ಸಾಂದರ್ಭಿಕ ಚಿತ್ರ 
ಪ್ರಧಾನ ಸುದ್ದಿ

ಕಾಶ್ಮೀರದಲ್ಲಿ ಶಾಂತಿಗಾಗಿ ಪ್ರಧಾನಿ ಮೋದಿ ಮನವಿ

ಜಮ್ಮು ಮತ್ತು ಕಾಶ್ಮೀರದಲ್ಲಿ ಶಾಂತಿ ನೆಲಸಲು ಸಹಕರಿಸುವಂತೆ ಅಲ್ಲಿನ ನಾಗರಿಕರಿಗೆ ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಮನವಿ ಮಾಡಿದ್ದಾರೆ. ಜನರ ತೊಂದರೆಗಳಿಗೆ ಅಭಿವೃದ್ಧಿ ಮಾರ್ಗದ...

ಅಲಿರಾಜಪುರ (ಮಧ್ಯಪ್ರದೇಶ): ಜಮ್ಮು ಮತ್ತು ಕಾಶ್ಮೀರದಲ್ಲಿ ಶಾಂತಿ ನೆಲಸಲು ಸಹಕರಿಸುವಂತೆ ಅಲ್ಲಿನ ನಾಗರಿಕರಿಗೆ ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಮನವಿ ಮಾಡಿದ್ದಾರೆ. ಜನರ ತೊಂದರೆಗಳಿಗೆ ಅಭಿವೃದ್ಧಿ ಮಾರ್ಗದ ಪರಿಹಾರಗಳನ್ನು ನೀಡುವತ್ತ ತಮ್ಮ ಸರ್ಕಾರ ಗಮನ ಹರಿಸಿರುವುದಾಗಿ ಅವರು ತಿಳಿಸಿದ್ದಾರೆ. 
"ಮೆಹಬೂಬಾ ಅವರ ಜಮ್ಮು ಮತ್ತು ಕಾಶ್ಮೀರ ಸರ್ಕಾರವಾಗಲಿ, ಕೇಂದ್ರ ಸರ್ಕಾರವಾಗಲಿ ಎಲ್ಲ ತೊಂದರೆಗಳಿಗೂ ಅಭಿವೃದ್ಧಿ ಮಾರ್ಗದಲ್ಲಿ ಪರಿಹಾರಗಳನ್ನು ಕಂಡುಹಿಡಿಯುತ್ತಿದ್ದೇವೆ" ಎಂದು ಮೋದಿ ಹೇಳಿದ್ದಾರೆ.
"ಕೇವಲ ಬೆರಳಣಿಕೆಯಷ್ಟು ಜನರಿಗೆ ಮಾತ್ರ ತಪ್ಪು ಗ್ರಹಿಕೆ ಮೂಡುವಂತೆ ಮಾಡಲಾಗಿದೆ" ಎಂದಿರುವ ಅವರು ಅವರಷ್ಟೇ ಕಾಶ್ಮೀರದಲ್ಲಿನ ತೊಂದರೆಗೆ ಕಾರಣ ಎಂದಿದ್ದಾರೆ. ಜುಲೈ 8 ರಂದು ಹಿಜಬುಲ್ ಮುಜಾಹಿದ್ದೀನ್ ಸಂಘಟನೆಯ ಕಮಾಂಡರ್ ಬುರ್ಹಾನ್ ವಾನಿಯ ಹತ್ಯೆಯ ನಂತರ ನಡೆದ ಪ್ರತಿಭಟನೆ ಮತ್ತು ಹಿಂಸೆಯಲ್ಲಿ 55 ಜನ ಮೃತಪಟ್ಟು ಸಾವಿರಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ. 
"ಕೆಲವು ಜನ ಕಾಶ್ಮೀರಕ್ಕೆ ಹೆಚ್ಚಿನ ತೊಂದರೆ ತಂದೊಡ್ಡುತ್ತಿದ್ದಾರೆ" ಎಂದಿರುವ ಪ್ರಧಾನಿ "ಕಾಶ್ಮೀರಕ್ಕೆ ಶಾಂತಿ ಬೇಕಾಗಿದೆ. ಅವರ ಜೀವನ ಸುಧಾರಿಸಿಕೊಳ್ಳಲು ಕಾಶ್ಮೀರಿಗಳಿಗೆ ಏನು ಬೇಕೋ ಅದನ್ನು ಕೇಂದ್ರ ಸರ್ಕಾರ ಪೂರೈಸುತ್ತದೆ" ಎಂದು ಪ್ರಧಾನಿ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

ಪಾಕಿಸ್ತಾನ-ಅಫ್ಘಾನಿಸ್ತಾನ ಯುದ್ಧ: 58 ಪಾಕ್ ಸೈನಿಕರು ಹತ, ತಾಲಿಬಾನ್ ಸರ್ಕಾರದ 'ದೊಡ್ಡ' ಹೇಳಿಕೆ

ಭಾರತ- ಬಾಂಗ್ಲಾದೇಶ ಗಡಿ: ರೂ. 2.82 ಕೋಟಿ ಮೌಲ್ಯದ 'ಚಿನ್ನದ ಬಿಸ್ಕತ್ತು' ಜೊತೆಗೆ ಕಳ್ಳಸಾಗಣೆದಾರನನ್ನು ಬಂಧಿಸಿದ BSF!

ದೇಶದ ಮುಸ್ಲಿಂರನ್ನು ಗುರಿಯಾಗಿಸಿಕೊಳ್ಳುವ ಬಿಜೆಪಿ ಅಫ್ಘಾನಿಸ್ತಾನದ ಜೊತೆ ಸಂಬಂಧ ಬೆಳೆಸುವುದು 'ಬೂಟಾಟಿಕೆ': ಮೆಹಬೂಬಾ ಮುಫ್ತಿ

'ಬ್ಲೂ ಸ್ಟಾರ್ ಆಪರೇಷನ್' ಕಾರ್ಯಾಚರಣೆ ತಪ್ಪಿಗೆ ಇಂದಿರಾ ಗಾಂಧಿ ಪ್ರಾಣ ತೆತ್ತರು: ಪಿ ಚಿದಂಬರಂ

SCROLL FOR NEXT