ಸಾಂದರ್ಭಿಕ ಚಿತ್ರ 
ಪ್ರಧಾನ ಸುದ್ದಿ

ಕಾಶ್ಮೀರದಲ್ಲಿ ಶಾಂತಿಗಾಗಿ ಪ್ರಧಾನಿ ಮೋದಿ ಮನವಿ

ಜಮ್ಮು ಮತ್ತು ಕಾಶ್ಮೀರದಲ್ಲಿ ಶಾಂತಿ ನೆಲಸಲು ಸಹಕರಿಸುವಂತೆ ಅಲ್ಲಿನ ನಾಗರಿಕರಿಗೆ ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಮನವಿ ಮಾಡಿದ್ದಾರೆ. ಜನರ ತೊಂದರೆಗಳಿಗೆ ಅಭಿವೃದ್ಧಿ ಮಾರ್ಗದ...

ಅಲಿರಾಜಪುರ (ಮಧ್ಯಪ್ರದೇಶ): ಜಮ್ಮು ಮತ್ತು ಕಾಶ್ಮೀರದಲ್ಲಿ ಶಾಂತಿ ನೆಲಸಲು ಸಹಕರಿಸುವಂತೆ ಅಲ್ಲಿನ ನಾಗರಿಕರಿಗೆ ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಮನವಿ ಮಾಡಿದ್ದಾರೆ. ಜನರ ತೊಂದರೆಗಳಿಗೆ ಅಭಿವೃದ್ಧಿ ಮಾರ್ಗದ ಪರಿಹಾರಗಳನ್ನು ನೀಡುವತ್ತ ತಮ್ಮ ಸರ್ಕಾರ ಗಮನ ಹರಿಸಿರುವುದಾಗಿ ಅವರು ತಿಳಿಸಿದ್ದಾರೆ. 
"ಮೆಹಬೂಬಾ ಅವರ ಜಮ್ಮು ಮತ್ತು ಕಾಶ್ಮೀರ ಸರ್ಕಾರವಾಗಲಿ, ಕೇಂದ್ರ ಸರ್ಕಾರವಾಗಲಿ ಎಲ್ಲ ತೊಂದರೆಗಳಿಗೂ ಅಭಿವೃದ್ಧಿ ಮಾರ್ಗದಲ್ಲಿ ಪರಿಹಾರಗಳನ್ನು ಕಂಡುಹಿಡಿಯುತ್ತಿದ್ದೇವೆ" ಎಂದು ಮೋದಿ ಹೇಳಿದ್ದಾರೆ.
"ಕೇವಲ ಬೆರಳಣಿಕೆಯಷ್ಟು ಜನರಿಗೆ ಮಾತ್ರ ತಪ್ಪು ಗ್ರಹಿಕೆ ಮೂಡುವಂತೆ ಮಾಡಲಾಗಿದೆ" ಎಂದಿರುವ ಅವರು ಅವರಷ್ಟೇ ಕಾಶ್ಮೀರದಲ್ಲಿನ ತೊಂದರೆಗೆ ಕಾರಣ ಎಂದಿದ್ದಾರೆ. ಜುಲೈ 8 ರಂದು ಹಿಜಬುಲ್ ಮುಜಾಹಿದ್ದೀನ್ ಸಂಘಟನೆಯ ಕಮಾಂಡರ್ ಬುರ್ಹಾನ್ ವಾನಿಯ ಹತ್ಯೆಯ ನಂತರ ನಡೆದ ಪ್ರತಿಭಟನೆ ಮತ್ತು ಹಿಂಸೆಯಲ್ಲಿ 55 ಜನ ಮೃತಪಟ್ಟು ಸಾವಿರಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ. 
"ಕೆಲವು ಜನ ಕಾಶ್ಮೀರಕ್ಕೆ ಹೆಚ್ಚಿನ ತೊಂದರೆ ತಂದೊಡ್ಡುತ್ತಿದ್ದಾರೆ" ಎಂದಿರುವ ಪ್ರಧಾನಿ "ಕಾಶ್ಮೀರಕ್ಕೆ ಶಾಂತಿ ಬೇಕಾಗಿದೆ. ಅವರ ಜೀವನ ಸುಧಾರಿಸಿಕೊಳ್ಳಲು ಕಾಶ್ಮೀರಿಗಳಿಗೆ ಏನು ಬೇಕೋ ಅದನ್ನು ಕೇಂದ್ರ ಸರ್ಕಾರ ಪೂರೈಸುತ್ತದೆ" ಎಂದು ಪ್ರಧಾನಿ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಬ್ರೇಕ್ ಫಾಸ್ಟ್ ಮೀಟಿಂಗ್: ಯಾವುದೇ ನೋವಿಲ್ಲ, ಮನಃಪೂರ್ವಕವಾಗಿ ರಾಜೀನಾಮೆ ನೀಡುತ್ತಿದ್ದೇನೆ; ಸಿದ್ದರಾಮಯ್ಯ ಘೋಷಣೆ

ಮೋದಿಯವರ ಇತ್ತೀಚಿನ ಫಾರಿನ್ ಟ್ರಿಪ್ಪಿನಿಂದ ಭಾರತಕ್ಕೇನು ಲಾಭ? (ಹಣಕ್ಲಾಸು)

ಕಾಂಗ್ರೆಸ್‌ ಪವರ್ ಪಾಲಿಟಿಕ್ಸ್‌ಗೆ ಮತ್ತೊಂದು ಟ್ವಿಸ್ಟ್: ರಾಜ್ಯಪಾಲರ ಭೇಟಿಗೆ ಸಿದ್ದರಾಮಯ್ಯ ಸಮಯ ಕೇಳಿಲ್ಲ; ರಾಜೀನಾಮೆ ಊಹಾಪೋಹಕ್ಕೆ ಲೋಕಭವನ ಸ್ಪಷ್ಟನೆ..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

SCROLL FOR NEXT