದ ಟ್ರ್ಯಾಕ್ಟರ್ ಢಿಕ್ಕಿ ಹೊಡೆದಿದೆ. ಆಗ ಪೊಲೀಸರು ಟ್ರ್ಯಾಕ್ಟರ್ ನಿಲ್ಲಿಸಿ ತಪಾಸಣೆಗೆ ಮುಂದಾಗಿದ್ದರು" ಎಂದು ಕೂಡ ಅವರು ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

ನಾಳೆ ಜಗತ್ತಿನಾದ್ಯಂತ ಯಶ್ ನಟನೆಯ 'Toxic' ಚಿತ್ರ ಬಿಡುಗಡೆ; ಇಂದು ದಿಢೀರ್ ಕೋರ್ಟ್ ಮೆಟ್ಟಿಲೇರಿದ ನಿರ್ಮಾಪಕ!

ಬೆಂಗಳೂರು: ಸಿಗ್ನಲ್‌ನಲ್ಲಿ ನಿಂತಿದ್ದ ಬೈಕ್‌ಗೆ ವೇಗವಾಗಿ ಬಂದ ಕಾರು ಡಿಕ್ಕಿ, ಹೇರ್ ಸ್ಟೈಲಿಸ್ಟ್ ಸಾವು; Video

BPSC ಪರೀಕ್ಷೆ ವಿವಾದ: ಬಿಹಾರ ಸಿಎಂ ನಿವಾಸದ ಬಳಿ ಬ್ಯಾರಿಕೇಡ್ ಮುರಿದ ವಿದ್ಯಾರ್ಥಿಗಳು, ಜಲಫಿರಂಗಿಗೆ ಜಗ್ಗದೆ ರೇನ್ ಡ್ಯಾನ್ಸ್ ಮಾಡಿ ಪ್ರತಿಭಟನೆ!

'ಕಾಂಗ್ರೆಸ್ ಸರ್ಕಾರದ ವೈಫಲ್ಯ' ವಿರೋಧಿಸಿ ಸೆಪ್ಟೆಂಬರ್ 1 ರಿಂದ 10ರವರೆಗೆ ರಾಯಚೂರಿನಿಂದ ಬಳ್ಳಾರಿಗೆ BJP-JDS ಪಾದಯಾತ್ರೆ!